Advertisement
ಸುದ್ದಿಗಳು

ಅಡಿಕೆ ಕೃಷಿಯ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ |

Share
ಅಡಿಕೆ ಪರೀಕ್ಷೆ ನಡೆಸಿದ ಅಂದಿನ ಅಧಿಕಾರಿಗಳು ವಿರುದ್ಧವಾದ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ, ಈಗ ಅಡಿಕೆಗೆ ವಿವಿಧ ರೋಗಗಳು ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಮೇಲೆ ತೂಗುಗತ್ತಿ ಇದೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯ  ಕೃಷಿಯ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ನ ನೂತನ ಸಭಾಭವನ ಹಾಗೂ ಬೈತಡ್ಕ ಗೆಜ್ಜರ್ಮೆ 5 ಕೋಟಿಯ ರಸ್ತೆ ಕಾಮಗಾರಿ, ಜನೌಷಧಿ ಕೇಂದ್ರ ಉದ್ಘಾಟಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.
ಅಡಿಕೆ ಆಮದು ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ. ಆದರೆ ಅಡಿಕೆ ಮೇಲೆ ಇತರ ತೂಗುಗತ್ತಿ  ಇದೆ. ಅಡಿಕೆಯ ಹಾನಿ ಅಥವಾ ವಿಷಕಾರಿ ಅಂಶಗಳ ಪಟ್ಟಿಗೆ ಸೇರಿಸುವುದಿಲ್ಲ.  ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದೇವೆ ಆದರೆ ಸುಪ್ರಿಂ ಕೋರ್ಟ್ ನ ತೂಗುಗತ್ತಿ ಅಡಿಕೆ ಮೇಲೆ ಸದಾ ಇದೆ ಎಂದು ಸಚಿವೆ ಹೇಳಿದರು.  ಈ ನಡುವೆಯೇ ಅಡಿಕೆ ಕೃಷಿಗೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗ ಭಾಧಿಸಿದೆ.ವಿಜ್ಞಾನಿಗಳೂ ಸೇರಿದಂತೆ ಹಲವು ಸಂಶೋಧನೆ ನಡೆಯುತ್ತಿದೆ. ಹೊಸ ಹೊಸ ರೋಗಗಳು ಅಡಿಕೆಯನ್ನು ಬಾಧಿಸುತ್ತವೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯವಾಗಿ ತಾಳೆ ಕೃಷಿ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಎಚ್ಚರಿಸಿದರು.
ಭಾರತದಲ್ಲಿ ಎಲ್ಲಾ ತಿನ್ನುವ ಆಹಾರಗಳನ್ನು  ಯಥೇಚ್ಛವಾಗಿ ಬೆಳೆಯುತ್ತೇವೆ,  ಆದರೆ ಅಡುಗೆಗೆ ಎಣ್ಣೆ ಉಪಯೋಗಿಸುವ ಎಣ್ಣೆಗಳನ್ನು ಹೊರದೇಶದಿಂದ ತರುತ್ತೇವೆ. ಇಲ್ಲಿಯ ಅಡಿಕೆ ಕೃಷಿಕರು ಅಡುಗೆ ಎಣ್ಣೆಯ ಕೃಷಿಯಾದ ತಾಳೆ ಕೃಷಿಗೆ ಹೆಚ್ಚು ಮಹತ್ವ ಕೊಟ್ಟು ಅದನ್ನು ಬೆಳೆಸಬೇಕು, ಸ್ವಲ್ಪ ಜಾಗದಲ್ಲಿ ತಾಳೆ ಬೆಳೆಸಿ ಎಂದು ಶೋಭಾ ಅಡಿಕೆ ಕೃಷಿಕರಿಗೆ ಮನವಿ ಮಾಡಿದರು.
ಸಭಾಧ್ಯಕ್ಷತೆ ವಹಿಸಿದ್ದ  ಮೀನುಗಾರಿಕಾ ಸಚಿವ ಅಂಗಾರ ಮಾತನಾಡಿ ಅಡಿಕೆ ಕೃಷಿಗೆ ಹಳದಿ ಹಾಗೂ ಎಲೆಚುಕ್ಕೆ ರೋಗದ ನಂತರ ಬದಲಿ ಕೃಷಿ ಬಗ್ಗೆ ಯೋಚನೆ ಮಾಡಬೇಕು ಎಂದರು.  ಒಳನಾಡ ಮೀನು ಸಾಕಾಣಿಕೆ, ಬಯೋಪ್ಲಾಕ್ ಮೀನುಗಾರಿಕೆ  ಬಗ್ಗೆ ಮಾಹಿತಿ ನೀಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

16 minutes ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

51 minutes ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

15 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

15 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

22 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

23 hours ago