Advertisement
MIRROR FOCUS

Arecanut | ಅಡಿಕೆಯಿಂದ ತಯಾರಾಗುತ್ತಿದೆ ಎನರ್ಜಿ ಡ್ರಿಂಕ್…!‌ |

Share

ವಿಶ್ವದಲ್ಲಿ ಅಡಿಕೆ ಹೆಚ್ಚು ಬೆಳೆಯುವ ದೇಶ ಭಾರತ. ಹಾಗಿದ್ದರೂ ಇಂದಿಗೂ ಅಡಿಕೆ ಹಾನಿಕಾರಕ ಎಂಬ ಹಣೆಪಟ್ಟಿಯಿಂದ ಹೊರಬಂದಿಲ್ಲ. ಸರ್ಕಾರ, ಇಲಾಖೆ, ಅಧಿಕಾರಿಗಳ ನಡುವೆ ತಾಕಲಾಟ ನಡೆಯುತ್ತಲೇ ಇದೆ. ಆದರೆ ಪುಟ್ಟ ದೇಶ ವಿಯೆಟ್ನಾಂನಲ್ಲಿ ಅಡಿಕೆಯಿಂದ ಎನರ್ಜಿ ಡ್ರಿಂಕ್‌ ತಯಾರಾಗಿ ಮಾರಾಟವಾಗುತ್ತಿದೆ . ಒಂದಲ್ಲ ಮೂರು ಬಗೆಯ ಎನರ್ಜಿ ಡ್ರಿಂಕ್‌ ಅಡಿಕೆಯಿಂದಲೇ ತಯಾರಾಗುತ್ತಿದೆ.

ವಿಯೆಟ್ನಾಂ ದೇಶದಲ್ಲಿ ವಿವಿಧ ಬಗೆಯ ಕೃಷಿ ಉತ್ಪನ್ನಗಳು ತಯಾರಾಗುತ್ತಿದೆ. ಅದರಲ್ಲಿ ಅಡಿಕೆಯ ಎನರ್ಜಿ ಡ್ರಿಂಕ್‌ ಕೂಡಾ ಒಂದು. ಎಳೆ ಅಡಿಕೆಯಿಂದ ಈ ಡ್ರಿಂಕ್‌ ತಯಾರು ಮಾಡಲಾಗುತ್ತಿದೆ. 250 ಎಂಎಲ್‌ ನ ಬಾಟಲಿಯಲ್ಲಿ ವಿಯೆಟ್ನಾಂನಲ್ಲಿ ಈ ಡ್ರಿಂಕ್‌ ಮಾರುಕಟ್ಟೆಗೆ ಸರಬರಾಜು ಮಾಡಲಾಗುತ್ತಿದೆ. 24 ತಿಂಗಳು ಬಾಳ್ವಿಕೆಯನ್ನು ಈ ಡ್ರಿಂಕ್‌ ಹೊಂದಿದೆ.ಕಳೆದ ಒಂದರಡು ವರ್ಷಗಳಿಂದ ಈ ಡ್ರಿಂಕ್‌ ವಿಯೆಟ್ನಾಂ ಮಾರುಕಟ್ಟೆಯಲ್ಲಿ ಹಾಗೂ ಇತರೆಡೆಗೂ ಸರಬರಾಜಾಗುತ್ತಿದೆ.

ಅಡಿಕೆ ವಿಶ್ವದೆಲ್ಲೆಡೆ ಬಳಕೆಯಲ್ಲಿದ್ದರೂ ಅಡಿಕೆ ತಿನ್ನುವುದು  ಹಾನಿಕಾರಕ ಎಂಬ ಅಪವಾದಗಳು ಕೇಳುತ್ತಲೇ ಇದೆ. ಈಚೆಗೆ ಚೀನಾದಲ್ಲಿ ಯುವ ಗಾಯಕನೊಬ್ಬ ಕ್ಯಾನ್ಸರ್‌ ನಿಂದ ನಿಧನರಾದ ಬಳಿಕ ಅಡಿಕೆ ಹಾನಿಕಾರಕ ಎಂದು ವ್ಯಾಪಕವಾಗಿ ಹಬ್ಬಿತು.

ಆದರೆ ಅಡಿಕೆಯ ಬಳಕೆ ವಿವಿಧ ರೂಪದಲ್ಲಿದೆ. ಅಡಿಕೆಯ ಎನರ್ಜಿ ಡ್ರಿಂಕ್‌ ಈಗ ಹೆಚ್ಚು ಗಮನ ಸೆಳೆದಿದೆ. ಅದಕ್ಕೂ ಮೊದಲು ರಾಜ್ಯದಲ್ಲಿ ನಿವೇದನ್‌  ಎಂಬವರು ಅಡಿಕೆ ಚಹಾ ತಯಾರಿಸಿ ದೇಶ ವಿದೇಶದ ಗಮನ ಸೆಳೆದಿದ್ದರು. ಅಡಿಕೆಯ ಪರ್ಯಾಯ ಬಳಕೆಯ ಕಡೆಗೆ ಭಾರತದಲ್ಲಿ ಕೂಡಾ ಅತೀ ಅಗತ್ಯವಾಗಿ ಅಧ್ಯಯನಗಳು ನಡೆಯಬೇಕಾಗಿದೆ.

ಅಡಿಕೆಯ ಪರ್ಯಾಯ ಬಳಕೆಯ ಕಡೆಗೆ ಇಂದು ಗಮನಹರಿಸಬೇಕಾದ ಅಗತ್ಯ ಇದೆ. ಅಡಿಕೆಯಿಂದ ಸಾಕಷ್ಟು ಬಗೆಯ ಉತ್ಪನ್ನಗಳನ್ನು ತಯಾರು ಮಾಡಲು ಸಾಧ್ಯವಿದೆ. ಇದಕ್ಕಾಗಿ ಎಲ್ಲರೂ ಒಂದಾಗಿ ಗಮನಹರಿಸಬೇಕಾದ ಅಗತ್ಯ ಇದೆ. ಅಡಿಕೆ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡಾ.
ಶ್ರೀ ಪಡ್ರೆ, ಸಂಪಾದಕರು,ಅಡಿಕೆ ಪತ್ರಿಕೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

5 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

6 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

7 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago