Advertisement
ರಾಜ್ಯ

ಹವಾಮಾನ ವೈಪರೀತ್ಯ | ಉದುರಿದ ಎಳೆ ಅಡಿಕೆ-ಕೊಳೆರೋಗ | ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡುವಂತೆ ಕ್ಯಾಂಪ್ಕೊ ಒತ್ತಾಯ |

Share

ಹವಾಮಾನ ವೈಪರೀತ್ಯದ ಬಗ್ಗೆ ಕ್ಯಾಂಪ್ಕೊ ಅಡಿಕೆ ಬೆಳೆಗಾರರ ಪರವಾಗಿ ಮತ್ತೆ ಗಮನ ಸೆಳೆದಿದೆ. ಹವಾಮಾನದ ಕಾರಣದಿಂದ ಎಳೆಕಾಯಿ ಉದುರುವಿಕೆ ಮತ್ತು ಕೊಳೆರೋಗಕ್ಕೆ ಕಂಗಾಲಾದ ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಮನವಿ ಮಾಡಿದ್ದಾರೆ.

Advertisement
ಕಿಶೋರ್‌ ಕುಮಾರ್‌ ಕೊಡ್ಗಿ

ಬೇಸಿಗೆಯಲ್ಲಿ ಬಿಸಿಲ ಅಡಿಕೆ ಬೆಳೆಗಾರರು ಬಸವಳಿದ್ದರು. ಮುಂಗಾರಿನ ಆರ್ಭಟಕ್ಕೆ ಅಡಿಕೆಗೆ ತಗುಲಿದ ಮಹಾಮಾರಿ ಕೊಳೆರೋಗವು ಆಘಾತವಾಗಿ ಕಾಡಿದೆ.  ಹೀಗಾಗಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಘೋಷಿಸುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಯವರಿಗೆ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ ಕೊಡ್ಗಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಹವಾಮಾನ ವೈಪರೀತ್ಯಗಳಿಂದ ಭೂ ತಾಪಮಾನ ಹೆಚ್ಚಾಗಿ ಎಪ್ರಿಲ್ -ಮೇ ತಿಂಗಳಲ್ಲಿ ಅಡಿಕೆ ಕಾಯಿ ಉದುರುವಿಕೆಯಿಂದಾಗಿ ಅರ್ಧಕ್ಕರ್ಧ ಬೆಳೆ ನಾಶವಾಗಿತ್ತು. ಲಕ್ಷಾಂತರ ಹಣ ವ್ಯಯಿಸಿ ನೀರಿನ ವ್ಯವಸ್ಥೆ ಕಲ್ಪಿಸಿ ಬೆಳೆ ರಕ್ಷಣೆ ಮಾಡಲು ಹೆಣಗಾಡಿದ ರೈತ, ಈಗ ತೀವ್ರತರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಳಿದುಳಿದ ಅಡಿಕೆಗೆ ಕೊಳೆರೋಗ ಹರಡಿ ಬೆಳೆಗಾರರ ಬಾಳನ್ನು ಅಕ್ಷರಶಃ ನರಕಸದೃಶವಾಗಿಸಿದೆ. ಇದರಿಂದ ಜೀವನಾಧಾರವೇ ಕುಸಿದು ಬೆಳೆಗಾರರ ಜೀವನೋತ್ಸಾಹ ಕುಗ್ಗಿ ಹೋಗಿದೆ.

ಕ್ಯಾಂಪ್ಕೊ ಮತ್ತು ಇತರ ಸಹಕಾರಿ ಸಂಸ್ಥೆಗಳು ಸರ್ವ ಪ್ರಯತ್ನಗಳ ಮೂಲಕ ಕೆ.ಜಿ ಗೆ 400 ರೂಪಾಯಿಗಳ ಅಸುಪಾಸಿನಲ್ಲಿ ಅಡಿಕೆಯ ದರವನ್ನು ಸ್ಥಿರೀಕರಿಸಿ ರೈತರ ಬೆಂಬಲಕ್ಕೆ ನಿಂತಿವೆ. ಆದರೂ, ಅಡಿಕೆ ಕೃಷಿಗೆ ತಗುಲಿದ ಅಡಿಕೆ ಉದುರುವಿಕೆ ಮತ್ತು ಕೊಳೆರೋಗ ಬಾಧೆಯಿಂದ ಬೆಳೆ ನಷ್ಟವಾಗಿ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬ ಸ್ಥಿತಿ ಬೆಳೆಗಾರರದ್ದಾಗಿದೆ. ರೈತರ ಸಮಸ್ಯೆಗಳಿಗೆ ಸದಾ ಮಿಡಿಯುತ್ತಿರುವ ಮುಖ್ಯಮಂತ್ರಿಯವರ ಸಹಾಯ ಹಸ್ತಕ್ಕಾಗಿ ಅಡಿಕೆ ಬೆಳೆಗಾರರು ಎದುರು ನೋಡುತ್ತಿದ್ದಾರೆ ಎಂದು ಮನವಿಯಲ್ಲಿ  ತಿಳಿಸಿದ್ದಾರೆ.

ರಾಜ್ಯದಲ್ಲಿ ಅಡಿಕೆ ಬೆಳೆ ನಾಶದ ಬಗ್ಗೆ ತುರ್ತು ಸಮೀಕ್ಷ ನಡೆಸುವಂತೆ ಸಂಬಂಧ ಪಟ್ಟ ಇಲಾಖೆಗೆ ನಿರ್ದೇಶನ ನೀಡಿ, ಆ ಪ್ರಕಾರ ಅಡಿಕೆ ಕೃಷಿಕರಿಗೆ ಪರಿಹಾರ ಘೋಷಣೆ ಮಾಡುವಂತೆ ಪತ್ರ ಮುಖೇನ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಮುಖ್ಯ ಮಂತ್ರಿಯವರಲ್ಲಿ ಕ್ಯಾಂಪ್ಕೊ ವಿನಂತಿ ಮಾಡಿದೆ.

The President of CAMPCO, Kishore Kumar Kodgi, has requested the Chief Ministers of Karnataka and Kerala to offer compensation to the Arecanut farmers affected by weather-induced nutfall and Mahali.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

11 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

1 day ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

1 day ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

1 day ago