Advertisement
ಸುದ್ದಿಗಳು

ಅಡಿಕೆ ಕೃಷಿಯ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ |

Share
ಅಡಿಕೆ ಪರೀಕ್ಷೆ ನಡೆಸಿದ ಅಂದಿನ ಅಧಿಕಾರಿಗಳು ವಿರುದ್ಧವಾದ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ, ಈಗ ಅಡಿಕೆಗೆ ವಿವಿಧ ರೋಗಗಳು ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಮೇಲೆ ತೂಗುಗತ್ತಿ ಇದೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯ  ಕೃಷಿಯ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ನ ನೂತನ ಸಭಾಭವನ ಹಾಗೂ ಬೈತಡ್ಕ ಗೆಜ್ಜರ್ಮೆ 5 ಕೋಟಿಯ ರಸ್ತೆ ಕಾಮಗಾರಿ, ಜನೌಷಧಿ ಕೇಂದ್ರ ಉದ್ಘಾಟಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.
ಅಡಿಕೆ ಆಮದು ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ. ಆದರೆ ಅಡಿಕೆ ಮೇಲೆ ಇತರ ತೂಗುಗತ್ತಿ  ಇದೆ. ಅಡಿಕೆಯ ಹಾನಿ ಅಥವಾ ವಿಷಕಾರಿ ಅಂಶಗಳ ಪಟ್ಟಿಗೆ ಸೇರಿಸುವುದಿಲ್ಲ.  ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದೇವೆ ಆದರೆ ಸುಪ್ರಿಂ ಕೋರ್ಟ್ ನ ತೂಗುಗತ್ತಿ ಅಡಿಕೆ ಮೇಲೆ ಸದಾ ಇದೆ ಎಂದು ಸಚಿವೆ ಹೇಳಿದರು.  ಈ ನಡುವೆಯೇ ಅಡಿಕೆ ಕೃಷಿಗೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗ ಭಾಧಿಸಿದೆ.ವಿಜ್ಞಾನಿಗಳೂ ಸೇರಿದಂತೆ ಹಲವು ಸಂಶೋಧನೆ ನಡೆಯುತ್ತಿದೆ. ಹೊಸ ಹೊಸ ರೋಗಗಳು ಅಡಿಕೆಯನ್ನು ಬಾಧಿಸುತ್ತವೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯವಾಗಿ ತಾಳೆ ಕೃಷಿ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಎಚ್ಚರಿಸಿದರು.
ಭಾರತದಲ್ಲಿ ಎಲ್ಲಾ ತಿನ್ನುವ ಆಹಾರಗಳನ್ನು  ಯಥೇಚ್ಛವಾಗಿ ಬೆಳೆಯುತ್ತೇವೆ,  ಆದರೆ ಅಡುಗೆಗೆ ಎಣ್ಣೆ ಉಪಯೋಗಿಸುವ ಎಣ್ಣೆಗಳನ್ನು ಹೊರದೇಶದಿಂದ ತರುತ್ತೇವೆ. ಇಲ್ಲಿಯ ಅಡಿಕೆ ಕೃಷಿಕರು ಅಡುಗೆ ಎಣ್ಣೆಯ ಕೃಷಿಯಾದ ತಾಳೆ ಕೃಷಿಗೆ ಹೆಚ್ಚು ಮಹತ್ವ ಕೊಟ್ಟು ಅದನ್ನು ಬೆಳೆಸಬೇಕು, ಸ್ವಲ್ಪ ಜಾಗದಲ್ಲಿ ತಾಳೆ ಬೆಳೆಸಿ ಎಂದು ಶೋಭಾ ಅಡಿಕೆ ಕೃಷಿಕರಿಗೆ ಮನವಿ ಮಾಡಿದರು.
ಸಭಾಧ್ಯಕ್ಷತೆ ವಹಿಸಿದ್ದ  ಮೀನುಗಾರಿಕಾ ಸಚಿವ ಅಂಗಾರ ಮಾತನಾಡಿ ಅಡಿಕೆ ಕೃಷಿಗೆ ಹಳದಿ ಹಾಗೂ ಎಲೆಚುಕ್ಕೆ ರೋಗದ ನಂತರ ಬದಲಿ ಕೃಷಿ ಬಗ್ಗೆ ಯೋಚನೆ ಮಾಡಬೇಕು ಎಂದರು.  ಒಳನಾಡ ಮೀನು ಸಾಕಾಣಿಕೆ, ಬಯೋಪ್ಲಾಕ್ ಮೀನುಗಾರಿಕೆ  ಬಗ್ಗೆ ಮಾಹಿತಿ ನೀಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

4 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

21 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago