Advertisement
ಸುದ್ದಿಗಳು

ಅಡಿಕೆ ಕೃಷಿಯ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ |

Share
ಅಡಿಕೆ ಪರೀಕ್ಷೆ ನಡೆಸಿದ ಅಂದಿನ ಅಧಿಕಾರಿಗಳು ವಿರುದ್ಧವಾದ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ, ಈಗ ಅಡಿಕೆಗೆ ವಿವಿಧ ರೋಗಗಳು ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಮೇಲೆ ತೂಗುಗತ್ತಿ ಇದೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯ  ಕೃಷಿಯ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ನ ನೂತನ ಸಭಾಭವನ ಹಾಗೂ ಬೈತಡ್ಕ ಗೆಜ್ಜರ್ಮೆ 5 ಕೋಟಿಯ ರಸ್ತೆ ಕಾಮಗಾರಿ, ಜನೌಷಧಿ ಕೇಂದ್ರ ಉದ್ಘಾಟಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.
ಅಡಿಕೆ ಆಮದು ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ. ಆದರೆ ಅಡಿಕೆ ಮೇಲೆ ಇತರ ತೂಗುಗತ್ತಿ  ಇದೆ. ಅಡಿಕೆಯ ಹಾನಿ ಅಥವಾ ವಿಷಕಾರಿ ಅಂಶಗಳ ಪಟ್ಟಿಗೆ ಸೇರಿಸುವುದಿಲ್ಲ.  ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದೇವೆ ಆದರೆ ಸುಪ್ರಿಂ ಕೋರ್ಟ್ ನ ತೂಗುಗತ್ತಿ ಅಡಿಕೆ ಮೇಲೆ ಸದಾ ಇದೆ ಎಂದು ಸಚಿವೆ ಹೇಳಿದರು.  ಈ ನಡುವೆಯೇ ಅಡಿಕೆ ಕೃಷಿಗೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗ ಭಾಧಿಸಿದೆ.ವಿಜ್ಞಾನಿಗಳೂ ಸೇರಿದಂತೆ ಹಲವು ಸಂಶೋಧನೆ ನಡೆಯುತ್ತಿದೆ. ಹೊಸ ಹೊಸ ರೋಗಗಳು ಅಡಿಕೆಯನ್ನು ಬಾಧಿಸುತ್ತವೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯವಾಗಿ ತಾಳೆ ಕೃಷಿ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಎಚ್ಚರಿಸಿದರು.
ಭಾರತದಲ್ಲಿ ಎಲ್ಲಾ ತಿನ್ನುವ ಆಹಾರಗಳನ್ನು  ಯಥೇಚ್ಛವಾಗಿ ಬೆಳೆಯುತ್ತೇವೆ,  ಆದರೆ ಅಡುಗೆಗೆ ಎಣ್ಣೆ ಉಪಯೋಗಿಸುವ ಎಣ್ಣೆಗಳನ್ನು ಹೊರದೇಶದಿಂದ ತರುತ್ತೇವೆ. ಇಲ್ಲಿಯ ಅಡಿಕೆ ಕೃಷಿಕರು ಅಡುಗೆ ಎಣ್ಣೆಯ ಕೃಷಿಯಾದ ತಾಳೆ ಕೃಷಿಗೆ ಹೆಚ್ಚು ಮಹತ್ವ ಕೊಟ್ಟು ಅದನ್ನು ಬೆಳೆಸಬೇಕು, ಸ್ವಲ್ಪ ಜಾಗದಲ್ಲಿ ತಾಳೆ ಬೆಳೆಸಿ ಎಂದು ಶೋಭಾ ಅಡಿಕೆ ಕೃಷಿಕರಿಗೆ ಮನವಿ ಮಾಡಿದರು.
ಸಭಾಧ್ಯಕ್ಷತೆ ವಹಿಸಿದ್ದ  ಮೀನುಗಾರಿಕಾ ಸಚಿವ ಅಂಗಾರ ಮಾತನಾಡಿ ಅಡಿಕೆ ಕೃಷಿಗೆ ಹಳದಿ ಹಾಗೂ ಎಲೆಚುಕ್ಕೆ ರೋಗದ ನಂತರ ಬದಲಿ ಕೃಷಿ ಬಗ್ಗೆ ಯೋಚನೆ ಮಾಡಬೇಕು ಎಂದರು.  ಒಳನಾಡ ಮೀನು ಸಾಕಾಣಿಕೆ, ಬಯೋಪ್ಲಾಕ್ ಮೀನುಗಾರಿಕೆ  ಬಗ್ಗೆ ಮಾಹಿತಿ ನೀಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

4 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

12 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

18 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

18 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago