ಅಡಿಕೆ ಕೃಷಿಯ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ |

October 27, 2022
9:53 PM
ಅಡಿಕೆ ಪರೀಕ್ಷೆ ನಡೆಸಿದ ಅಂದಿನ ಅಧಿಕಾರಿಗಳು ವಿರುದ್ಧವಾದ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ, ಈಗ ಅಡಿಕೆಗೆ ವಿವಿಧ ರೋಗಗಳು ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಮೇಲೆ ತೂಗುಗತ್ತಿ ಇದೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯ  ಕೃಷಿಯ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ನ ನೂತನ ಸಭಾಭವನ ಹಾಗೂ ಬೈತಡ್ಕ ಗೆಜ್ಜರ್ಮೆ 5 ಕೋಟಿಯ ರಸ್ತೆ ಕಾಮಗಾರಿ, ಜನೌಷಧಿ ಕೇಂದ್ರ ಉದ್ಘಾಟಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.
ಅಡಿಕೆ ಆಮದು ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ. ಆದರೆ ಅಡಿಕೆ ಮೇಲೆ ಇತರ ತೂಗುಗತ್ತಿ  ಇದೆ. ಅಡಿಕೆಯ ಹಾನಿ ಅಥವಾ ವಿಷಕಾರಿ ಅಂಶಗಳ ಪಟ್ಟಿಗೆ ಸೇರಿಸುವುದಿಲ್ಲ.  ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದೇವೆ ಆದರೆ ಸುಪ್ರಿಂ ಕೋರ್ಟ್ ನ ತೂಗುಗತ್ತಿ ಅಡಿಕೆ ಮೇಲೆ ಸದಾ ಇದೆ ಎಂದು ಸಚಿವೆ ಹೇಳಿದರು.  ಈ ನಡುವೆಯೇ ಅಡಿಕೆ ಕೃಷಿಗೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗ ಭಾಧಿಸಿದೆ.ವಿಜ್ಞಾನಿಗಳೂ ಸೇರಿದಂತೆ ಹಲವು ಸಂಶೋಧನೆ ನಡೆಯುತ್ತಿದೆ. ಹೊಸ ಹೊಸ ರೋಗಗಳು ಅಡಿಕೆಯನ್ನು ಬಾಧಿಸುತ್ತವೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯವಾಗಿ ತಾಳೆ ಕೃಷಿ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಎಚ್ಚರಿಸಿದರು.
ಭಾರತದಲ್ಲಿ ಎಲ್ಲಾ ತಿನ್ನುವ ಆಹಾರಗಳನ್ನು  ಯಥೇಚ್ಛವಾಗಿ ಬೆಳೆಯುತ್ತೇವೆ,  ಆದರೆ ಅಡುಗೆಗೆ ಎಣ್ಣೆ ಉಪಯೋಗಿಸುವ ಎಣ್ಣೆಗಳನ್ನು ಹೊರದೇಶದಿಂದ ತರುತ್ತೇವೆ. ಇಲ್ಲಿಯ ಅಡಿಕೆ ಕೃಷಿಕರು ಅಡುಗೆ ಎಣ್ಣೆಯ ಕೃಷಿಯಾದ ತಾಳೆ ಕೃಷಿಗೆ ಹೆಚ್ಚು ಮಹತ್ವ ಕೊಟ್ಟು ಅದನ್ನು ಬೆಳೆಸಬೇಕು, ಸ್ವಲ್ಪ ಜಾಗದಲ್ಲಿ ತಾಳೆ ಬೆಳೆಸಿ ಎಂದು ಶೋಭಾ ಅಡಿಕೆ ಕೃಷಿಕರಿಗೆ ಮನವಿ ಮಾಡಿದರು.
ಸಭಾಧ್ಯಕ್ಷತೆ ವಹಿಸಿದ್ದ  ಮೀನುಗಾರಿಕಾ ಸಚಿವ ಅಂಗಾರ ಮಾತನಾಡಿ ಅಡಿಕೆ ಕೃಷಿಗೆ ಹಳದಿ ಹಾಗೂ ಎಲೆಚುಕ್ಕೆ ರೋಗದ ನಂತರ ಬದಲಿ ಕೃಷಿ ಬಗ್ಗೆ ಯೋಚನೆ ಮಾಡಬೇಕು ಎಂದರು.  ಒಳನಾಡ ಮೀನು ಸಾಕಾಣಿಕೆ, ಬಯೋಪ್ಲಾಕ್ ಮೀನುಗಾರಿಕೆ  ಬಗ್ಗೆ ಮಾಹಿತಿ ನೀಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror