Advertisement
ಸುದ್ದಿಗಳು

ಅಡಿಕೆ ಕೃಷಿಯ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ |

Share
ಅಡಿಕೆ ಪರೀಕ್ಷೆ ನಡೆಸಿದ ಅಂದಿನ ಅಧಿಕಾರಿಗಳು ವಿರುದ್ಧವಾದ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ, ಈಗ ಅಡಿಕೆಗೆ ವಿವಿಧ ರೋಗಗಳು ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಮೇಲೆ ತೂಗುಗತ್ತಿ ಇದೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯ  ಕೃಷಿಯ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ನ ನೂತನ ಸಭಾಭವನ ಹಾಗೂ ಬೈತಡ್ಕ ಗೆಜ್ಜರ್ಮೆ 5 ಕೋಟಿಯ ರಸ್ತೆ ಕಾಮಗಾರಿ, ಜನೌಷಧಿ ಕೇಂದ್ರ ಉದ್ಘಾಟಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.
ಅಡಿಕೆ ಆಮದು ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ. ಆದರೆ ಅಡಿಕೆ ಮೇಲೆ ಇತರ ತೂಗುಗತ್ತಿ  ಇದೆ. ಅಡಿಕೆಯ ಹಾನಿ ಅಥವಾ ವಿಷಕಾರಿ ಅಂಶಗಳ ಪಟ್ಟಿಗೆ ಸೇರಿಸುವುದಿಲ್ಲ.  ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದೇವೆ ಆದರೆ ಸುಪ್ರಿಂ ಕೋರ್ಟ್ ನ ತೂಗುಗತ್ತಿ ಅಡಿಕೆ ಮೇಲೆ ಸದಾ ಇದೆ ಎಂದು ಸಚಿವೆ ಹೇಳಿದರು.  ಈ ನಡುವೆಯೇ ಅಡಿಕೆ ಕೃಷಿಗೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗ ಭಾಧಿಸಿದೆ.ವಿಜ್ಞಾನಿಗಳೂ ಸೇರಿದಂತೆ ಹಲವು ಸಂಶೋಧನೆ ನಡೆಯುತ್ತಿದೆ. ಹೊಸ ಹೊಸ ರೋಗಗಳು ಅಡಿಕೆಯನ್ನು ಬಾಧಿಸುತ್ತವೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯವಾಗಿ ತಾಳೆ ಕೃಷಿ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಎಚ್ಚರಿಸಿದರು.
ಭಾರತದಲ್ಲಿ ಎಲ್ಲಾ ತಿನ್ನುವ ಆಹಾರಗಳನ್ನು  ಯಥೇಚ್ಛವಾಗಿ ಬೆಳೆಯುತ್ತೇವೆ,  ಆದರೆ ಅಡುಗೆಗೆ ಎಣ್ಣೆ ಉಪಯೋಗಿಸುವ ಎಣ್ಣೆಗಳನ್ನು ಹೊರದೇಶದಿಂದ ತರುತ್ತೇವೆ. ಇಲ್ಲಿಯ ಅಡಿಕೆ ಕೃಷಿಕರು ಅಡುಗೆ ಎಣ್ಣೆಯ ಕೃಷಿಯಾದ ತಾಳೆ ಕೃಷಿಗೆ ಹೆಚ್ಚು ಮಹತ್ವ ಕೊಟ್ಟು ಅದನ್ನು ಬೆಳೆಸಬೇಕು, ಸ್ವಲ್ಪ ಜಾಗದಲ್ಲಿ ತಾಳೆ ಬೆಳೆಸಿ ಎಂದು ಶೋಭಾ ಅಡಿಕೆ ಕೃಷಿಕರಿಗೆ ಮನವಿ ಮಾಡಿದರು.
ಸಭಾಧ್ಯಕ್ಷತೆ ವಹಿಸಿದ್ದ  ಮೀನುಗಾರಿಕಾ ಸಚಿವ ಅಂಗಾರ ಮಾತನಾಡಿ ಅಡಿಕೆ ಕೃಷಿಗೆ ಹಳದಿ ಹಾಗೂ ಎಲೆಚುಕ್ಕೆ ರೋಗದ ನಂತರ ಬದಲಿ ಕೃಷಿ ಬಗ್ಗೆ ಯೋಚನೆ ಮಾಡಬೇಕು ಎಂದರು.  ಒಳನಾಡ ಮೀನು ಸಾಕಾಣಿಕೆ, ಬಯೋಪ್ಲಾಕ್ ಮೀನುಗಾರಿಕೆ  ಬಗ್ಗೆ ಮಾಹಿತಿ ನೀಡಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

6 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

9 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

15 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

21 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

22 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago