Advertisement
MIRROR FOCUS

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

Share

ಭಾರತವು ಈ ವರ್ಷ ಮ್ಯಾನ್ಮಾರ್‌ನಿಂದ ಅಡಿಕೆ ಖರೀದಿಯನ್ನು ಪುನರಾರಂಭಿಸಲಿದೆಯೇ..? ಹೀಗೊಂದು ಸುದ್ದಿಯು ಇದೀಗ ಚರ್ಚೆಗೆ ಕಾರಣವಾಗುತ್ತಿದೆ.………ಮುಂದೆ ಓದಿ……..

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ ಮಾಡಲಿದೆ ಎನ್ನುವ ಆಶಾವಾದ ವ್ಯಕ್ತವಾಗಿದೆ. ಭಾರತದ ಸ್ಥಳೀಯ ಮಾರುಕಟ್ಟೆಗಳಲ್ಲಿ ಅಡಿಕೆ ಉತ್ಪಾದನೆ ಕಡಿಮೆಯಾಗಿದ್ದು, ಬೆಳೆಯೂ ಕಡಿಮೆ ಇದೆ.ಈ ಕೊರತೆಯನ್ನು ಭರ್ತಿ ಮಾಡಲು ಮ್ಯಾನ್ಮಾರ್‌ ಅಡಿಕೆ ಖರೀದಿ ನಡೆಯುತ್ತದೆ ಎನ್ನುವುದು ಅಲ್ಲಿನ ಮಾರುಕಟ್ಟೆ ವಿಶ್ಲೇಷಣೆಯಾಗಿದೆ. ಈ ಬಗ್ಗೆ ಮ್ಯಾನ್ಮಾರ್‌ನ ಸುದ್ದಿ ಮಾಧ್ಯಮವೊಂದು ವರದಿ ಪ್ರಕಟಿಸಿದೆ.

ಮ್ಯಾನ್ಮಾರ್‌ ನಿಂದ ಚೀನಾವು ಅತಿದೊಡ್ಡ ಅಡಿಕೆ ಖರೀದಿದಾರ. ಕಳೆದ ವರ್ಷ ಭಾರತದ ಬೇಡಿಕೆ ಕಡಿಮೆಯಾಗಿತ್ತು, ಆದರೆ ಈ ವರ್ಷ ಎಂದಿನಂತೆ ಅಡಿಕೆ ವ್ಯಾಪಾರ ಪುನರಾರಂಭವಾಗಲಿದೆ ಎನ್ನುತ್ತದೆ ಅಲ್ಲಿನ ಅಡಿಕೆ ವ್ಯಾಪಾರದ ಮಾರುಕಟ್ಟೆ. ಮ್ಯಾನ್ಮಾರ್ ಸುಮಾರು 230,000 ಟನ್‌ಗಳಷ್ಟು ವಾರ್ಷಿಕವಾಗಿ ಅಡಿಕೆ ಉತ್ಪಾದನೆಯನ್ನು ಮಾಡುತ್ತದೆ.

ಭಾರತವು 1994 ರಿಂದ ಮ್ಯಾನ್ಮಾರ್‌ನಿಂದ ಅಡಿಕೆಯನ್ನು  ಆಮದು ಸುಂಕ ಇಲ್ಲದೆಯೇ  ಅನುಮತಿಸಿತ್ತು, ಆದರೆ ಅಡಿಕೆ ಆಮದು ಪ್ರಸ್ತುತ 100 ಶೇಕಡಾ ಆಮದು ಸುಂಕಕ್ಕೆ ಒಳಪಟ್ಟಿರುತ್ತದೆ. 2018 ರಲ್ಲಿ, ಇಂಡೋನೇಷ್ಯಾದಿಂದ ಮ್ಯಾನ್ಮಾರ್ ಮೂಲಕ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ ಎನ್ನುವ ಕಾರಣದಿಂದ ಭಾರತವು ಅಡಿಕೆ ಮೇಲೆ ಆಮದು ಸುಂಕ ವಿಧಿಸಿತ್ತು. ಆದರೆ ಮ್ಯಾನ್ಮಾರ್-ಭಾರತ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆ ಬಹಳ ಹಿಂದಿನಿಂದಲೂ ನಡೆಯುತ್ತಿದೆ. ಈಗಲೂ ಈ ಕಳ್ಳಸಾಗಾಣಿಕೆ ನಡೆಯುತ್ತಿದೆ. ಆಗಾಗ ಅಡಿಕೆ ವಶಕ್ಕೆ ಪಡೆಯುವ ವರದಿಗಳು ಬೆಳಕಿಗೆ ಬರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 hour ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

6 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

7 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

9 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

9 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

23 hours ago