Advertisement
ಸುದ್ದಿಗಳು

ಜ.12 : ವಿಟ್ಲದಲ್ಲಿ ಅಡಿಕೆ ಗೋಣಿಗೊನೆ ಪ್ರಾತ್ಯಕ್ಷಿಕೆ

Share

ಅಡಿಕೆ ಕೊಯ್ಲಿನ ಸಂದರ್ಭದಲ್ಲಿ ಕೃಷಿಕರಿಗೆ ಶ್ರಮ ಹಗುರ ಮಾಡುವ ಗೋಣಿಗೊನೆ ವಿಧಾನದ ಪ್ರಾತ್ಯಕ್ಷಿಕೆ ಜ.12  ರಂದು ವಿಟ್ಲ ಸಿಪಿಸಿಆರ್‌ ಐ ವಠಾರದಲ್ಲಿ ನಡೆಯಲಿದೆ. ಈ ಪ್ರಾತ್ಯಕ್ಷಿಕೆ ಕ್ಯಾಂಪ್ಕೋ ನೇತೃತ್ವದಲ್ಲಿ ನಡೆಯುವ ತರಬೇತಿ ಶಿಬಿರದ ಕೊನೆಯ ದಿನ ಪೂರ್ವಾಹ್ನ ನಡೆಯಲಿದೆ.

Advertisement
Advertisement

Advertisement

ಅಡಿಕೆ ಕೊಯ್ಯುವಾಗ ಬಿದ್ದ ಗೊನೆಯಿಂದ ಅಡಿಕೆ ಚದುರಿ ಹರಡಿದರೆ ಅದನ್ನು ಹೆಕ್ಕಲು ತುಂಬ ಆಳುಗಳು ಬೇಕು. ಈ ಸಮಸ್ಯೆ ನಿವಾರಿಸಲು ಉತ್ತರ ಕನ್ನಡ, ಚನ್ನಗಿರಿ ಮೊದಲಾದ ಕಡೆಗಳ  ಗೋಣಿಗೊನೆ ಹಾಗೂ ಪಾಟು ಹಾಕುವುದು,   ಮತ್ತು ಛಬ್ಬೆ ಹಿಡಿಯುವ ಕ್ರಮವನ್ನು ಅಡಿಕೆ ಬೆಳೆಗಾರರು ಬಹುಕಾಲದಿಂದ ಮಾಡುತ್ತಿದ್ದಾರೆ. ಅದೇ ಮಾದರಿ ದ ಕ ಜಿಲ್ಲೆಯ ಅಡಿಕೆ ಬೆಳೆಗಾರರಿಗೂ ಮಾಡಲು ಸಾಧ್ಯವಿದೆ.

Advertisement

    

ಈ ವಿಧಾನವನ್ನು ಕರಾವಳಿಯ ಕೃಷಿಕರಿಗೆ ಪರಿಚಯಿಸಲೆಂದೇ ತೀರ್ಥಹಳ್ಳಿಯ ಮಲೆನಾಡು ಕೃಷಿಕರ ಸಮುದಾಯ ಸಂಘದ ಅಧ್ಯಕ್ಷ, ಕೃಷಿಕ ಸತ್ಯನಾರಾಯಣ ಕೂಳೂರು ಕುಶಲಕರ್ಮಿಗಳನ್ನು ಕರೆತರಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿರುವ ತೀರ್ಥಹಳ್ಳಿಯ ಭಾಸ್ಕರ ಶೆಟ್ಟರಿಗೆ ಗೋಣಿಗೊನೆ ಹಿಡಿಯುವುದರಲ್ಲಿ ಮೂರು ದಶಕದ ಅನುಭವ ಇದೆ. ಈ ಭಾಗದಲ್ಲಿ ಬಿದಿರಿನ ದೋಟಿಯಲ್ಲಿ ಗೊನೆ ಕೊಯ್ಯುವಾಗಲೂ ಗೋಣಿಗೊನೆ ವಿಧಾನದಲ್ಲಿ ಅಡಿಕೆ ಉದುರದಂತೆ ನೋಡಿಕೊಳ್ಳಬಹುದು ಎನ್ನುತ್ತಾರೆ ಭಾಸ್ಕರ ಶೆಟ್ಟರು. ತೋಟದಲ್ಲಿ ಕೊಕ್ಕೋ ಮತ್ತಿತರ ಎಡೆ ಬೆಳೆ ಸಾಂದ್ರವಾಗಿ ಇರುವಲ್ಲಿ ಈ ಕ್ರಮ ಕಷ್ಟ.

Advertisement

          ಆಸಕ್ತ ಕೃಷಿಕರು ಈ ಪ್ರಾತ್ಯಕ್ಷಿಕೆ ನೋಡಿ ಇಲ್ಲೂ ಈ ಶ್ರಮ ಉಳಿಸುವ ಉಪಾಯವನ್ನು ಅಳವಡಿಸಿಕೊಳ್ಳಬಹುದು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 day ago