Advertisement
ರಾಜ್ಯ

ಹವಾಮಾನ ವೈಪರೀತ್ಯ | ಉದುರಿದ ಎಳೆ ಅಡಿಕೆ-ಕೊಳೆರೋಗ | ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡುವಂತೆ ಕ್ಯಾಂಪ್ಕೊ ಒತ್ತಾಯ |

Share

ಹವಾಮಾನ ವೈಪರೀತ್ಯದ ಬಗ್ಗೆ ಕ್ಯಾಂಪ್ಕೊ ಅಡಿಕೆ ಬೆಳೆಗಾರರ ಪರವಾಗಿ ಮತ್ತೆ ಗಮನ ಸೆಳೆದಿದೆ. ಹವಾಮಾನದ ಕಾರಣದಿಂದ ಎಳೆಕಾಯಿ ಉದುರುವಿಕೆ ಮತ್ತು ಕೊಳೆರೋಗಕ್ಕೆ ಕಂಗಾಲಾದ ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಮನವಿ ಮಾಡಿದ್ದಾರೆ.

ಕಿಶೋರ್‌ ಕುಮಾರ್‌ ಕೊಡ್ಗಿ

ಬೇಸಿಗೆಯಲ್ಲಿ ಬಿಸಿಲ ಅಡಿಕೆ ಬೆಳೆಗಾರರು ಬಸವಳಿದ್ದರು. ಮುಂಗಾರಿನ ಆರ್ಭಟಕ್ಕೆ ಅಡಿಕೆಗೆ ತಗುಲಿದ ಮಹಾಮಾರಿ ಕೊಳೆರೋಗವು ಆಘಾತವಾಗಿ ಕಾಡಿದೆ.  ಹೀಗಾಗಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಘೋಷಿಸುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಯವರಿಗೆ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ ಕೊಡ್ಗಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಹವಾಮಾನ ವೈಪರೀತ್ಯಗಳಿಂದ ಭೂ ತಾಪಮಾನ ಹೆಚ್ಚಾಗಿ ಎಪ್ರಿಲ್ -ಮೇ ತಿಂಗಳಲ್ಲಿ ಅಡಿಕೆ ಕಾಯಿ ಉದುರುವಿಕೆಯಿಂದಾಗಿ ಅರ್ಧಕ್ಕರ್ಧ ಬೆಳೆ ನಾಶವಾಗಿತ್ತು. ಲಕ್ಷಾಂತರ ಹಣ ವ್ಯಯಿಸಿ ನೀರಿನ ವ್ಯವಸ್ಥೆ ಕಲ್ಪಿಸಿ ಬೆಳೆ ರಕ್ಷಣೆ ಮಾಡಲು ಹೆಣಗಾಡಿದ ರೈತ, ಈಗ ತೀವ್ರತರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಳಿದುಳಿದ ಅಡಿಕೆಗೆ ಕೊಳೆರೋಗ ಹರಡಿ ಬೆಳೆಗಾರರ ಬಾಳನ್ನು ಅಕ್ಷರಶಃ ನರಕಸದೃಶವಾಗಿಸಿದೆ. ಇದರಿಂದ ಜೀವನಾಧಾರವೇ ಕುಸಿದು ಬೆಳೆಗಾರರ ಜೀವನೋತ್ಸಾಹ ಕುಗ್ಗಿ ಹೋಗಿದೆ.

ಕ್ಯಾಂಪ್ಕೊ ಮತ್ತು ಇತರ ಸಹಕಾರಿ ಸಂಸ್ಥೆಗಳು ಸರ್ವ ಪ್ರಯತ್ನಗಳ ಮೂಲಕ ಕೆ.ಜಿ ಗೆ 400 ರೂಪಾಯಿಗಳ ಅಸುಪಾಸಿನಲ್ಲಿ ಅಡಿಕೆಯ ದರವನ್ನು ಸ್ಥಿರೀಕರಿಸಿ ರೈತರ ಬೆಂಬಲಕ್ಕೆ ನಿಂತಿವೆ. ಆದರೂ, ಅಡಿಕೆ ಕೃಷಿಗೆ ತಗುಲಿದ ಅಡಿಕೆ ಉದುರುವಿಕೆ ಮತ್ತು ಕೊಳೆರೋಗ ಬಾಧೆಯಿಂದ ಬೆಳೆ ನಷ್ಟವಾಗಿ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬ ಸ್ಥಿತಿ ಬೆಳೆಗಾರರದ್ದಾಗಿದೆ. ರೈತರ ಸಮಸ್ಯೆಗಳಿಗೆ ಸದಾ ಮಿಡಿಯುತ್ತಿರುವ ಮುಖ್ಯಮಂತ್ರಿಯವರ ಸಹಾಯ ಹಸ್ತಕ್ಕಾಗಿ ಅಡಿಕೆ ಬೆಳೆಗಾರರು ಎದುರು ನೋಡುತ್ತಿದ್ದಾರೆ ಎಂದು ಮನವಿಯಲ್ಲಿ  ತಿಳಿಸಿದ್ದಾರೆ.

ರಾಜ್ಯದಲ್ಲಿ ಅಡಿಕೆ ಬೆಳೆ ನಾಶದ ಬಗ್ಗೆ ತುರ್ತು ಸಮೀಕ್ಷ ನಡೆಸುವಂತೆ ಸಂಬಂಧ ಪಟ್ಟ ಇಲಾಖೆಗೆ ನಿರ್ದೇಶನ ನೀಡಿ, ಆ ಪ್ರಕಾರ ಅಡಿಕೆ ಕೃಷಿಕರಿಗೆ ಪರಿಹಾರ ಘೋಷಣೆ ಮಾಡುವಂತೆ ಪತ್ರ ಮುಖೇನ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಮುಖ್ಯ ಮಂತ್ರಿಯವರಲ್ಲಿ ಕ್ಯಾಂಪ್ಕೊ ವಿನಂತಿ ಮಾಡಿದೆ.

The President of CAMPCO, Kishore Kumar Kodgi, has requested the Chief Ministers of Karnataka and Kerala to offer compensation to the Arecanut farmers affected by weather-induced nutfall and Mahali.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

5 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

9 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

17 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

19 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

20 hours ago