Advertisement
MIRROR FOCUS

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

Share

ಭಾರತವು ಈ ವರ್ಷ ಮ್ಯಾನ್ಮಾರ್‌ನಿಂದ ಅಡಿಕೆ ಖರೀದಿಯನ್ನು ಪುನರಾರಂಭಿಸಲಿದೆಯೇ..? ಹೀಗೊಂದು ಸುದ್ದಿಯು ಇದೀಗ ಚರ್ಚೆಗೆ ಕಾರಣವಾಗುತ್ತಿದೆ.………ಮುಂದೆ ಓದಿ……..

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ ಮಾಡಲಿದೆ ಎನ್ನುವ ಆಶಾವಾದ ವ್ಯಕ್ತವಾಗಿದೆ. ಭಾರತದ ಸ್ಥಳೀಯ ಮಾರುಕಟ್ಟೆಗಳಲ್ಲಿ ಅಡಿಕೆ ಉತ್ಪಾದನೆ ಕಡಿಮೆಯಾಗಿದ್ದು, ಬೆಳೆಯೂ ಕಡಿಮೆ ಇದೆ.ಈ ಕೊರತೆಯನ್ನು ಭರ್ತಿ ಮಾಡಲು ಮ್ಯಾನ್ಮಾರ್‌ ಅಡಿಕೆ ಖರೀದಿ ನಡೆಯುತ್ತದೆ ಎನ್ನುವುದು ಅಲ್ಲಿನ ಮಾರುಕಟ್ಟೆ ವಿಶ್ಲೇಷಣೆಯಾಗಿದೆ. ಈ ಬಗ್ಗೆ ಮ್ಯಾನ್ಮಾರ್‌ನ ಸುದ್ದಿ ಮಾಧ್ಯಮವೊಂದು ವರದಿ ಪ್ರಕಟಿಸಿದೆ.

ಮ್ಯಾನ್ಮಾರ್‌ ನಿಂದ ಚೀನಾವು ಅತಿದೊಡ್ಡ ಅಡಿಕೆ ಖರೀದಿದಾರ. ಕಳೆದ ವರ್ಷ ಭಾರತದ ಬೇಡಿಕೆ ಕಡಿಮೆಯಾಗಿತ್ತು, ಆದರೆ ಈ ವರ್ಷ ಎಂದಿನಂತೆ ಅಡಿಕೆ ವ್ಯಾಪಾರ ಪುನರಾರಂಭವಾಗಲಿದೆ ಎನ್ನುತ್ತದೆ ಅಲ್ಲಿನ ಅಡಿಕೆ ವ್ಯಾಪಾರದ ಮಾರುಕಟ್ಟೆ. ಮ್ಯಾನ್ಮಾರ್ ಸುಮಾರು 230,000 ಟನ್‌ಗಳಷ್ಟು ವಾರ್ಷಿಕವಾಗಿ ಅಡಿಕೆ ಉತ್ಪಾದನೆಯನ್ನು ಮಾಡುತ್ತದೆ.

ಭಾರತವು 1994 ರಿಂದ ಮ್ಯಾನ್ಮಾರ್‌ನಿಂದ ಅಡಿಕೆಯನ್ನು  ಆಮದು ಸುಂಕ ಇಲ್ಲದೆಯೇ  ಅನುಮತಿಸಿತ್ತು, ಆದರೆ ಅಡಿಕೆ ಆಮದು ಪ್ರಸ್ತುತ 100 ಶೇಕಡಾ ಆಮದು ಸುಂಕಕ್ಕೆ ಒಳಪಟ್ಟಿರುತ್ತದೆ. 2018 ರಲ್ಲಿ, ಇಂಡೋನೇಷ್ಯಾದಿಂದ ಮ್ಯಾನ್ಮಾರ್ ಮೂಲಕ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ ಎನ್ನುವ ಕಾರಣದಿಂದ ಭಾರತವು ಅಡಿಕೆ ಮೇಲೆ ಆಮದು ಸುಂಕ ವಿಧಿಸಿತ್ತು. ಆದರೆ ಮ್ಯಾನ್ಮಾರ್-ಭಾರತ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆ ಬಹಳ ಹಿಂದಿನಿಂದಲೂ ನಡೆಯುತ್ತಿದೆ. ಈಗಲೂ ಈ ಕಳ್ಳಸಾಗಾಣಿಕೆ ನಡೆಯುತ್ತಿದೆ. ಆಗಾಗ ಅಡಿಕೆ ವಶಕ್ಕೆ ಪಡೆಯುವ ವರದಿಗಳು ಬೆಳಕಿಗೆ ಬರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

42 minutes ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

3 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

6 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

11 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

21 hours ago