ಭಾರತವು ಈ ವರ್ಷ ಮ್ಯಾನ್ಮಾರ್ನಿಂದ ಅಡಿಕೆ ಖರೀದಿಯನ್ನು ಪುನರಾರಂಭಿಸಲಿದೆಯೇ..? ಹೀಗೊಂದು ಸುದ್ದಿಯು ಇದೀಗ ಚರ್ಚೆಗೆ ಕಾರಣವಾಗುತ್ತಿದೆ.………ಮುಂದೆ ಓದಿ……..
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ ಮಾಡಲಿದೆ ಎನ್ನುವ ಆಶಾವಾದ ವ್ಯಕ್ತವಾಗಿದೆ. ಭಾರತದ ಸ್ಥಳೀಯ ಮಾರುಕಟ್ಟೆಗಳಲ್ಲಿ ಅಡಿಕೆ ಉತ್ಪಾದನೆ ಕಡಿಮೆಯಾಗಿದ್ದು, ಬೆಳೆಯೂ ಕಡಿಮೆ ಇದೆ.ಈ ಕೊರತೆಯನ್ನು ಭರ್ತಿ ಮಾಡಲು ಮ್ಯಾನ್ಮಾರ್ ಅಡಿಕೆ ಖರೀದಿ ನಡೆಯುತ್ತದೆ ಎನ್ನುವುದು ಅಲ್ಲಿನ ಮಾರುಕಟ್ಟೆ ವಿಶ್ಲೇಷಣೆಯಾಗಿದೆ. ಈ ಬಗ್ಗೆ ಮ್ಯಾನ್ಮಾರ್ನ ಸುದ್ದಿ ಮಾಧ್ಯಮವೊಂದು ವರದಿ ಪ್ರಕಟಿಸಿದೆ.
ಮ್ಯಾನ್ಮಾರ್ ನಿಂದ ಚೀನಾವು ಅತಿದೊಡ್ಡ ಅಡಿಕೆ ಖರೀದಿದಾರ. ಕಳೆದ ವರ್ಷ ಭಾರತದ ಬೇಡಿಕೆ ಕಡಿಮೆಯಾಗಿತ್ತು, ಆದರೆ ಈ ವರ್ಷ ಎಂದಿನಂತೆ ಅಡಿಕೆ ವ್ಯಾಪಾರ ಪುನರಾರಂಭವಾಗಲಿದೆ ಎನ್ನುತ್ತದೆ ಅಲ್ಲಿನ ಅಡಿಕೆ ವ್ಯಾಪಾರದ ಮಾರುಕಟ್ಟೆ. ಮ್ಯಾನ್ಮಾರ್ ಸುಮಾರು 230,000 ಟನ್ಗಳಷ್ಟು ವಾರ್ಷಿಕವಾಗಿ ಅಡಿಕೆ ಉತ್ಪಾದನೆಯನ್ನು ಮಾಡುತ್ತದೆ.
ಭಾರತವು 1994 ರಿಂದ ಮ್ಯಾನ್ಮಾರ್ನಿಂದ ಅಡಿಕೆಯನ್ನು ಆಮದು ಸುಂಕ ಇಲ್ಲದೆಯೇ ಅನುಮತಿಸಿತ್ತು, ಆದರೆ ಅಡಿಕೆ ಆಮದು ಪ್ರಸ್ತುತ 100 ಶೇಕಡಾ ಆಮದು ಸುಂಕಕ್ಕೆ ಒಳಪಟ್ಟಿರುತ್ತದೆ. 2018 ರಲ್ಲಿ, ಇಂಡೋನೇಷ್ಯಾದಿಂದ ಮ್ಯಾನ್ಮಾರ್ ಮೂಲಕ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ ಎನ್ನುವ ಕಾರಣದಿಂದ ಭಾರತವು ಅಡಿಕೆ ಮೇಲೆ ಆಮದು ಸುಂಕ ವಿಧಿಸಿತ್ತು. ಆದರೆ ಮ್ಯಾನ್ಮಾರ್-ಭಾರತ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆ ಬಹಳ ಹಿಂದಿನಿಂದಲೂ ನಡೆಯುತ್ತಿದೆ. ಈಗಲೂ ಈ ಕಳ್ಳಸಾಗಾಣಿಕೆ ನಡೆಯುತ್ತಿದೆ. ಆಗಾಗ ಅಡಿಕೆ ವಶಕ್ಕೆ ಪಡೆಯುವ ವರದಿಗಳು ಬೆಳಕಿಗೆ ಬರುತ್ತಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…