Advertisement
ಸುದ್ದಿಗಳು

ಜ.12 : ವಿಟ್ಲದಲ್ಲಿ ಅಡಿಕೆ ಗೋಣಿಗೊನೆ ಪ್ರಾತ್ಯಕ್ಷಿಕೆ

Share

ಅಡಿಕೆ ಕೊಯ್ಲಿನ ಸಂದರ್ಭದಲ್ಲಿ ಕೃಷಿಕರಿಗೆ ಶ್ರಮ ಹಗುರ ಮಾಡುವ ಗೋಣಿಗೊನೆ ವಿಧಾನದ ಪ್ರಾತ್ಯಕ್ಷಿಕೆ ಜ.12  ರಂದು ವಿಟ್ಲ ಸಿಪಿಸಿಆರ್‌ ಐ ವಠಾರದಲ್ಲಿ ನಡೆಯಲಿದೆ. ಈ ಪ್ರಾತ್ಯಕ್ಷಿಕೆ ಕ್ಯಾಂಪ್ಕೋ ನೇತೃತ್ವದಲ್ಲಿ ನಡೆಯುವ ತರಬೇತಿ ಶಿಬಿರದ ಕೊನೆಯ ದಿನ ಪೂರ್ವಾಹ್ನ ನಡೆಯಲಿದೆ.

ಅಡಿಕೆ ಕೊಯ್ಯುವಾಗ ಬಿದ್ದ ಗೊನೆಯಿಂದ ಅಡಿಕೆ ಚದುರಿ ಹರಡಿದರೆ ಅದನ್ನು ಹೆಕ್ಕಲು ತುಂಬ ಆಳುಗಳು ಬೇಕು. ಈ ಸಮಸ್ಯೆ ನಿವಾರಿಸಲು ಉತ್ತರ ಕನ್ನಡ, ಚನ್ನಗಿರಿ ಮೊದಲಾದ ಕಡೆಗಳ  ಗೋಣಿಗೊನೆ ಹಾಗೂ ಪಾಟು ಹಾಕುವುದು,   ಮತ್ತು ಛಬ್ಬೆ ಹಿಡಿಯುವ ಕ್ರಮವನ್ನು ಅಡಿಕೆ ಬೆಳೆಗಾರರು ಬಹುಕಾಲದಿಂದ ಮಾಡುತ್ತಿದ್ದಾರೆ. ಅದೇ ಮಾದರಿ ದ ಕ ಜಿಲ್ಲೆಯ ಅಡಿಕೆ ಬೆಳೆಗಾರರಿಗೂ ಮಾಡಲು ಸಾಧ್ಯವಿದೆ.

    

ಈ ವಿಧಾನವನ್ನು ಕರಾವಳಿಯ ಕೃಷಿಕರಿಗೆ ಪರಿಚಯಿಸಲೆಂದೇ ತೀರ್ಥಹಳ್ಳಿಯ ಮಲೆನಾಡು ಕೃಷಿಕರ ಸಮುದಾಯ ಸಂಘದ ಅಧ್ಯಕ್ಷ, ಕೃಷಿಕ ಸತ್ಯನಾರಾಯಣ ಕೂಳೂರು ಕುಶಲಕರ್ಮಿಗಳನ್ನು ಕರೆತರಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿರುವ ತೀರ್ಥಹಳ್ಳಿಯ ಭಾಸ್ಕರ ಶೆಟ್ಟರಿಗೆ ಗೋಣಿಗೊನೆ ಹಿಡಿಯುವುದರಲ್ಲಿ ಮೂರು ದಶಕದ ಅನುಭವ ಇದೆ. ಈ ಭಾಗದಲ್ಲಿ ಬಿದಿರಿನ ದೋಟಿಯಲ್ಲಿ ಗೊನೆ ಕೊಯ್ಯುವಾಗಲೂ ಗೋಣಿಗೊನೆ ವಿಧಾನದಲ್ಲಿ ಅಡಿಕೆ ಉದುರದಂತೆ ನೋಡಿಕೊಳ್ಳಬಹುದು ಎನ್ನುತ್ತಾರೆ ಭಾಸ್ಕರ ಶೆಟ್ಟರು. ತೋಟದಲ್ಲಿ ಕೊಕ್ಕೋ ಮತ್ತಿತರ ಎಡೆ ಬೆಳೆ ಸಾಂದ್ರವಾಗಿ ಇರುವಲ್ಲಿ ಈ ಕ್ರಮ ಕಷ್ಟ.

          ಆಸಕ್ತ ಕೃಷಿಕರು ಈ ಪ್ರಾತ್ಯಕ್ಷಿಕೆ ನೋಡಿ ಇಲ್ಲೂ ಈ ಶ್ರಮ ಉಳಿಸುವ ಉಪಾಯವನ್ನು ಅಳವಡಿಸಿಕೊಳ್ಳಬಹುದು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

12 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

17 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago