Advertisement
MIRROR FOCUS

Arecanut | ಅಡಿಕೆಯಿಂದ ತಯಾರಾಗುತ್ತಿದೆ ಎನರ್ಜಿ ಡ್ರಿಂಕ್…!‌ |

Share

ವಿಶ್ವದಲ್ಲಿ ಅಡಿಕೆ ಹೆಚ್ಚು ಬೆಳೆಯುವ ದೇಶ ಭಾರತ. ಹಾಗಿದ್ದರೂ ಇಂದಿಗೂ ಅಡಿಕೆ ಹಾನಿಕಾರಕ ಎಂಬ ಹಣೆಪಟ್ಟಿಯಿಂದ ಹೊರಬಂದಿಲ್ಲ. ಸರ್ಕಾರ, ಇಲಾಖೆ, ಅಧಿಕಾರಿಗಳ ನಡುವೆ ತಾಕಲಾಟ ನಡೆಯುತ್ತಲೇ ಇದೆ. ಆದರೆ ಪುಟ್ಟ ದೇಶ ವಿಯೆಟ್ನಾಂನಲ್ಲಿ ಅಡಿಕೆಯಿಂದ ಎನರ್ಜಿ ಡ್ರಿಂಕ್‌ ತಯಾರಾಗಿ ಮಾರಾಟವಾಗುತ್ತಿದೆ . ಒಂದಲ್ಲ ಮೂರು ಬಗೆಯ ಎನರ್ಜಿ ಡ್ರಿಂಕ್‌ ಅಡಿಕೆಯಿಂದಲೇ ತಯಾರಾಗುತ್ತಿದೆ.

Advertisement

ವಿಯೆಟ್ನಾಂ ದೇಶದಲ್ಲಿ ವಿವಿಧ ಬಗೆಯ ಕೃಷಿ ಉತ್ಪನ್ನಗಳು ತಯಾರಾಗುತ್ತಿದೆ. ಅದರಲ್ಲಿ ಅಡಿಕೆಯ ಎನರ್ಜಿ ಡ್ರಿಂಕ್‌ ಕೂಡಾ ಒಂದು. ಎಳೆ ಅಡಿಕೆಯಿಂದ ಈ ಡ್ರಿಂಕ್‌ ತಯಾರು ಮಾಡಲಾಗುತ್ತಿದೆ. 250 ಎಂಎಲ್‌ ನ ಬಾಟಲಿಯಲ್ಲಿ ವಿಯೆಟ್ನಾಂನಲ್ಲಿ ಈ ಡ್ರಿಂಕ್‌ ಮಾರುಕಟ್ಟೆಗೆ ಸರಬರಾಜು ಮಾಡಲಾಗುತ್ತಿದೆ. 24 ತಿಂಗಳು ಬಾಳ್ವಿಕೆಯನ್ನು ಈ ಡ್ರಿಂಕ್‌ ಹೊಂದಿದೆ.ಕಳೆದ ಒಂದರಡು ವರ್ಷಗಳಿಂದ ಈ ಡ್ರಿಂಕ್‌ ವಿಯೆಟ್ನಾಂ ಮಾರುಕಟ್ಟೆಯಲ್ಲಿ ಹಾಗೂ ಇತರೆಡೆಗೂ ಸರಬರಾಜಾಗುತ್ತಿದೆ.

ಅಡಿಕೆ ವಿಶ್ವದೆಲ್ಲೆಡೆ ಬಳಕೆಯಲ್ಲಿದ್ದರೂ ಅಡಿಕೆ ತಿನ್ನುವುದು  ಹಾನಿಕಾರಕ ಎಂಬ ಅಪವಾದಗಳು ಕೇಳುತ್ತಲೇ ಇದೆ. ಈಚೆಗೆ ಚೀನಾದಲ್ಲಿ ಯುವ ಗಾಯಕನೊಬ್ಬ ಕ್ಯಾನ್ಸರ್‌ ನಿಂದ ನಿಧನರಾದ ಬಳಿಕ ಅಡಿಕೆ ಹಾನಿಕಾರಕ ಎಂದು ವ್ಯಾಪಕವಾಗಿ ಹಬ್ಬಿತು.

ಆದರೆ ಅಡಿಕೆಯ ಬಳಕೆ ವಿವಿಧ ರೂಪದಲ್ಲಿದೆ. ಅಡಿಕೆಯ ಎನರ್ಜಿ ಡ್ರಿಂಕ್‌ ಈಗ ಹೆಚ್ಚು ಗಮನ ಸೆಳೆದಿದೆ. ಅದಕ್ಕೂ ಮೊದಲು ರಾಜ್ಯದಲ್ಲಿ ನಿವೇದನ್‌  ಎಂಬವರು ಅಡಿಕೆ ಚಹಾ ತಯಾರಿಸಿ ದೇಶ ವಿದೇಶದ ಗಮನ ಸೆಳೆದಿದ್ದರು. ಅಡಿಕೆಯ ಪರ್ಯಾಯ ಬಳಕೆಯ ಕಡೆಗೆ ಭಾರತದಲ್ಲಿ ಕೂಡಾ ಅತೀ ಅಗತ್ಯವಾಗಿ ಅಧ್ಯಯನಗಳು ನಡೆಯಬೇಕಾಗಿದೆ.

ಅಡಿಕೆಯ ಪರ್ಯಾಯ ಬಳಕೆಯ ಕಡೆಗೆ ಇಂದು ಗಮನಹರಿಸಬೇಕಾದ ಅಗತ್ಯ ಇದೆ. ಅಡಿಕೆಯಿಂದ ಸಾಕಷ್ಟು ಬಗೆಯ ಉತ್ಪನ್ನಗಳನ್ನು ತಯಾರು ಮಾಡಲು ಸಾಧ್ಯವಿದೆ. ಇದಕ್ಕಾಗಿ ಎಲ್ಲರೂ ಒಂದಾಗಿ ಗಮನಹರಿಸಬೇಕಾದ ಅಗತ್ಯ ಇದೆ. ಅಡಿಕೆ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡಾ.
ಶ್ರೀ ಪಡ್ರೆ, ಸಂಪಾದಕರು,ಅಡಿಕೆ ಪತ್ರಿಕೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

4 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

4 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

10 hours ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

1 day ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

2 days ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

2 days ago