MIRROR FOCUS

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತವು ಈ ವರ್ಷ ಮ್ಯಾನ್ಮಾರ್‌ನಿಂದ ಅಡಿಕೆ ಖರೀದಿಯನ್ನು ಪುನರಾರಂಭಿಸಲಿದೆಯೇ..? ಹೀಗೊಂದು ಸುದ್ದಿಯು ಇದೀಗ ಚರ್ಚೆಗೆ ಕಾರಣವಾಗುತ್ತಿದೆ.………ಮುಂದೆ ಓದಿ……..

Advertisement

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ ಮಾಡಲಿದೆ ಎನ್ನುವ ಆಶಾವಾದ ವ್ಯಕ್ತವಾಗಿದೆ. ಭಾರತದ ಸ್ಥಳೀಯ ಮಾರುಕಟ್ಟೆಗಳಲ್ಲಿ ಅಡಿಕೆ ಉತ್ಪಾದನೆ ಕಡಿಮೆಯಾಗಿದ್ದು, ಬೆಳೆಯೂ ಕಡಿಮೆ ಇದೆ.ಈ ಕೊರತೆಯನ್ನು ಭರ್ತಿ ಮಾಡಲು ಮ್ಯಾನ್ಮಾರ್‌ ಅಡಿಕೆ ಖರೀದಿ ನಡೆಯುತ್ತದೆ ಎನ್ನುವುದು ಅಲ್ಲಿನ ಮಾರುಕಟ್ಟೆ ವಿಶ್ಲೇಷಣೆಯಾಗಿದೆ. ಈ ಬಗ್ಗೆ ಮ್ಯಾನ್ಮಾರ್‌ನ ಸುದ್ದಿ ಮಾಧ್ಯಮವೊಂದು ವರದಿ ಪ್ರಕಟಿಸಿದೆ.

ಮ್ಯಾನ್ಮಾರ್‌ ನಿಂದ ಚೀನಾವು ಅತಿದೊಡ್ಡ ಅಡಿಕೆ ಖರೀದಿದಾರ. ಕಳೆದ ವರ್ಷ ಭಾರತದ ಬೇಡಿಕೆ ಕಡಿಮೆಯಾಗಿತ್ತು, ಆದರೆ ಈ ವರ್ಷ ಎಂದಿನಂತೆ ಅಡಿಕೆ ವ್ಯಾಪಾರ ಪುನರಾರಂಭವಾಗಲಿದೆ ಎನ್ನುತ್ತದೆ ಅಲ್ಲಿನ ಅಡಿಕೆ ವ್ಯಾಪಾರದ ಮಾರುಕಟ್ಟೆ. ಮ್ಯಾನ್ಮಾರ್ ಸುಮಾರು 230,000 ಟನ್‌ಗಳಷ್ಟು ವಾರ್ಷಿಕವಾಗಿ ಅಡಿಕೆ ಉತ್ಪಾದನೆಯನ್ನು ಮಾಡುತ್ತದೆ.

ಭಾರತವು 1994 ರಿಂದ ಮ್ಯಾನ್ಮಾರ್‌ನಿಂದ ಅಡಿಕೆಯನ್ನು  ಆಮದು ಸುಂಕ ಇಲ್ಲದೆಯೇ  ಅನುಮತಿಸಿತ್ತು, ಆದರೆ ಅಡಿಕೆ ಆಮದು ಪ್ರಸ್ತುತ 100 ಶೇಕಡಾ ಆಮದು ಸುಂಕಕ್ಕೆ ಒಳಪಟ್ಟಿರುತ್ತದೆ. 2018 ರಲ್ಲಿ, ಇಂಡೋನೇಷ್ಯಾದಿಂದ ಮ್ಯಾನ್ಮಾರ್ ಮೂಲಕ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ ಎನ್ನುವ ಕಾರಣದಿಂದ ಭಾರತವು ಅಡಿಕೆ ಮೇಲೆ ಆಮದು ಸುಂಕ ವಿಧಿಸಿತ್ತು. ಆದರೆ ಮ್ಯಾನ್ಮಾರ್-ಭಾರತ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆ ಬಹಳ ಹಿಂದಿನಿಂದಲೂ ನಡೆಯುತ್ತಿದೆ. ಈಗಲೂ ಈ ಕಳ್ಳಸಾಗಾಣಿಕೆ ನಡೆಯುತ್ತಿದೆ. ಆಗಾಗ ಅಡಿಕೆ ವಶಕ್ಕೆ ಪಡೆಯುವ ವರದಿಗಳು ಬೆಳಕಿಗೆ ಬರುತ್ತಿದೆ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ

ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…

1 hour ago

ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ

ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ…

2 hours ago

ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |

ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…

2 hours ago

15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ

ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು…

3 hours ago

ಹವಾಮಾನ ವರದಿ | 01-04-2025 | ಎ.2 ರಿಂದ ಮುಂದಿನ 10 ದಿನಗಳವರೆಗೂ ಮಳೆ ಮುನ್ಸೂಚನೆ |

ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 2ರಿಂದ…

7 hours ago

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.

15 hours ago