Advertisement
ಕೃಷಿ

ಅಡಿಕೆ ಕೃಷಿಕ ಆತ್ಮಹತ್ಯೆ | ಅಡಿಕೆ ಎಲೆಚುಕ್ಕಿ ಹಾಗೂ ಸಾಲಬಾಧೆ ಕಾರಣವೇ ?

Share

ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಅಡಿಕೆ ಬೆಳೆಗಾರನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ಹಾಗೂ ಇತ್ತೀಚೆಗೆ ಅಡಿಕೆ ಮರವು ಎಲೆಚುಕ್ಕೆರೋಗದಿಂದ ಅಡಿಕೆ ಫಸಲು ನಾಶವಾಗುತ್ತಿತ್ತು. ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂದು ಸಂದೇಹ ವ್ಯಕ್ತವಾಗಿದೆ. ಕರಿಮನೆ ಗ್ರಾಪಂ ಕಿಳಂದೂರು ಗ್ರಾಮದ ಕೃಷ್ಣಪ್ಪಗೌಡ (60) ಮೃತ ವ್ಯಕ್ತಿ.

ಅಡಿಕೆ ತೋಟ ಮತ್ತು ಭತ್ತದ ಕೃಷಿ ಮಾಡಿಕೊಂಡಿದ್ದ ಕೃಷ್ಣಪ್ಪಗೌಡ ಎಂಬವರು  ಅವರ ಸಹೋದರ ಯೋಗೇಂದ್ರ ಗೌಡ ಜಂಟಿ ಹೆಸರಿನಲ್ಲಿ 4 ಎಕರೆ 11 ಗುಂಟೆ, ಕೃಷ್ಣಪ್ಪಗೌಡ ಹೆಸರಿನಲ್ಲಿ 2 ಎಕರೆ 20 ಗುಂಟೆ ಜಮೀನು ಹೊಂದಿದ್ದರು. ಎಲೆಚುಕ್ಕೆ ರೋಗದಿಂದ ಅಡಿಕೆ ತೋಟ ಸಂಪೂರ್ಣ ಹಾಳಾಗಿದ್ದು ತೊಂದರೆಗೆ ಸಿಲುಕಿದ್ದರು. ಕೃಷಿ ಅಭಿವೃದ್ಧಿಗಾಗಿ ಬ್ಯಾಂಕ್‌ ಗಳಲ್ಲಿ ಸಾಲ ಮಾಡಿದ್ದರು. ಅಡಿಕೆ ಬೆಳೆ ಎಲೆಚುಕ್ಕೆ ರೋಗಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಮಾಡಿದ ಸಾಲ ಹೇಗೆ ತೀರಿಸೋದು ಎಂದು ಯೋಚನೆಗೀಡಾಗಿ‌ ಮನೆಯಲ್ಲಿ ಹೇಳಿಕೊಂಡಿದ್ದರು. ಈ ಕಾರಣವೇ ನಮ್ಮ ತಂದೆಯ ಆತ್ಮಹತ್ಯೆಗೆ ಕಾರಣ. ಅದು ಬಿಟ್ಟು ಬೇರೆ ಯಾವುದೇ ಕಾರಣ ಇರಲಿಲ್ಲ ಎಂದು ಅವರ ಮಗ ಸತೀಶ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು  ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

6 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

7 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

9 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

11 hours ago