Advertisement
MIRROR FOCUS

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

Share

ಭಾರತವು ಈ ವರ್ಷ ಮ್ಯಾನ್ಮಾರ್‌ನಿಂದ ಅಡಿಕೆ ಖರೀದಿಯನ್ನು ಪುನರಾರಂಭಿಸಲಿದೆಯೇ..? ಹೀಗೊಂದು ಸುದ್ದಿಯು ಇದೀಗ ಚರ್ಚೆಗೆ ಕಾರಣವಾಗುತ್ತಿದೆ.………ಮುಂದೆ ಓದಿ……..

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ ಮಾಡಲಿದೆ ಎನ್ನುವ ಆಶಾವಾದ ವ್ಯಕ್ತವಾಗಿದೆ. ಭಾರತದ ಸ್ಥಳೀಯ ಮಾರುಕಟ್ಟೆಗಳಲ್ಲಿ ಅಡಿಕೆ ಉತ್ಪಾದನೆ ಕಡಿಮೆಯಾಗಿದ್ದು, ಬೆಳೆಯೂ ಕಡಿಮೆ ಇದೆ.ಈ ಕೊರತೆಯನ್ನು ಭರ್ತಿ ಮಾಡಲು ಮ್ಯಾನ್ಮಾರ್‌ ಅಡಿಕೆ ಖರೀದಿ ನಡೆಯುತ್ತದೆ ಎನ್ನುವುದು ಅಲ್ಲಿನ ಮಾರುಕಟ್ಟೆ ವಿಶ್ಲೇಷಣೆಯಾಗಿದೆ. ಈ ಬಗ್ಗೆ ಮ್ಯಾನ್ಮಾರ್‌ನ ಸುದ್ದಿ ಮಾಧ್ಯಮವೊಂದು ವರದಿ ಪ್ರಕಟಿಸಿದೆ.

ಮ್ಯಾನ್ಮಾರ್‌ ನಿಂದ ಚೀನಾವು ಅತಿದೊಡ್ಡ ಅಡಿಕೆ ಖರೀದಿದಾರ. ಕಳೆದ ವರ್ಷ ಭಾರತದ ಬೇಡಿಕೆ ಕಡಿಮೆಯಾಗಿತ್ತು, ಆದರೆ ಈ ವರ್ಷ ಎಂದಿನಂತೆ ಅಡಿಕೆ ವ್ಯಾಪಾರ ಪುನರಾರಂಭವಾಗಲಿದೆ ಎನ್ನುತ್ತದೆ ಅಲ್ಲಿನ ಅಡಿಕೆ ವ್ಯಾಪಾರದ ಮಾರುಕಟ್ಟೆ. ಮ್ಯಾನ್ಮಾರ್ ಸುಮಾರು 230,000 ಟನ್‌ಗಳಷ್ಟು ವಾರ್ಷಿಕವಾಗಿ ಅಡಿಕೆ ಉತ್ಪಾದನೆಯನ್ನು ಮಾಡುತ್ತದೆ.

ಭಾರತವು 1994 ರಿಂದ ಮ್ಯಾನ್ಮಾರ್‌ನಿಂದ ಅಡಿಕೆಯನ್ನು  ಆಮದು ಸುಂಕ ಇಲ್ಲದೆಯೇ  ಅನುಮತಿಸಿತ್ತು, ಆದರೆ ಅಡಿಕೆ ಆಮದು ಪ್ರಸ್ತುತ 100 ಶೇಕಡಾ ಆಮದು ಸುಂಕಕ್ಕೆ ಒಳಪಟ್ಟಿರುತ್ತದೆ. 2018 ರಲ್ಲಿ, ಇಂಡೋನೇಷ್ಯಾದಿಂದ ಮ್ಯಾನ್ಮಾರ್ ಮೂಲಕ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ ಎನ್ನುವ ಕಾರಣದಿಂದ ಭಾರತವು ಅಡಿಕೆ ಮೇಲೆ ಆಮದು ಸುಂಕ ವಿಧಿಸಿತ್ತು. ಆದರೆ ಮ್ಯಾನ್ಮಾರ್-ಭಾರತ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆ ಬಹಳ ಹಿಂದಿನಿಂದಲೂ ನಡೆಯುತ್ತಿದೆ. ಈಗಲೂ ಈ ಕಳ್ಳಸಾಗಾಣಿಕೆ ನಡೆಯುತ್ತಿದೆ. ಆಗಾಗ ಅಡಿಕೆ ವಶಕ್ಕೆ ಪಡೆಯುವ ವರದಿಗಳು ಬೆಳಕಿಗೆ ಬರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

10 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

15 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

15 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago