ಅಡಿಕೆ ಕೃಷಿಕ ಆತ್ಮಹತ್ಯೆ | ಅಡಿಕೆ ಎಲೆಚುಕ್ಕಿ ಹಾಗೂ ಸಾಲಬಾಧೆ ಕಾರಣವೇ ?

October 8, 2022
11:35 AM

ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಅಡಿಕೆ ಬೆಳೆಗಾರನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ಹಾಗೂ ಇತ್ತೀಚೆಗೆ ಅಡಿಕೆ ಮರವು ಎಲೆಚುಕ್ಕೆರೋಗದಿಂದ ಅಡಿಕೆ ಫಸಲು ನಾಶವಾಗುತ್ತಿತ್ತು. ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂದು ಸಂದೇಹ ವ್ಯಕ್ತವಾಗಿದೆ. ಕರಿಮನೆ ಗ್ರಾಪಂ ಕಿಳಂದೂರು ಗ್ರಾಮದ ಕೃಷ್ಣಪ್ಪಗೌಡ (60) ಮೃತ ವ್ಯಕ್ತಿ.

ಅಡಿಕೆ ತೋಟ ಮತ್ತು ಭತ್ತದ ಕೃಷಿ ಮಾಡಿಕೊಂಡಿದ್ದ ಕೃಷ್ಣಪ್ಪಗೌಡ ಎಂಬವರು  ಅವರ ಸಹೋದರ ಯೋಗೇಂದ್ರ ಗೌಡ ಜಂಟಿ ಹೆಸರಿನಲ್ಲಿ 4 ಎಕರೆ 11 ಗುಂಟೆ, ಕೃಷ್ಣಪ್ಪಗೌಡ ಹೆಸರಿನಲ್ಲಿ 2 ಎಕರೆ 20 ಗುಂಟೆ ಜಮೀನು ಹೊಂದಿದ್ದರು. ಎಲೆಚುಕ್ಕೆ ರೋಗದಿಂದ ಅಡಿಕೆ ತೋಟ ಸಂಪೂರ್ಣ ಹಾಳಾಗಿದ್ದು ತೊಂದರೆಗೆ ಸಿಲುಕಿದ್ದರು. ಕೃಷಿ ಅಭಿವೃದ್ಧಿಗಾಗಿ ಬ್ಯಾಂಕ್‌ ಗಳಲ್ಲಿ ಸಾಲ ಮಾಡಿದ್ದರು. ಅಡಿಕೆ ಬೆಳೆ ಎಲೆಚುಕ್ಕೆ ರೋಗಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಮಾಡಿದ ಸಾಲ ಹೇಗೆ ತೀರಿಸೋದು ಎಂದು ಯೋಚನೆಗೀಡಾಗಿ‌ ಮನೆಯಲ್ಲಿ ಹೇಳಿಕೊಂಡಿದ್ದರು. ಈ ಕಾರಣವೇ ನಮ್ಮ ತಂದೆಯ ಆತ್ಮಹತ್ಯೆಗೆ ಕಾರಣ. ಅದು ಬಿಟ್ಟು ಬೇರೆ ಯಾವುದೇ ಕಾರಣ ಇರಲಿಲ್ಲ ಎಂದು ಅವರ ಮಗ ಸತೀಶ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು  ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror