Advertisement
ಸುದ್ದಿಗಳು

ಜ.12 : ವಿಟ್ಲದಲ್ಲಿ ಅಡಿಕೆ ಗೋಣಿಗೊನೆ ಪ್ರಾತ್ಯಕ್ಷಿಕೆ

Share

ಅಡಿಕೆ ಕೊಯ್ಲಿನ ಸಂದರ್ಭದಲ್ಲಿ ಕೃಷಿಕರಿಗೆ ಶ್ರಮ ಹಗುರ ಮಾಡುವ ಗೋಣಿಗೊನೆ ವಿಧಾನದ ಪ್ರಾತ್ಯಕ್ಷಿಕೆ ಜ.12  ರಂದು ವಿಟ್ಲ ಸಿಪಿಸಿಆರ್‌ ಐ ವಠಾರದಲ್ಲಿ ನಡೆಯಲಿದೆ. ಈ ಪ್ರಾತ್ಯಕ್ಷಿಕೆ ಕ್ಯಾಂಪ್ಕೋ ನೇತೃತ್ವದಲ್ಲಿ ನಡೆಯುವ ತರಬೇತಿ ಶಿಬಿರದ ಕೊನೆಯ ದಿನ ಪೂರ್ವಾಹ್ನ ನಡೆಯಲಿದೆ.

ಅಡಿಕೆ ಕೊಯ್ಯುವಾಗ ಬಿದ್ದ ಗೊನೆಯಿಂದ ಅಡಿಕೆ ಚದುರಿ ಹರಡಿದರೆ ಅದನ್ನು ಹೆಕ್ಕಲು ತುಂಬ ಆಳುಗಳು ಬೇಕು. ಈ ಸಮಸ್ಯೆ ನಿವಾರಿಸಲು ಉತ್ತರ ಕನ್ನಡ, ಚನ್ನಗಿರಿ ಮೊದಲಾದ ಕಡೆಗಳ  ಗೋಣಿಗೊನೆ ಹಾಗೂ ಪಾಟು ಹಾಕುವುದು,   ಮತ್ತು ಛಬ್ಬೆ ಹಿಡಿಯುವ ಕ್ರಮವನ್ನು ಅಡಿಕೆ ಬೆಳೆಗಾರರು ಬಹುಕಾಲದಿಂದ ಮಾಡುತ್ತಿದ್ದಾರೆ. ಅದೇ ಮಾದರಿ ದ ಕ ಜಿಲ್ಲೆಯ ಅಡಿಕೆ ಬೆಳೆಗಾರರಿಗೂ ಮಾಡಲು ಸಾಧ್ಯವಿದೆ.

    

ಈ ವಿಧಾನವನ್ನು ಕರಾವಳಿಯ ಕೃಷಿಕರಿಗೆ ಪರಿಚಯಿಸಲೆಂದೇ ತೀರ್ಥಹಳ್ಳಿಯ ಮಲೆನಾಡು ಕೃಷಿಕರ ಸಮುದಾಯ ಸಂಘದ ಅಧ್ಯಕ್ಷ, ಕೃಷಿಕ ಸತ್ಯನಾರಾಯಣ ಕೂಳೂರು ಕುಶಲಕರ್ಮಿಗಳನ್ನು ಕರೆತರಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿರುವ ತೀರ್ಥಹಳ್ಳಿಯ ಭಾಸ್ಕರ ಶೆಟ್ಟರಿಗೆ ಗೋಣಿಗೊನೆ ಹಿಡಿಯುವುದರಲ್ಲಿ ಮೂರು ದಶಕದ ಅನುಭವ ಇದೆ. ಈ ಭಾಗದಲ್ಲಿ ಬಿದಿರಿನ ದೋಟಿಯಲ್ಲಿ ಗೊನೆ ಕೊಯ್ಯುವಾಗಲೂ ಗೋಣಿಗೊನೆ ವಿಧಾನದಲ್ಲಿ ಅಡಿಕೆ ಉದುರದಂತೆ ನೋಡಿಕೊಳ್ಳಬಹುದು ಎನ್ನುತ್ತಾರೆ ಭಾಸ್ಕರ ಶೆಟ್ಟರು. ತೋಟದಲ್ಲಿ ಕೊಕ್ಕೋ ಮತ್ತಿತರ ಎಡೆ ಬೆಳೆ ಸಾಂದ್ರವಾಗಿ ಇರುವಲ್ಲಿ ಈ ಕ್ರಮ ಕಷ್ಟ.

          ಆಸಕ್ತ ಕೃಷಿಕರು ಈ ಪ್ರಾತ್ಯಕ್ಷಿಕೆ ನೋಡಿ ಇಲ್ಲೂ ಈ ಶ್ರಮ ಉಳಿಸುವ ಉಪಾಯವನ್ನು ಅಳವಡಿಸಿಕೊಳ್ಳಬಹುದು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 hour ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

5 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

13 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

13 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

15 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

22 hours ago