ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಅಡಿಕೆ ಬೆಳೆಗಾರನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ಹಾಗೂ ಇತ್ತೀಚೆಗೆ ಅಡಿಕೆ ಮರವು ಎಲೆಚುಕ್ಕೆರೋಗದಿಂದ ಅಡಿಕೆ ಫಸಲು ನಾಶವಾಗುತ್ತಿತ್ತು. ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂದು ಸಂದೇಹ ವ್ಯಕ್ತವಾಗಿದೆ. ಕರಿಮನೆ ಗ್ರಾಪಂ ಕಿಳಂದೂರು ಗ್ರಾಮದ ಕೃಷ್ಣಪ್ಪಗೌಡ (60) ಮೃತ ವ್ಯಕ್ತಿ.
ಅಡಿಕೆ ತೋಟ ಮತ್ತು ಭತ್ತದ ಕೃಷಿ ಮಾಡಿಕೊಂಡಿದ್ದ ಕೃಷ್ಣಪ್ಪಗೌಡ ಎಂಬವರು ಅವರ ಸಹೋದರ ಯೋಗೇಂದ್ರ ಗೌಡ ಜಂಟಿ ಹೆಸರಿನಲ್ಲಿ 4 ಎಕರೆ 11 ಗುಂಟೆ, ಕೃಷ್ಣಪ್ಪಗೌಡ ಹೆಸರಿನಲ್ಲಿ 2 ಎಕರೆ 20 ಗುಂಟೆ ಜಮೀನು ಹೊಂದಿದ್ದರು. ಎಲೆಚುಕ್ಕೆ ರೋಗದಿಂದ ಅಡಿಕೆ ತೋಟ ಸಂಪೂರ್ಣ ಹಾಳಾಗಿದ್ದು ತೊಂದರೆಗೆ ಸಿಲುಕಿದ್ದರು. ಕೃಷಿ ಅಭಿವೃದ್ಧಿಗಾಗಿ ಬ್ಯಾಂಕ್ ಗಳಲ್ಲಿ ಸಾಲ ಮಾಡಿದ್ದರು. ಅಡಿಕೆ ಬೆಳೆ ಎಲೆಚುಕ್ಕೆ ರೋಗಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಮಾಡಿದ ಸಾಲ ಹೇಗೆ ತೀರಿಸೋದು ಎಂದು ಯೋಚನೆಗೀಡಾಗಿ ಮನೆಯಲ್ಲಿ ಹೇಳಿಕೊಂಡಿದ್ದರು. ಈ ಕಾರಣವೇ ನಮ್ಮ ತಂದೆಯ ಆತ್ಮಹತ್ಯೆಗೆ ಕಾರಣ. ಅದು ಬಿಟ್ಟು ಬೇರೆ ಯಾವುದೇ ಕಾರಣ ಇರಲಿಲ್ಲ ಎಂದು ಅವರ ಮಗ ಸತೀಶ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…