Advertisement
ಸುದ್ದಿಗಳು

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

Share

ಅಸ್ಸಾಂ ಮೂಲದ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸುಮಾರು ₹1.12 ಕೋಟಿ ಮೌಲ್ಯದ 34 ಟನ್ ಅಡಿಕೆಯನ್ನು ವಂಚನೆಯ ಮೂಲಕ ಕಬಳಿಸಿರುವ ಘಟನೆ ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡ್ಲಿ ಕೈಗಾರಿಕಾ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಆರೋಪಿಗಳು ಪ್ರತಿ ಕೆ.ಜಿಗೆ ₹345 ದರ ನಿಗದಿ ಮಾಡಿ ₹5 ಲಕ್ಷ ಮುಂಗಡ ಹಣ ನೀಡಿ, ಉಳಿದ ಮೊತ್ತವನ್ನು ಸರಕು ಇಳಿಸಿದ ಬಳಿಕ ಪಾವತಿಸುವುದಾಗಿ ಭರವಸೆ ನೀಡಿದ್ದರು. ವ್ಯಾಪಾರಿಗಳ ಸೂಚನೆಯಂತೆ ಅಡಿಕೆಯನ್ನು ಕೋಲ್ಡ್ ಸ್ಟೋರೇಜ್‌ಗೆ ಇಳಿಸಲಾಗಿತ್ತು. ಬಳಿಕ ಉಳಿದ ಹಣ ನೀಡುವುದಾಗಿ ಹೇಳಿ ವ್ಯಾಪಾರಿಗಳ ಸಿಬ್ಬಂದಿಯನ್ನು ದೆಹಲಿಗೆ ಕಳುಹಿಸಿ, ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ನಂತರ ಆರೋಪಿಗಳ ಮೊಬೈಲ್‌ಗಳು ಸ್ವಿಚ್ ಆಫ್ ಆಗಿದ್ದು, ಹಣವೂ ಪಾವತಿಯಾಗಿಲ್ಲ, ಅಡಿಕೆಯೂ ವಾಪಸ್ ಸಿಕ್ಕಿಲ್ಲ.

ಪೊಲೀಸರು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಮೊಬೈಲ್ ಕರೆ ವಿವರಗಳು ಸೇರಿದಂತೆ ವಿವಿಧ ಸುಳಿವುಗಳ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Two areca nut traders from Assam have allegedly been cheated of ₹1.12 crore after 34 tonnes of areca nuts were unloaded at a cold storage facility in Sonipat, Haryana. The accused reportedly paid a small advance, took possession of the consignment and disappeared without settling the remaining amount. Police have registered a case and launched an investigation.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

16 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

17 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

17 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

23 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 days ago