ಭಾರತವು ಈ ವರ್ಷ ಮ್ಯಾನ್ಮಾರ್ನಿಂದ ಅಡಿಕೆ ಖರೀದಿಯನ್ನು ಪುನರಾರಂಭಿಸಲಿದೆಯೇ..? ಹೀಗೊಂದು ಸುದ್ದಿಯು ಇದೀಗ ಚರ್ಚೆಗೆ ಕಾರಣವಾಗುತ್ತಿದೆ.………ಮುಂದೆ ಓದಿ……..
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ ಮಾಡಲಿದೆ ಎನ್ನುವ ಆಶಾವಾದ ವ್ಯಕ್ತವಾಗಿದೆ. ಭಾರತದ ಸ್ಥಳೀಯ ಮಾರುಕಟ್ಟೆಗಳಲ್ಲಿ ಅಡಿಕೆ ಉತ್ಪಾದನೆ ಕಡಿಮೆಯಾಗಿದ್ದು, ಬೆಳೆಯೂ ಕಡಿಮೆ ಇದೆ.ಈ ಕೊರತೆಯನ್ನು ಭರ್ತಿ ಮಾಡಲು ಮ್ಯಾನ್ಮಾರ್ ಅಡಿಕೆ ಖರೀದಿ ನಡೆಯುತ್ತದೆ ಎನ್ನುವುದು ಅಲ್ಲಿನ ಮಾರುಕಟ್ಟೆ ವಿಶ್ಲೇಷಣೆಯಾಗಿದೆ. ಈ ಬಗ್ಗೆ ಮ್ಯಾನ್ಮಾರ್ನ ಸುದ್ದಿ ಮಾಧ್ಯಮವೊಂದು ವರದಿ ಪ್ರಕಟಿಸಿದೆ.
ಮ್ಯಾನ್ಮಾರ್ ನಿಂದ ಚೀನಾವು ಅತಿದೊಡ್ಡ ಅಡಿಕೆ ಖರೀದಿದಾರ. ಕಳೆದ ವರ್ಷ ಭಾರತದ ಬೇಡಿಕೆ ಕಡಿಮೆಯಾಗಿತ್ತು, ಆದರೆ ಈ ವರ್ಷ ಎಂದಿನಂತೆ ಅಡಿಕೆ ವ್ಯಾಪಾರ ಪುನರಾರಂಭವಾಗಲಿದೆ ಎನ್ನುತ್ತದೆ ಅಲ್ಲಿನ ಅಡಿಕೆ ವ್ಯಾಪಾರದ ಮಾರುಕಟ್ಟೆ. ಮ್ಯಾನ್ಮಾರ್ ಸುಮಾರು 230,000 ಟನ್ಗಳಷ್ಟು ವಾರ್ಷಿಕವಾಗಿ ಅಡಿಕೆ ಉತ್ಪಾದನೆಯನ್ನು ಮಾಡುತ್ತದೆ.
ಭಾರತವು 1994 ರಿಂದ ಮ್ಯಾನ್ಮಾರ್ನಿಂದ ಅಡಿಕೆಯನ್ನು ಆಮದು ಸುಂಕ ಇಲ್ಲದೆಯೇ ಅನುಮತಿಸಿತ್ತು, ಆದರೆ ಅಡಿಕೆ ಆಮದು ಪ್ರಸ್ತುತ 100 ಶೇಕಡಾ ಆಮದು ಸುಂಕಕ್ಕೆ ಒಳಪಟ್ಟಿರುತ್ತದೆ. 2018 ರಲ್ಲಿ, ಇಂಡೋನೇಷ್ಯಾದಿಂದ ಮ್ಯಾನ್ಮಾರ್ ಮೂಲಕ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ ಎನ್ನುವ ಕಾರಣದಿಂದ ಭಾರತವು ಅಡಿಕೆ ಮೇಲೆ ಆಮದು ಸುಂಕ ವಿಧಿಸಿತ್ತು. ಆದರೆ ಮ್ಯಾನ್ಮಾರ್-ಭಾರತ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆ ಬಹಳ ಹಿಂದಿನಿಂದಲೂ ನಡೆಯುತ್ತಿದೆ. ಈಗಲೂ ಈ ಕಳ್ಳಸಾಗಾಣಿಕೆ ನಡೆಯುತ್ತಿದೆ. ಆಗಾಗ ಅಡಿಕೆ ವಶಕ್ಕೆ ಪಡೆಯುವ ವರದಿಗಳು ಬೆಳಕಿಗೆ ಬರುತ್ತಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…