Advertisement
MIRROR FOCUS

Arecanut | ಅಡಿಕೆಯಿಂದ ತಯಾರಾಗುತ್ತಿದೆ ಎನರ್ಜಿ ಡ್ರಿಂಕ್…!‌ |

Share

ವಿಶ್ವದಲ್ಲಿ ಅಡಿಕೆ ಹೆಚ್ಚು ಬೆಳೆಯುವ ದೇಶ ಭಾರತ. ಹಾಗಿದ್ದರೂ ಇಂದಿಗೂ ಅಡಿಕೆ ಹಾನಿಕಾರಕ ಎಂಬ ಹಣೆಪಟ್ಟಿಯಿಂದ ಹೊರಬಂದಿಲ್ಲ. ಸರ್ಕಾರ, ಇಲಾಖೆ, ಅಧಿಕಾರಿಗಳ ನಡುವೆ ತಾಕಲಾಟ ನಡೆಯುತ್ತಲೇ ಇದೆ. ಆದರೆ ಪುಟ್ಟ ದೇಶ ವಿಯೆಟ್ನಾಂನಲ್ಲಿ ಅಡಿಕೆಯಿಂದ ಎನರ್ಜಿ ಡ್ರಿಂಕ್‌ ತಯಾರಾಗಿ ಮಾರಾಟವಾಗುತ್ತಿದೆ . ಒಂದಲ್ಲ ಮೂರು ಬಗೆಯ ಎನರ್ಜಿ ಡ್ರಿಂಕ್‌ ಅಡಿಕೆಯಿಂದಲೇ ತಯಾರಾಗುತ್ತಿದೆ.

Advertisement
Advertisement

ವಿಯೆಟ್ನಾಂ ದೇಶದಲ್ಲಿ ವಿವಿಧ ಬಗೆಯ ಕೃಷಿ ಉತ್ಪನ್ನಗಳು ತಯಾರಾಗುತ್ತಿದೆ. ಅದರಲ್ಲಿ ಅಡಿಕೆಯ ಎನರ್ಜಿ ಡ್ರಿಂಕ್‌ ಕೂಡಾ ಒಂದು. ಎಳೆ ಅಡಿಕೆಯಿಂದ ಈ ಡ್ರಿಂಕ್‌ ತಯಾರು ಮಾಡಲಾಗುತ್ತಿದೆ. 250 ಎಂಎಲ್‌ ನ ಬಾಟಲಿಯಲ್ಲಿ ವಿಯೆಟ್ನಾಂನಲ್ಲಿ ಈ ಡ್ರಿಂಕ್‌ ಮಾರುಕಟ್ಟೆಗೆ ಸರಬರಾಜು ಮಾಡಲಾಗುತ್ತಿದೆ. 24 ತಿಂಗಳು ಬಾಳ್ವಿಕೆಯನ್ನು ಈ ಡ್ರಿಂಕ್‌ ಹೊಂದಿದೆ.ಕಳೆದ ಒಂದರಡು ವರ್ಷಗಳಿಂದ ಈ ಡ್ರಿಂಕ್‌ ವಿಯೆಟ್ನಾಂ ಮಾರುಕಟ್ಟೆಯಲ್ಲಿ ಹಾಗೂ ಇತರೆಡೆಗೂ ಸರಬರಾಜಾಗುತ್ತಿದೆ.

Advertisement

ಅಡಿಕೆ ವಿಶ್ವದೆಲ್ಲೆಡೆ ಬಳಕೆಯಲ್ಲಿದ್ದರೂ ಅಡಿಕೆ ತಿನ್ನುವುದು  ಹಾನಿಕಾರಕ ಎಂಬ ಅಪವಾದಗಳು ಕೇಳುತ್ತಲೇ ಇದೆ. ಈಚೆಗೆ ಚೀನಾದಲ್ಲಿ ಯುವ ಗಾಯಕನೊಬ್ಬ ಕ್ಯಾನ್ಸರ್‌ ನಿಂದ ನಿಧನರಾದ ಬಳಿಕ ಅಡಿಕೆ ಹಾನಿಕಾರಕ ಎಂದು ವ್ಯಾಪಕವಾಗಿ ಹಬ್ಬಿತು.

ಆದರೆ ಅಡಿಕೆಯ ಬಳಕೆ ವಿವಿಧ ರೂಪದಲ್ಲಿದೆ. ಅಡಿಕೆಯ ಎನರ್ಜಿ ಡ್ರಿಂಕ್‌ ಈಗ ಹೆಚ್ಚು ಗಮನ ಸೆಳೆದಿದೆ. ಅದಕ್ಕೂ ಮೊದಲು ರಾಜ್ಯದಲ್ಲಿ ನಿವೇದನ್‌  ಎಂಬವರು ಅಡಿಕೆ ಚಹಾ ತಯಾರಿಸಿ ದೇಶ ವಿದೇಶದ ಗಮನ ಸೆಳೆದಿದ್ದರು. ಅಡಿಕೆಯ ಪರ್ಯಾಯ ಬಳಕೆಯ ಕಡೆಗೆ ಭಾರತದಲ್ಲಿ ಕೂಡಾ ಅತೀ ಅಗತ್ಯವಾಗಿ ಅಧ್ಯಯನಗಳು ನಡೆಯಬೇಕಾಗಿದೆ.

Advertisement
ಅಡಿಕೆಯ ಪರ್ಯಾಯ ಬಳಕೆಯ ಕಡೆಗೆ ಇಂದು ಗಮನಹರಿಸಬೇಕಾದ ಅಗತ್ಯ ಇದೆ. ಅಡಿಕೆಯಿಂದ ಸಾಕಷ್ಟು ಬಗೆಯ ಉತ್ಪನ್ನಗಳನ್ನು ತಯಾರು ಮಾಡಲು ಸಾಧ್ಯವಿದೆ. ಇದಕ್ಕಾಗಿ ಎಲ್ಲರೂ ಒಂದಾಗಿ ಗಮನಹರಿಸಬೇಕಾದ ಅಗತ್ಯ ಇದೆ. ಅಡಿಕೆ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡಾ.
ಶ್ರೀ ಪಡ್ರೆ, ಸಂಪಾದಕರು,ಅಡಿಕೆ ಪತ್ರಿಕೆ
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!

ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…

26 mins ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

2 hours ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

2 hours ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

17 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

17 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

22 hours ago