Advertisement
ಸುದ್ದಿಗಳು

ಜ.12 : ವಿಟ್ಲದಲ್ಲಿ ಅಡಿಕೆ ಗೋಣಿಗೊನೆ ಪ್ರಾತ್ಯಕ್ಷಿಕೆ

Share

ಅಡಿಕೆ ಕೊಯ್ಲಿನ ಸಂದರ್ಭದಲ್ಲಿ ಕೃಷಿಕರಿಗೆ ಶ್ರಮ ಹಗುರ ಮಾಡುವ ಗೋಣಿಗೊನೆ ವಿಧಾನದ ಪ್ರಾತ್ಯಕ್ಷಿಕೆ ಜ.12  ರಂದು ವಿಟ್ಲ ಸಿಪಿಸಿಆರ್‌ ಐ ವಠಾರದಲ್ಲಿ ನಡೆಯಲಿದೆ. ಈ ಪ್ರಾತ್ಯಕ್ಷಿಕೆ ಕ್ಯಾಂಪ್ಕೋ ನೇತೃತ್ವದಲ್ಲಿ ನಡೆಯುವ ತರಬೇತಿ ಶಿಬಿರದ ಕೊನೆಯ ದಿನ ಪೂರ್ವಾಹ್ನ ನಡೆಯಲಿದೆ.

ಅಡಿಕೆ ಕೊಯ್ಯುವಾಗ ಬಿದ್ದ ಗೊನೆಯಿಂದ ಅಡಿಕೆ ಚದುರಿ ಹರಡಿದರೆ ಅದನ್ನು ಹೆಕ್ಕಲು ತುಂಬ ಆಳುಗಳು ಬೇಕು. ಈ ಸಮಸ್ಯೆ ನಿವಾರಿಸಲು ಉತ್ತರ ಕನ್ನಡ, ಚನ್ನಗಿರಿ ಮೊದಲಾದ ಕಡೆಗಳ  ಗೋಣಿಗೊನೆ ಹಾಗೂ ಪಾಟು ಹಾಕುವುದು,   ಮತ್ತು ಛಬ್ಬೆ ಹಿಡಿಯುವ ಕ್ರಮವನ್ನು ಅಡಿಕೆ ಬೆಳೆಗಾರರು ಬಹುಕಾಲದಿಂದ ಮಾಡುತ್ತಿದ್ದಾರೆ. ಅದೇ ಮಾದರಿ ದ ಕ ಜಿಲ್ಲೆಯ ಅಡಿಕೆ ಬೆಳೆಗಾರರಿಗೂ ಮಾಡಲು ಸಾಧ್ಯವಿದೆ.

    

ಈ ವಿಧಾನವನ್ನು ಕರಾವಳಿಯ ಕೃಷಿಕರಿಗೆ ಪರಿಚಯಿಸಲೆಂದೇ ತೀರ್ಥಹಳ್ಳಿಯ ಮಲೆನಾಡು ಕೃಷಿಕರ ಸಮುದಾಯ ಸಂಘದ ಅಧ್ಯಕ್ಷ, ಕೃಷಿಕ ಸತ್ಯನಾರಾಯಣ ಕೂಳೂರು ಕುಶಲಕರ್ಮಿಗಳನ್ನು ಕರೆತರಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿರುವ ತೀರ್ಥಹಳ್ಳಿಯ ಭಾಸ್ಕರ ಶೆಟ್ಟರಿಗೆ ಗೋಣಿಗೊನೆ ಹಿಡಿಯುವುದರಲ್ಲಿ ಮೂರು ದಶಕದ ಅನುಭವ ಇದೆ. ಈ ಭಾಗದಲ್ಲಿ ಬಿದಿರಿನ ದೋಟಿಯಲ್ಲಿ ಗೊನೆ ಕೊಯ್ಯುವಾಗಲೂ ಗೋಣಿಗೊನೆ ವಿಧಾನದಲ್ಲಿ ಅಡಿಕೆ ಉದುರದಂತೆ ನೋಡಿಕೊಳ್ಳಬಹುದು ಎನ್ನುತ್ತಾರೆ ಭಾಸ್ಕರ ಶೆಟ್ಟರು. ತೋಟದಲ್ಲಿ ಕೊಕ್ಕೋ ಮತ್ತಿತರ ಎಡೆ ಬೆಳೆ ಸಾಂದ್ರವಾಗಿ ಇರುವಲ್ಲಿ ಈ ಕ್ರಮ ಕಷ್ಟ.

          ಆಸಕ್ತ ಕೃಷಿಕರು ಈ ಪ್ರಾತ್ಯಕ್ಷಿಕೆ ನೋಡಿ ಇಲ್ಲೂ ಈ ಶ್ರಮ ಉಳಿಸುವ ಉಪಾಯವನ್ನು ಅಳವಡಿಸಿಕೊಳ್ಳಬಹುದು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago