Advertisement
ಸುದ್ದಿಗಳು

ಅಡಿಕೆ ಕೃಷಿಯ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ |

Share
ಅಡಿಕೆ ಪರೀಕ್ಷೆ ನಡೆಸಿದ ಅಂದಿನ ಅಧಿಕಾರಿಗಳು ವಿರುದ್ಧವಾದ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ, ಈಗ ಅಡಿಕೆಗೆ ವಿವಿಧ ರೋಗಗಳು ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಮೇಲೆ ತೂಗುಗತ್ತಿ ಇದೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯ  ಕೃಷಿಯ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ನ ನೂತನ ಸಭಾಭವನ ಹಾಗೂ ಬೈತಡ್ಕ ಗೆಜ್ಜರ್ಮೆ 5 ಕೋಟಿಯ ರಸ್ತೆ ಕಾಮಗಾರಿ, ಜನೌಷಧಿ ಕೇಂದ್ರ ಉದ್ಘಾಟಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.
ಅಡಿಕೆ ಆಮದು ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ. ಆದರೆ ಅಡಿಕೆ ಮೇಲೆ ಇತರ ತೂಗುಗತ್ತಿ  ಇದೆ. ಅಡಿಕೆಯ ಹಾನಿ ಅಥವಾ ವಿಷಕಾರಿ ಅಂಶಗಳ ಪಟ್ಟಿಗೆ ಸೇರಿಸುವುದಿಲ್ಲ.  ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದೇವೆ ಆದರೆ ಸುಪ್ರಿಂ ಕೋರ್ಟ್ ನ ತೂಗುಗತ್ತಿ ಅಡಿಕೆ ಮೇಲೆ ಸದಾ ಇದೆ ಎಂದು ಸಚಿವೆ ಹೇಳಿದರು.  ಈ ನಡುವೆಯೇ ಅಡಿಕೆ ಕೃಷಿಗೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗ ಭಾಧಿಸಿದೆ.ವಿಜ್ಞಾನಿಗಳೂ ಸೇರಿದಂತೆ ಹಲವು ಸಂಶೋಧನೆ ನಡೆಯುತ್ತಿದೆ. ಹೊಸ ಹೊಸ ರೋಗಗಳು ಅಡಿಕೆಯನ್ನು ಬಾಧಿಸುತ್ತವೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯವಾಗಿ ತಾಳೆ ಕೃಷಿ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಎಚ್ಚರಿಸಿದರು.
ಭಾರತದಲ್ಲಿ ಎಲ್ಲಾ ತಿನ್ನುವ ಆಹಾರಗಳನ್ನು  ಯಥೇಚ್ಛವಾಗಿ ಬೆಳೆಯುತ್ತೇವೆ,  ಆದರೆ ಅಡುಗೆಗೆ ಎಣ್ಣೆ ಉಪಯೋಗಿಸುವ ಎಣ್ಣೆಗಳನ್ನು ಹೊರದೇಶದಿಂದ ತರುತ್ತೇವೆ. ಇಲ್ಲಿಯ ಅಡಿಕೆ ಕೃಷಿಕರು ಅಡುಗೆ ಎಣ್ಣೆಯ ಕೃಷಿಯಾದ ತಾಳೆ ಕೃಷಿಗೆ ಹೆಚ್ಚು ಮಹತ್ವ ಕೊಟ್ಟು ಅದನ್ನು ಬೆಳೆಸಬೇಕು, ಸ್ವಲ್ಪ ಜಾಗದಲ್ಲಿ ತಾಳೆ ಬೆಳೆಸಿ ಎಂದು ಶೋಭಾ ಅಡಿಕೆ ಕೃಷಿಕರಿಗೆ ಮನವಿ ಮಾಡಿದರು.
ಸಭಾಧ್ಯಕ್ಷತೆ ವಹಿಸಿದ್ದ  ಮೀನುಗಾರಿಕಾ ಸಚಿವ ಅಂಗಾರ ಮಾತನಾಡಿ ಅಡಿಕೆ ಕೃಷಿಗೆ ಹಳದಿ ಹಾಗೂ ಎಲೆಚುಕ್ಕೆ ರೋಗದ ನಂತರ ಬದಲಿ ಕೃಷಿ ಬಗ್ಗೆ ಯೋಚನೆ ಮಾಡಬೇಕು ಎಂದರು.  ಒಳನಾಡ ಮೀನು ಸಾಕಾಣಿಕೆ, ಬಯೋಪ್ಲಾಕ್ ಮೀನುಗಾರಿಕೆ  ಬಗ್ಗೆ ಮಾಹಿತಿ ನೀಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

15 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago