Advertisement
ಸುದ್ದಿಗಳು

ಅಡಿಕೆ ಕೃಷಿಯ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ |

Share
ಅಡಿಕೆ ಪರೀಕ್ಷೆ ನಡೆಸಿದ ಅಂದಿನ ಅಧಿಕಾರಿಗಳು ವಿರುದ್ಧವಾದ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ, ಈಗ ಅಡಿಕೆಗೆ ವಿವಿಧ ರೋಗಗಳು ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಮೇಲೆ ತೂಗುಗತ್ತಿ ಇದೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯ  ಕೃಷಿಯ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ನ ನೂತನ ಸಭಾಭವನ ಹಾಗೂ ಬೈತಡ್ಕ ಗೆಜ್ಜರ್ಮೆ 5 ಕೋಟಿಯ ರಸ್ತೆ ಕಾಮಗಾರಿ, ಜನೌಷಧಿ ಕೇಂದ್ರ ಉದ್ಘಾಟಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.
ಅಡಿಕೆ ಆಮದು ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ. ಆದರೆ ಅಡಿಕೆ ಮೇಲೆ ಇತರ ತೂಗುಗತ್ತಿ  ಇದೆ. ಅಡಿಕೆಯ ಹಾನಿ ಅಥವಾ ವಿಷಕಾರಿ ಅಂಶಗಳ ಪಟ್ಟಿಗೆ ಸೇರಿಸುವುದಿಲ್ಲ.  ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದೇವೆ ಆದರೆ ಸುಪ್ರಿಂ ಕೋರ್ಟ್ ನ ತೂಗುಗತ್ತಿ ಅಡಿಕೆ ಮೇಲೆ ಸದಾ ಇದೆ ಎಂದು ಸಚಿವೆ ಹೇಳಿದರು.  ಈ ನಡುವೆಯೇ ಅಡಿಕೆ ಕೃಷಿಗೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗ ಭಾಧಿಸಿದೆ.ವಿಜ್ಞಾನಿಗಳೂ ಸೇರಿದಂತೆ ಹಲವು ಸಂಶೋಧನೆ ನಡೆಯುತ್ತಿದೆ. ಹೊಸ ಹೊಸ ರೋಗಗಳು ಅಡಿಕೆಯನ್ನು ಬಾಧಿಸುತ್ತವೆ. ಹೀಗಾಗಿ ಅಡಿಕೆ ಬಿಟ್ಟು ಪರ್ಯಾಯವಾಗಿ ತಾಳೆ ಕೃಷಿ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಎಚ್ಚರಿಸಿದರು.
ಭಾರತದಲ್ಲಿ ಎಲ್ಲಾ ತಿನ್ನುವ ಆಹಾರಗಳನ್ನು  ಯಥೇಚ್ಛವಾಗಿ ಬೆಳೆಯುತ್ತೇವೆ,  ಆದರೆ ಅಡುಗೆಗೆ ಎಣ್ಣೆ ಉಪಯೋಗಿಸುವ ಎಣ್ಣೆಗಳನ್ನು ಹೊರದೇಶದಿಂದ ತರುತ್ತೇವೆ. ಇಲ್ಲಿಯ ಅಡಿಕೆ ಕೃಷಿಕರು ಅಡುಗೆ ಎಣ್ಣೆಯ ಕೃಷಿಯಾದ ತಾಳೆ ಕೃಷಿಗೆ ಹೆಚ್ಚು ಮಹತ್ವ ಕೊಟ್ಟು ಅದನ್ನು ಬೆಳೆಸಬೇಕು, ಸ್ವಲ್ಪ ಜಾಗದಲ್ಲಿ ತಾಳೆ ಬೆಳೆಸಿ ಎಂದು ಶೋಭಾ ಅಡಿಕೆ ಕೃಷಿಕರಿಗೆ ಮನವಿ ಮಾಡಿದರು.
ಸಭಾಧ್ಯಕ್ಷತೆ ವಹಿಸಿದ್ದ  ಮೀನುಗಾರಿಕಾ ಸಚಿವ ಅಂಗಾರ ಮಾತನಾಡಿ ಅಡಿಕೆ ಕೃಷಿಗೆ ಹಳದಿ ಹಾಗೂ ಎಲೆಚುಕ್ಕೆ ರೋಗದ ನಂತರ ಬದಲಿ ಕೃಷಿ ಬಗ್ಗೆ ಯೋಚನೆ ಮಾಡಬೇಕು ಎಂದರು.  ಒಳನಾಡ ಮೀನು ಸಾಕಾಣಿಕೆ, ಬಯೋಪ್ಲಾಕ್ ಮೀನುಗಾರಿಕೆ  ಬಗ್ಗೆ ಮಾಹಿತಿ ನೀಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago