ಸುದ್ದಿಗಳು

ಅಡಿಕೆ ಕೃಷಿಯ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಅಡಿಕೆ ಪರೀಕ್ಷೆ ನಡೆಸಿದ ಅಂದಿನ ಅಧಿಕಾರಿಗಳು ವಿರುದ್ಧವಾದ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ, ಈಗ ಅಡಿಕೆಗೆ ವಿವಿಧ ರೋಗಗಳು ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಮೇಲೆ ತೂಗುಗತ್ತಿ ಇದೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯ  ಕೃಷಿಯ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ನ ನೂತನ ಸಭಾಭವನ ಹಾಗೂ ಬೈತಡ್ಕ ಗೆಜ್ಜರ್ಮೆ 5 ಕೋಟಿಯ ರಸ್ತೆ ಕಾಮಗಾರಿ, ಜನೌಷಧಿ ಕೇಂದ್ರ ಉದ್ಘಾಟಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.
ಅಡಿಕೆ ಆಮದು ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ. ಆದರೆ ಅಡಿಕೆ ಮೇಲೆ ಇತರ ತೂಗುಗತ್ತಿ  ಇದೆ. ಅಡಿಕೆಯ ಹಾನಿ ಅಥವಾ ವಿಷಕಾರಿ ಅಂಶಗಳ ಪಟ್ಟಿಗೆ ಸೇರಿಸುವುದಿಲ್ಲ.  ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದೇವೆ ಆದರೆ ಸುಪ್ರಿಂ ಕೋರ್ಟ್ ನ ತೂಗುಗತ್ತಿ ಅಡಿಕೆ ಮೇಲೆ ಸದಾ ಇದೆ ಎಂದು ಸಚಿವೆ ಹೇಳಿದರು.  ಈ ನಡುವೆಯೇ ಅಡಿಕೆ ಕೃಷಿಗೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗ ಭಾಧಿಸಿದೆ.ವಿಜ್ಞಾನಿಗಳೂ ಸೇರಿದಂತೆ ಹಲವು ಸಂಶೋಧನೆ ನಡೆಯುತ್ತಿದೆ. ಹೊಸ ಹೊಸ ರೋಗಗಳು ಅಡಿಕೆಯನ್ನು ಬಾಧಿಸುತ್ತವೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯವಾಗಿ ತಾಳೆ ಕೃಷಿ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಎಚ್ಚರಿಸಿದರು.
ಭಾರತದಲ್ಲಿ ಎಲ್ಲಾ ತಿನ್ನುವ ಆಹಾರಗಳನ್ನು  ಯಥೇಚ್ಛವಾಗಿ ಬೆಳೆಯುತ್ತೇವೆ,  ಆದರೆ ಅಡುಗೆಗೆ ಎಣ್ಣೆ ಉಪಯೋಗಿಸುವ ಎಣ್ಣೆಗಳನ್ನು ಹೊರದೇಶದಿಂದ ತರುತ್ತೇವೆ. ಇಲ್ಲಿಯ ಅಡಿಕೆ ಕೃಷಿಕರು ಅಡುಗೆ ಎಣ್ಣೆಯ ಕೃಷಿಯಾದ ತಾಳೆ ಕೃಷಿಗೆ ಹೆಚ್ಚು ಮಹತ್ವ ಕೊಟ್ಟು ಅದನ್ನು ಬೆಳೆಸಬೇಕು, ಸ್ವಲ್ಪ ಜಾಗದಲ್ಲಿ ತಾಳೆ ಬೆಳೆಸಿ ಎಂದು ಶೋಭಾ ಅಡಿಕೆ ಕೃಷಿಕರಿಗೆ ಮನವಿ ಮಾಡಿದರು.
ಸಭಾಧ್ಯಕ್ಷತೆ ವಹಿಸಿದ್ದ  ಮೀನುಗಾರಿಕಾ ಸಚಿವ ಅಂಗಾರ ಮಾತನಾಡಿ ಅಡಿಕೆ ಕೃಷಿಗೆ ಹಳದಿ ಹಾಗೂ ಎಲೆಚುಕ್ಕೆ ರೋಗದ ನಂತರ ಬದಲಿ ಕೃಷಿ ಬಗ್ಗೆ ಯೋಚನೆ ಮಾಡಬೇಕು ಎಂದರು.  ಒಳನಾಡ ಮೀನು ಸಾಕಾಣಿಕೆ, ಬಯೋಪ್ಲಾಕ್ ಮೀನುಗಾರಿಕೆ  ಬಗ್ಗೆ ಮಾಹಿತಿ ನೀಡಿದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

22 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

23 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

23 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

1 day ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

2 days ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

2 days ago