Advertisement
MIRROR FOCUS

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

Share

ಭಾರತವು ಈ ವರ್ಷ ಮ್ಯಾನ್ಮಾರ್‌ನಿಂದ ಅಡಿಕೆ ಖರೀದಿಯನ್ನು ಪುನರಾರಂಭಿಸಲಿದೆಯೇ..? ಹೀಗೊಂದು ಸುದ್ದಿಯು ಇದೀಗ ಚರ್ಚೆಗೆ ಕಾರಣವಾಗುತ್ತಿದೆ.………ಮುಂದೆ ಓದಿ……..

Advertisement

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ ಮಾಡಲಿದೆ ಎನ್ನುವ ಆಶಾವಾದ ವ್ಯಕ್ತವಾಗಿದೆ. ಭಾರತದ ಸ್ಥಳೀಯ ಮಾರುಕಟ್ಟೆಗಳಲ್ಲಿ ಅಡಿಕೆ ಉತ್ಪಾದನೆ ಕಡಿಮೆಯಾಗಿದ್ದು, ಬೆಳೆಯೂ ಕಡಿಮೆ ಇದೆ.ಈ ಕೊರತೆಯನ್ನು ಭರ್ತಿ ಮಾಡಲು ಮ್ಯಾನ್ಮಾರ್‌ ಅಡಿಕೆ ಖರೀದಿ ನಡೆಯುತ್ತದೆ ಎನ್ನುವುದು ಅಲ್ಲಿನ ಮಾರುಕಟ್ಟೆ ವಿಶ್ಲೇಷಣೆಯಾಗಿದೆ. ಈ ಬಗ್ಗೆ ಮ್ಯಾನ್ಮಾರ್‌ನ ಸುದ್ದಿ ಮಾಧ್ಯಮವೊಂದು ವರದಿ ಪ್ರಕಟಿಸಿದೆ.

ಮ್ಯಾನ್ಮಾರ್‌ ನಿಂದ ಚೀನಾವು ಅತಿದೊಡ್ಡ ಅಡಿಕೆ ಖರೀದಿದಾರ. ಕಳೆದ ವರ್ಷ ಭಾರತದ ಬೇಡಿಕೆ ಕಡಿಮೆಯಾಗಿತ್ತು, ಆದರೆ ಈ ವರ್ಷ ಎಂದಿನಂತೆ ಅಡಿಕೆ ವ್ಯಾಪಾರ ಪುನರಾರಂಭವಾಗಲಿದೆ ಎನ್ನುತ್ತದೆ ಅಲ್ಲಿನ ಅಡಿಕೆ ವ್ಯಾಪಾರದ ಮಾರುಕಟ್ಟೆ. ಮ್ಯಾನ್ಮಾರ್ ಸುಮಾರು 230,000 ಟನ್‌ಗಳಷ್ಟು ವಾರ್ಷಿಕವಾಗಿ ಅಡಿಕೆ ಉತ್ಪಾದನೆಯನ್ನು ಮಾಡುತ್ತದೆ.

ಭಾರತವು 1994 ರಿಂದ ಮ್ಯಾನ್ಮಾರ್‌ನಿಂದ ಅಡಿಕೆಯನ್ನು  ಆಮದು ಸುಂಕ ಇಲ್ಲದೆಯೇ  ಅನುಮತಿಸಿತ್ತು, ಆದರೆ ಅಡಿಕೆ ಆಮದು ಪ್ರಸ್ತುತ 100 ಶೇಕಡಾ ಆಮದು ಸುಂಕಕ್ಕೆ ಒಳಪಟ್ಟಿರುತ್ತದೆ. 2018 ರಲ್ಲಿ, ಇಂಡೋನೇಷ್ಯಾದಿಂದ ಮ್ಯಾನ್ಮಾರ್ ಮೂಲಕ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ ಎನ್ನುವ ಕಾರಣದಿಂದ ಭಾರತವು ಅಡಿಕೆ ಮೇಲೆ ಆಮದು ಸುಂಕ ವಿಧಿಸಿತ್ತು. ಆದರೆ ಮ್ಯಾನ್ಮಾರ್-ಭಾರತ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆ ಬಹಳ ಹಿಂದಿನಿಂದಲೂ ನಡೆಯುತ್ತಿದೆ. ಈಗಲೂ ಈ ಕಳ್ಳಸಾಗಾಣಿಕೆ ನಡೆಯುತ್ತಿದೆ. ಆಗಾಗ ಅಡಿಕೆ ವಶಕ್ಕೆ ಪಡೆಯುವ ವರದಿಗಳು ಬೆಳಕಿಗೆ ಬರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

55 seconds ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

8 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

13 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

14 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

14 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

22 hours ago