ಸುದ್ದಿಗಳು

ಅಡಿಕೆ ಕೃಷಿಯ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ |

Share
ಅಡಿಕೆ ಪರೀಕ್ಷೆ ನಡೆಸಿದ ಅಂದಿನ ಅಧಿಕಾರಿಗಳು ವಿರುದ್ಧವಾದ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ, ಈಗ ಅಡಿಕೆಗೆ ವಿವಿಧ ರೋಗಗಳು ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಮೇಲೆ ತೂಗುಗತ್ತಿ ಇದೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯ  ಕೃಷಿಯ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ನ ನೂತನ ಸಭಾಭವನ ಹಾಗೂ ಬೈತಡ್ಕ ಗೆಜ್ಜರ್ಮೆ 5 ಕೋಟಿಯ ರಸ್ತೆ ಕಾಮಗಾರಿ, ಜನೌಷಧಿ ಕೇಂದ್ರ ಉದ್ಘಾಟಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.
ಅಡಿಕೆ ಆಮದು ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ. ಆದರೆ ಅಡಿಕೆ ಮೇಲೆ ಇತರ ತೂಗುಗತ್ತಿ  ಇದೆ. ಅಡಿಕೆಯ ಹಾನಿ ಅಥವಾ ವಿಷಕಾರಿ ಅಂಶಗಳ ಪಟ್ಟಿಗೆ ಸೇರಿಸುವುದಿಲ್ಲ.  ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದೇವೆ ಆದರೆ ಸುಪ್ರಿಂ ಕೋರ್ಟ್ ನ ತೂಗುಗತ್ತಿ ಅಡಿಕೆ ಮೇಲೆ ಸದಾ ಇದೆ ಎಂದು ಸಚಿವೆ ಹೇಳಿದರು.  ಈ ನಡುವೆಯೇ ಅಡಿಕೆ ಕೃಷಿಗೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗ ಭಾಧಿಸಿದೆ.ವಿಜ್ಞಾನಿಗಳೂ ಸೇರಿದಂತೆ ಹಲವು ಸಂಶೋಧನೆ ನಡೆಯುತ್ತಿದೆ. ಹೊಸ ಹೊಸ ರೋಗಗಳು ಅಡಿಕೆಯನ್ನು ಬಾಧಿಸುತ್ತವೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯವಾಗಿ ತಾಳೆ ಕೃಷಿ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಎಚ್ಚರಿಸಿದರು.
ಭಾರತದಲ್ಲಿ ಎಲ್ಲಾ ತಿನ್ನುವ ಆಹಾರಗಳನ್ನು  ಯಥೇಚ್ಛವಾಗಿ ಬೆಳೆಯುತ್ತೇವೆ,  ಆದರೆ ಅಡುಗೆಗೆ ಎಣ್ಣೆ ಉಪಯೋಗಿಸುವ ಎಣ್ಣೆಗಳನ್ನು ಹೊರದೇಶದಿಂದ ತರುತ್ತೇವೆ. ಇಲ್ಲಿಯ ಅಡಿಕೆ ಕೃಷಿಕರು ಅಡುಗೆ ಎಣ್ಣೆಯ ಕೃಷಿಯಾದ ತಾಳೆ ಕೃಷಿಗೆ ಹೆಚ್ಚು ಮಹತ್ವ ಕೊಟ್ಟು ಅದನ್ನು ಬೆಳೆಸಬೇಕು, ಸ್ವಲ್ಪ ಜಾಗದಲ್ಲಿ ತಾಳೆ ಬೆಳೆಸಿ ಎಂದು ಶೋಭಾ ಅಡಿಕೆ ಕೃಷಿಕರಿಗೆ ಮನವಿ ಮಾಡಿದರು.
ಸಭಾಧ್ಯಕ್ಷತೆ ವಹಿಸಿದ್ದ  ಮೀನುಗಾರಿಕಾ ಸಚಿವ ಅಂಗಾರ ಮಾತನಾಡಿ ಅಡಿಕೆ ಕೃಷಿಗೆ ಹಳದಿ ಹಾಗೂ ಎಲೆಚುಕ್ಕೆ ರೋಗದ ನಂತರ ಬದಲಿ ಕೃಷಿ ಬಗ್ಗೆ ಯೋಚನೆ ಮಾಡಬೇಕು ಎಂದರು.  ಒಳನಾಡ ಮೀನು ಸಾಕಾಣಿಕೆ, ಬಯೋಪ್ಲಾಕ್ ಮೀನುಗಾರಿಕೆ  ಬಗ್ಗೆ ಮಾಹಿತಿ ನೀಡಿದರು.
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

12 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

12 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

12 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

20 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

20 hours ago