ಅಡಿಕೆ ಕೃಷಿಕ ಆತ್ಮಹತ್ಯೆ | ಅಡಿಕೆ ಎಲೆಚುಕ್ಕಿ ಹಾಗೂ ಸಾಲಬಾಧೆ ಕಾರಣವೇ ?

October 8, 2022
11:35 AM

ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಅಡಿಕೆ ಬೆಳೆಗಾರನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ಹಾಗೂ ಇತ್ತೀಚೆಗೆ ಅಡಿಕೆ ಮರವು ಎಲೆಚುಕ್ಕೆರೋಗದಿಂದ ಅಡಿಕೆ ಫಸಲು ನಾಶವಾಗುತ್ತಿತ್ತು. ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂದು ಸಂದೇಹ ವ್ಯಕ್ತವಾಗಿದೆ. ಕರಿಮನೆ ಗ್ರಾಪಂ ಕಿಳಂದೂರು ಗ್ರಾಮದ ಕೃಷ್ಣಪ್ಪಗೌಡ (60) ಮೃತ ವ್ಯಕ್ತಿ.

ಅಡಿಕೆ ತೋಟ ಮತ್ತು ಭತ್ತದ ಕೃಷಿ ಮಾಡಿಕೊಂಡಿದ್ದ ಕೃಷ್ಣಪ್ಪಗೌಡ ಎಂಬವರು  ಅವರ ಸಹೋದರ ಯೋಗೇಂದ್ರ ಗೌಡ ಜಂಟಿ ಹೆಸರಿನಲ್ಲಿ 4 ಎಕರೆ 11 ಗುಂಟೆ, ಕೃಷ್ಣಪ್ಪಗೌಡ ಹೆಸರಿನಲ್ಲಿ 2 ಎಕರೆ 20 ಗುಂಟೆ ಜಮೀನು ಹೊಂದಿದ್ದರು. ಎಲೆಚುಕ್ಕೆ ರೋಗದಿಂದ ಅಡಿಕೆ ತೋಟ ಸಂಪೂರ್ಣ ಹಾಳಾಗಿದ್ದು ತೊಂದರೆಗೆ ಸಿಲುಕಿದ್ದರು. ಕೃಷಿ ಅಭಿವೃದ್ಧಿಗಾಗಿ ಬ್ಯಾಂಕ್‌ ಗಳಲ್ಲಿ ಸಾಲ ಮಾಡಿದ್ದರು. ಅಡಿಕೆ ಬೆಳೆ ಎಲೆಚುಕ್ಕೆ ರೋಗಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಮಾಡಿದ ಸಾಲ ಹೇಗೆ ತೀರಿಸೋದು ಎಂದು ಯೋಚನೆಗೀಡಾಗಿ‌ ಮನೆಯಲ್ಲಿ ಹೇಳಿಕೊಂಡಿದ್ದರು. ಈ ಕಾರಣವೇ ನಮ್ಮ ತಂದೆಯ ಆತ್ಮಹತ್ಯೆಗೆ ಕಾರಣ. ಅದು ಬಿಟ್ಟು ಬೇರೆ ಯಾವುದೇ ಕಾರಣ ಇರಲಿಲ್ಲ ಎಂದು ಅವರ ಮಗ ಸತೀಶ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು  ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror