Advertisement
ಸುದ್ದಿಗಳು

ಜ.12 : ವಿಟ್ಲದಲ್ಲಿ ಅಡಿಕೆ ಗೋಣಿಗೊನೆ ಪ್ರಾತ್ಯಕ್ಷಿಕೆ

Share

ಅಡಿಕೆ ಕೊಯ್ಲಿನ ಸಂದರ್ಭದಲ್ಲಿ ಕೃಷಿಕರಿಗೆ ಶ್ರಮ ಹಗುರ ಮಾಡುವ ಗೋಣಿಗೊನೆ ವಿಧಾನದ ಪ್ರಾತ್ಯಕ್ಷಿಕೆ ಜ.12  ರಂದು ವಿಟ್ಲ ಸಿಪಿಸಿಆರ್‌ ಐ ವಠಾರದಲ್ಲಿ ನಡೆಯಲಿದೆ. ಈ ಪ್ರಾತ್ಯಕ್ಷಿಕೆ ಕ್ಯಾಂಪ್ಕೋ ನೇತೃತ್ವದಲ್ಲಿ ನಡೆಯುವ ತರಬೇತಿ ಶಿಬಿರದ ಕೊನೆಯ ದಿನ ಪೂರ್ವಾಹ್ನ ನಡೆಯಲಿದೆ.

Advertisement
Advertisement

ಅಡಿಕೆ ಕೊಯ್ಯುವಾಗ ಬಿದ್ದ ಗೊನೆಯಿಂದ ಅಡಿಕೆ ಚದುರಿ ಹರಡಿದರೆ ಅದನ್ನು ಹೆಕ್ಕಲು ತುಂಬ ಆಳುಗಳು ಬೇಕು. ಈ ಸಮಸ್ಯೆ ನಿವಾರಿಸಲು ಉತ್ತರ ಕನ್ನಡ, ಚನ್ನಗಿರಿ ಮೊದಲಾದ ಕಡೆಗಳ  ಗೋಣಿಗೊನೆ ಹಾಗೂ ಪಾಟು ಹಾಕುವುದು,   ಮತ್ತು ಛಬ್ಬೆ ಹಿಡಿಯುವ ಕ್ರಮವನ್ನು ಅಡಿಕೆ ಬೆಳೆಗಾರರು ಬಹುಕಾಲದಿಂದ ಮಾಡುತ್ತಿದ್ದಾರೆ. ಅದೇ ಮಾದರಿ ದ ಕ ಜಿಲ್ಲೆಯ ಅಡಿಕೆ ಬೆಳೆಗಾರರಿಗೂ ಮಾಡಲು ಸಾಧ್ಯವಿದೆ.

    

ಈ ವಿಧಾನವನ್ನು ಕರಾವಳಿಯ ಕೃಷಿಕರಿಗೆ ಪರಿಚಯಿಸಲೆಂದೇ ತೀರ್ಥಹಳ್ಳಿಯ ಮಲೆನಾಡು ಕೃಷಿಕರ ಸಮುದಾಯ ಸಂಘದ ಅಧ್ಯಕ್ಷ, ಕೃಷಿಕ ಸತ್ಯನಾರಾಯಣ ಕೂಳೂರು ಕುಶಲಕರ್ಮಿಗಳನ್ನು ಕರೆತರಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿರುವ ತೀರ್ಥಹಳ್ಳಿಯ ಭಾಸ್ಕರ ಶೆಟ್ಟರಿಗೆ ಗೋಣಿಗೊನೆ ಹಿಡಿಯುವುದರಲ್ಲಿ ಮೂರು ದಶಕದ ಅನುಭವ ಇದೆ. ಈ ಭಾಗದಲ್ಲಿ ಬಿದಿರಿನ ದೋಟಿಯಲ್ಲಿ ಗೊನೆ ಕೊಯ್ಯುವಾಗಲೂ ಗೋಣಿಗೊನೆ ವಿಧಾನದಲ್ಲಿ ಅಡಿಕೆ ಉದುರದಂತೆ ನೋಡಿಕೊಳ್ಳಬಹುದು ಎನ್ನುತ್ತಾರೆ ಭಾಸ್ಕರ ಶೆಟ್ಟರು. ತೋಟದಲ್ಲಿ ಕೊಕ್ಕೋ ಮತ್ತಿತರ ಎಡೆ ಬೆಳೆ ಸಾಂದ್ರವಾಗಿ ಇರುವಲ್ಲಿ ಈ ಕ್ರಮ ಕಷ್ಟ.

          ಆಸಕ್ತ ಕೃಷಿಕರು ಈ ಪ್ರಾತ್ಯಕ್ಷಿಕೆ ನೋಡಿ ಇಲ್ಲೂ ಈ ಶ್ರಮ ಉಳಿಸುವ ಉಪಾಯವನ್ನು ಅಳವಡಿಸಿಕೊಳ್ಳಬಹುದು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

19 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

20 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

20 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

20 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago