ಹವಾಮಾನ ವೈಪರೀತ್ಯ | ಉದುರಿದ ಎಳೆ ಅಡಿಕೆ-ಕೊಳೆರೋಗ | ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡುವಂತೆ ಕ್ಯಾಂಪ್ಕೊ ಒತ್ತಾಯ |

September 4, 2024
4:09 PM
ರಾಜ್ಯದಲ್ಲಿ ಅಡಿಕೆ ಬೆಳೆ ನಾಶದ ಬಗ್ಗೆ ತುರ್ತು ಸಮೀಕ್ಷ ನಡೆಸುವಂತೆ ಸಂಬಂಧ ಪಟ್ಟ ಇಲಾಖೆಗೆ ನಿರ್ದೇಶನ ನೀಡಿ, ಆ ಪ್ರಕಾರ ಅಡಿಕೆ ಕೃಷಿಕರಿಗೆ ಪರಿಹಾರ ಘೋಷಣೆ ಮಾಡುವಂತೆ ಪತ್ರ ಮುಖೇನ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಮುಖ್ಯ ಮಂತ್ರಿಯವರಲ್ಲಿ ಕ್ಯಾಂಪ್ಕೊ ವಿನಂತಿ ಮಾಡಿದೆ.

ಹವಾಮಾನ ವೈಪರೀತ್ಯದ ಬಗ್ಗೆ ಕ್ಯಾಂಪ್ಕೊ ಅಡಿಕೆ ಬೆಳೆಗಾರರ ಪರವಾಗಿ ಮತ್ತೆ ಗಮನ ಸೆಳೆದಿದೆ. ಹವಾಮಾನದ ಕಾರಣದಿಂದ ಎಳೆಕಾಯಿ ಉದುರುವಿಕೆ ಮತ್ತು ಕೊಳೆರೋಗಕ್ಕೆ ಕಂಗಾಲಾದ ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಮನವಿ ಮಾಡಿದ್ದಾರೆ.

Advertisement
Advertisement
ಕಿಶೋರ್‌ ಕುಮಾರ್‌ ಕೊಡ್ಗಿ

ಬೇಸಿಗೆಯಲ್ಲಿ ಬಿಸಿಲ ಅಡಿಕೆ ಬೆಳೆಗಾರರು ಬಸವಳಿದ್ದರು. ಮುಂಗಾರಿನ ಆರ್ಭಟಕ್ಕೆ ಅಡಿಕೆಗೆ ತಗುಲಿದ ಮಹಾಮಾರಿ ಕೊಳೆರೋಗವು ಆಘಾತವಾಗಿ ಕಾಡಿದೆ.  ಹೀಗಾಗಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಘೋಷಿಸುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಯವರಿಗೆ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ ಕೊಡ್ಗಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಹವಾಮಾನ ವೈಪರೀತ್ಯಗಳಿಂದ ಭೂ ತಾಪಮಾನ ಹೆಚ್ಚಾಗಿ ಎಪ್ರಿಲ್ -ಮೇ ತಿಂಗಳಲ್ಲಿ ಅಡಿಕೆ ಕಾಯಿ ಉದುರುವಿಕೆಯಿಂದಾಗಿ ಅರ್ಧಕ್ಕರ್ಧ ಬೆಳೆ ನಾಶವಾಗಿತ್ತು. ಲಕ್ಷಾಂತರ ಹಣ ವ್ಯಯಿಸಿ ನೀರಿನ ವ್ಯವಸ್ಥೆ ಕಲ್ಪಿಸಿ ಬೆಳೆ ರಕ್ಷಣೆ ಮಾಡಲು ಹೆಣಗಾಡಿದ ರೈತ, ಈಗ ತೀವ್ರತರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಳಿದುಳಿದ ಅಡಿಕೆಗೆ ಕೊಳೆರೋಗ ಹರಡಿ ಬೆಳೆಗಾರರ ಬಾಳನ್ನು ಅಕ್ಷರಶಃ ನರಕಸದೃಶವಾಗಿಸಿದೆ. ಇದರಿಂದ ಜೀವನಾಧಾರವೇ ಕುಸಿದು ಬೆಳೆಗಾರರ ಜೀವನೋತ್ಸಾಹ ಕುಗ್ಗಿ ಹೋಗಿದೆ.

ಕ್ಯಾಂಪ್ಕೊ ಮತ್ತು ಇತರ ಸಹಕಾರಿ ಸಂಸ್ಥೆಗಳು ಸರ್ವ ಪ್ರಯತ್ನಗಳ ಮೂಲಕ ಕೆ.ಜಿ ಗೆ 400 ರೂಪಾಯಿಗಳ ಅಸುಪಾಸಿನಲ್ಲಿ ಅಡಿಕೆಯ ದರವನ್ನು ಸ್ಥಿರೀಕರಿಸಿ ರೈತರ ಬೆಂಬಲಕ್ಕೆ ನಿಂತಿವೆ. ಆದರೂ, ಅಡಿಕೆ ಕೃಷಿಗೆ ತಗುಲಿದ ಅಡಿಕೆ ಉದುರುವಿಕೆ ಮತ್ತು ಕೊಳೆರೋಗ ಬಾಧೆಯಿಂದ ಬೆಳೆ ನಷ್ಟವಾಗಿ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬ ಸ್ಥಿತಿ ಬೆಳೆಗಾರರದ್ದಾಗಿದೆ. ರೈತರ ಸಮಸ್ಯೆಗಳಿಗೆ ಸದಾ ಮಿಡಿಯುತ್ತಿರುವ ಮುಖ್ಯಮಂತ್ರಿಯವರ ಸಹಾಯ ಹಸ್ತಕ್ಕಾಗಿ ಅಡಿಕೆ ಬೆಳೆಗಾರರು ಎದುರು ನೋಡುತ್ತಿದ್ದಾರೆ ಎಂದು ಮನವಿಯಲ್ಲಿ  ತಿಳಿಸಿದ್ದಾರೆ.

ರಾಜ್ಯದಲ್ಲಿ ಅಡಿಕೆ ಬೆಳೆ ನಾಶದ ಬಗ್ಗೆ ತುರ್ತು ಸಮೀಕ್ಷ ನಡೆಸುವಂತೆ ಸಂಬಂಧ ಪಟ್ಟ ಇಲಾಖೆಗೆ ನಿರ್ದೇಶನ ನೀಡಿ, ಆ ಪ್ರಕಾರ ಅಡಿಕೆ ಕೃಷಿಕರಿಗೆ ಪರಿಹಾರ ಘೋಷಣೆ ಮಾಡುವಂತೆ ಪತ್ರ ಮುಖೇನ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಮುಖ್ಯ ಮಂತ್ರಿಯವರಲ್ಲಿ ಕ್ಯಾಂಪ್ಕೊ ವಿನಂತಿ ಮಾಡಿದೆ.

Advertisement

The President of CAMPCO, Kishore Kumar Kodgi, has requested the Chief Ministers of Karnataka and Kerala to offer compensation to the Arecanut farmers affected by weather-induced nutfall and Mahali.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?
June 30, 2025
1:34 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ
June 30, 2025
12:18 PM
by: ದ ರೂರಲ್ ಮಿರರ್.ಕಾಂ
ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |
June 30, 2025
12:12 PM
by: The Rural Mirror ಸುದ್ದಿಜಾಲ
ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು
June 30, 2025
7:16 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group