Advertisement
ಸುದ್ದಿಗಳು

ಅಡಿಕೆ ಕೃಷಿಯ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ |

Share
ಅಡಿಕೆ ಪರೀಕ್ಷೆ ನಡೆಸಿದ ಅಂದಿನ ಅಧಿಕಾರಿಗಳು ವಿರುದ್ಧವಾದ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ, ಈಗ ಅಡಿಕೆಗೆ ವಿವಿಧ ರೋಗಗಳು ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಮೇಲೆ ತೂಗುಗತ್ತಿ ಇದೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯ  ಕೃಷಿಯ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ನ ನೂತನ ಸಭಾಭವನ ಹಾಗೂ ಬೈತಡ್ಕ ಗೆಜ್ಜರ್ಮೆ 5 ಕೋಟಿಯ ರಸ್ತೆ ಕಾಮಗಾರಿ, ಜನೌಷಧಿ ಕೇಂದ್ರ ಉದ್ಘಾಟಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.
ಅಡಿಕೆ ಆಮದು ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ. ಆದರೆ ಅಡಿಕೆ ಮೇಲೆ ಇತರ ತೂಗುಗತ್ತಿ  ಇದೆ. ಅಡಿಕೆಯ ಹಾನಿ ಅಥವಾ ವಿಷಕಾರಿ ಅಂಶಗಳ ಪಟ್ಟಿಗೆ ಸೇರಿಸುವುದಿಲ್ಲ.  ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದೇವೆ ಆದರೆ ಸುಪ್ರಿಂ ಕೋರ್ಟ್ ನ ತೂಗುಗತ್ತಿ ಅಡಿಕೆ ಮೇಲೆ ಸದಾ ಇದೆ ಎಂದು ಸಚಿವೆ ಹೇಳಿದರು.  ಈ ನಡುವೆಯೇ ಅಡಿಕೆ ಕೃಷಿಗೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗ ಭಾಧಿಸಿದೆ.ವಿಜ್ಞಾನಿಗಳೂ ಸೇರಿದಂತೆ ಹಲವು ಸಂಶೋಧನೆ ನಡೆಯುತ್ತಿದೆ. ಹೊಸ ಹೊಸ ರೋಗಗಳು ಅಡಿಕೆಯನ್ನು ಬಾಧಿಸುತ್ತವೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯವಾಗಿ ತಾಳೆ ಕೃಷಿ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಎಚ್ಚರಿಸಿದರು.
ಭಾರತದಲ್ಲಿ ಎಲ್ಲಾ ತಿನ್ನುವ ಆಹಾರಗಳನ್ನು  ಯಥೇಚ್ಛವಾಗಿ ಬೆಳೆಯುತ್ತೇವೆ,  ಆದರೆ ಅಡುಗೆಗೆ ಎಣ್ಣೆ ಉಪಯೋಗಿಸುವ ಎಣ್ಣೆಗಳನ್ನು ಹೊರದೇಶದಿಂದ ತರುತ್ತೇವೆ. ಇಲ್ಲಿಯ ಅಡಿಕೆ ಕೃಷಿಕರು ಅಡುಗೆ ಎಣ್ಣೆಯ ಕೃಷಿಯಾದ ತಾಳೆ ಕೃಷಿಗೆ ಹೆಚ್ಚು ಮಹತ್ವ ಕೊಟ್ಟು ಅದನ್ನು ಬೆಳೆಸಬೇಕು, ಸ್ವಲ್ಪ ಜಾಗದಲ್ಲಿ ತಾಳೆ ಬೆಳೆಸಿ ಎಂದು ಶೋಭಾ ಅಡಿಕೆ ಕೃಷಿಕರಿಗೆ ಮನವಿ ಮಾಡಿದರು.
ಸಭಾಧ್ಯಕ್ಷತೆ ವಹಿಸಿದ್ದ  ಮೀನುಗಾರಿಕಾ ಸಚಿವ ಅಂಗಾರ ಮಾತನಾಡಿ ಅಡಿಕೆ ಕೃಷಿಗೆ ಹಳದಿ ಹಾಗೂ ಎಲೆಚುಕ್ಕೆ ರೋಗದ ನಂತರ ಬದಲಿ ಕೃಷಿ ಬಗ್ಗೆ ಯೋಚನೆ ಮಾಡಬೇಕು ಎಂದರು.  ಒಳನಾಡ ಮೀನು ಸಾಕಾಣಿಕೆ, ಬಯೋಪ್ಲಾಕ್ ಮೀನುಗಾರಿಕೆ  ಬಗ್ಗೆ ಮಾಹಿತಿ ನೀಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

11 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

11 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago