Advertisement
ರಾಜ್ಯ

ಹವಾಮಾನ ವೈಪರೀತ್ಯ | ಉದುರಿದ ಎಳೆ ಅಡಿಕೆ-ಕೊಳೆರೋಗ | ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡುವಂತೆ ಕ್ಯಾಂಪ್ಕೊ ಒತ್ತಾಯ |

Share

ಹವಾಮಾನ ವೈಪರೀತ್ಯದ ಬಗ್ಗೆ ಕ್ಯಾಂಪ್ಕೊ ಅಡಿಕೆ ಬೆಳೆಗಾರರ ಪರವಾಗಿ ಮತ್ತೆ ಗಮನ ಸೆಳೆದಿದೆ. ಹವಾಮಾನದ ಕಾರಣದಿಂದ ಎಳೆಕಾಯಿ ಉದುರುವಿಕೆ ಮತ್ತು ಕೊಳೆರೋಗಕ್ಕೆ ಕಂಗಾಲಾದ ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಮನವಿ ಮಾಡಿದ್ದಾರೆ.

ಕಿಶೋರ್‌ ಕುಮಾರ್‌ ಕೊಡ್ಗಿ

ಬೇಸಿಗೆಯಲ್ಲಿ ಬಿಸಿಲ ಅಡಿಕೆ ಬೆಳೆಗಾರರು ಬಸವಳಿದ್ದರು. ಮುಂಗಾರಿನ ಆರ್ಭಟಕ್ಕೆ ಅಡಿಕೆಗೆ ತಗುಲಿದ ಮಹಾಮಾರಿ ಕೊಳೆರೋಗವು ಆಘಾತವಾಗಿ ಕಾಡಿದೆ.  ಹೀಗಾಗಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಘೋಷಿಸುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಯವರಿಗೆ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ ಕೊಡ್ಗಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಹವಾಮಾನ ವೈಪರೀತ್ಯಗಳಿಂದ ಭೂ ತಾಪಮಾನ ಹೆಚ್ಚಾಗಿ ಎಪ್ರಿಲ್ -ಮೇ ತಿಂಗಳಲ್ಲಿ ಅಡಿಕೆ ಕಾಯಿ ಉದುರುವಿಕೆಯಿಂದಾಗಿ ಅರ್ಧಕ್ಕರ್ಧ ಬೆಳೆ ನಾಶವಾಗಿತ್ತು. ಲಕ್ಷಾಂತರ ಹಣ ವ್ಯಯಿಸಿ ನೀರಿನ ವ್ಯವಸ್ಥೆ ಕಲ್ಪಿಸಿ ಬೆಳೆ ರಕ್ಷಣೆ ಮಾಡಲು ಹೆಣಗಾಡಿದ ರೈತ, ಈಗ ತೀವ್ರತರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಳಿದುಳಿದ ಅಡಿಕೆಗೆ ಕೊಳೆರೋಗ ಹರಡಿ ಬೆಳೆಗಾರರ ಬಾಳನ್ನು ಅಕ್ಷರಶಃ ನರಕಸದೃಶವಾಗಿಸಿದೆ. ಇದರಿಂದ ಜೀವನಾಧಾರವೇ ಕುಸಿದು ಬೆಳೆಗಾರರ ಜೀವನೋತ್ಸಾಹ ಕುಗ್ಗಿ ಹೋಗಿದೆ.

ಕ್ಯಾಂಪ್ಕೊ ಮತ್ತು ಇತರ ಸಹಕಾರಿ ಸಂಸ್ಥೆಗಳು ಸರ್ವ ಪ್ರಯತ್ನಗಳ ಮೂಲಕ ಕೆ.ಜಿ ಗೆ 400 ರೂಪಾಯಿಗಳ ಅಸುಪಾಸಿನಲ್ಲಿ ಅಡಿಕೆಯ ದರವನ್ನು ಸ್ಥಿರೀಕರಿಸಿ ರೈತರ ಬೆಂಬಲಕ್ಕೆ ನಿಂತಿವೆ. ಆದರೂ, ಅಡಿಕೆ ಕೃಷಿಗೆ ತಗುಲಿದ ಅಡಿಕೆ ಉದುರುವಿಕೆ ಮತ್ತು ಕೊಳೆರೋಗ ಬಾಧೆಯಿಂದ ಬೆಳೆ ನಷ್ಟವಾಗಿ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬ ಸ್ಥಿತಿ ಬೆಳೆಗಾರರದ್ದಾಗಿದೆ. ರೈತರ ಸಮಸ್ಯೆಗಳಿಗೆ ಸದಾ ಮಿಡಿಯುತ್ತಿರುವ ಮುಖ್ಯಮಂತ್ರಿಯವರ ಸಹಾಯ ಹಸ್ತಕ್ಕಾಗಿ ಅಡಿಕೆ ಬೆಳೆಗಾರರು ಎದುರು ನೋಡುತ್ತಿದ್ದಾರೆ ಎಂದು ಮನವಿಯಲ್ಲಿ  ತಿಳಿಸಿದ್ದಾರೆ.

ರಾಜ್ಯದಲ್ಲಿ ಅಡಿಕೆ ಬೆಳೆ ನಾಶದ ಬಗ್ಗೆ ತುರ್ತು ಸಮೀಕ್ಷ ನಡೆಸುವಂತೆ ಸಂಬಂಧ ಪಟ್ಟ ಇಲಾಖೆಗೆ ನಿರ್ದೇಶನ ನೀಡಿ, ಆ ಪ್ರಕಾರ ಅಡಿಕೆ ಕೃಷಿಕರಿಗೆ ಪರಿಹಾರ ಘೋಷಣೆ ಮಾಡುವಂತೆ ಪತ್ರ ಮುಖೇನ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಮುಖ್ಯ ಮಂತ್ರಿಯವರಲ್ಲಿ ಕ್ಯಾಂಪ್ಕೊ ವಿನಂತಿ ಮಾಡಿದೆ.

The President of CAMPCO, Kishore Kumar Kodgi, has requested the Chief Ministers of Karnataka and Kerala to offer compensation to the Arecanut farmers affected by weather-induced nutfall and Mahali.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago