ಸುದ್ದಿಗಳು

ಅಡಿಕೆ ಆರೋಗ್ಯಕ್ಕೆ ಪೂರಕ – ಬೆಳೆಗಾರರಿಗೆ ಧೈರ್ಯ ತುಂಬಿದ ಕ್ಯಾಂಪ್ಕೊ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ವಿಶ್ವದ ಇತಿಹಾಸದಲ್ಲಿಅಡಿಕೆಯ ಬಳಕೆ ಇಂದು ನಿನ್ನೆಯದಲ್ಲ. ಅನಾದಿ ಕಾಲದಿಂದಲೂ ದೇಶ-ವಿದೇಶಗಳಲ್ಲಿ ಅಡಿಕೆಯನ್ನು ಬೇರೆ ಬೇರೆರೂಪದಲ್ಲಿ ಸೇವಿಸುತ್ತಾರೆ. ಎಂದಿಗೂ ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರಿಲ್ಲ ಎಂದು ಕ್ಯಾಂಪ್ಕೋ ಹೇಳಿದೆ.
Advertisement

ಇತಿಹಾಸದ ಪ್ರಕಾರ ಕ್ರಿಸ್ತಪೂರ್ವ ಕಾಲದಿಂದಲೇ ಜನರು ಅಡಿಕೆ ಜಗಿಯುತ್ತಿದ್ದ ಬಗ್ಗೆ ಪುರಾವೆಗಳಿವೆ. ಇದು ಭಾರತೀಯ ಪುರಾಣಗಳಲ್ಲೂ ವೇದ್ಯವಾಗಿರುವಂತಹ ವಿಚಾರವಾಗಿದೆ. ಆದರೆ ಬಹಳ ಹಿಂದಿನಿಂದಲೂ ಅಡಿಕೆಯು ಹಾನಿಕಾರಕವೆಂಬ ವಾದವು ಕೇಳಿಬರುತ್ತಿದ್ದು, ಇದು ಅಡಿಕೆ ಕೃಷಿಕರನ್ನು ಚಿಂತೆಗೀಡು ಮಾಡಿದೆ.

ಅಡಿಕೆಯು ಹಾನಿಕಾರಕವೆಂಬ ವಾದವು ಯಾವಾಗ ಹುಟ್ಟಿತೋ ಅಂದಿನಿಂದಲೂ ಅಡಿಕೆಯು ಹಾನಿಕಾರಕವಲ್ಲ, ಆದರೆ ಅಡಿಕೆಯಲ್ಲಿ ಕ್ಯಾನ್ಸರ್ ಗುಣಪಡಿಸುವ ಔಷಧೀಯ ತತ್ವಗಳಿವೆ ಎಂಬ ಬಗ್ಗೆ ವಾದಗಳು ಮತ್ತು ಸಂಶೋಧನೆಗಳು ನಡೆದೇ ಇವೆ ಮತ್ತು ಪ್ರತೀ ಸಂಶೋಧನೆಗಳಲ್ಲೂ ಇದುಆರೋಗ್ಯಕ್ಕೆ ಪೂರಕವೆಂದೇ ಸಾಬೀತಾಗಿದೆ. ಜಗತ್ತಿನ ಬೇರೆ ಬೇರೆ ಕಡೆಗಳಲ್ಲಿ ಪ್ರಸಿದ್ಧ ಸಂಶೋಧಕರು ಹಾಗೂ ಸಂಶೋಧನಾಲಯಗಳು ಈ ಬಗ್ಗೆ ಸಂಶೋಧನೆಗಳನ್ನು ನಡೆಸಿದ್ದು, ಅಡಿಕೆಯು ಕ್ಯಾನ್ಸರ್ ಜೀವಕಣಗಳನ್ನು ನಿರ್ಜೀವಗೊಳಿಸುವ ಶಕ್ತಿಯನ್ನು ಹೊಂದಿದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದ್ದು, ಕೇವಲ ಅಡಿಕೆಯನ್ನು ವೀಳ್ಯದೆಲೆಯೊಂದಿಗೆ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ಸಾಧ್ಯತೆಯಿಲ್ಲಎಂಬುದಾಗಿ ಸಂಶೋಧಕರು ಪ್ರತಿಪಾದಿಸಿದ್ದಾರೆ.

ಅಡಿಕೆಯು ಅನಘ್ರ್ಯ ಔಷಧೀಯ ಗುಣಗಳನ್ನು ಹೊಂದಿದ್ದು, ಮನುಷ್ಯನ ಮತ್ತು ಪ್ರಾಣಿಗಳ ಹಲವಾರು ಖಾಯಿಲೆಗಳಿಗೆ ಉತ್ತಮ ಔಷಧವನ್ನಾಗಿ ಬಳಸಬಹುದಾಗಿದೆ. 1974ರಲ್ಲಿ ಇಂಡಿಯನ್‍ ಇನ್ಸ್ಟಿಟ್ಯೂಟ್‍ ಆಫ್ ಸೈನ್ಸ್ ಇಲ್ಲಿನ ವಿಜ್ಞಾನಿಗಳು ಅಡಿಕೆ‌ ಕ್ಯಾನ್ಸರ್ ಗುಣಪಡಿಸುವ ಶಕ್ತಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ. 2016ರಲ್ಲಿ ಅಮೇರಿಕಾದ ಖ್ಯಾತ ಎಮೆರಿ ವಿಶ್ವವಿದ್ಯಾಲಯದಲ್ಲಿ ನಡೆಸಿದ ಸಂಶೋಧನೆಯಿಂದ ಅಡಿಕೆಕ್ಯಾನ್ಸರ್‌  ಗುಣಪಡಿಸುವಲ್ಲಿ ರಾಮಬಾಣವಾಗಿದೆ ಎಂದು ಕಂಡುಕೊಳ್ಳಲಾಗಿದೆ. ಇದಲ್ಲದೆ ಅಡಿಕೆಗೆ ಸಕ್ಕರೆ ಖಾಯಿಲೆ, ಕೊಬ್ಬು ಮತ್ತು ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ನಿವಾರಿಸುವ ಶಕ್ತಿಯಿದ್ದು, ಅಲ್ಜಿಮರ್, ಮರೆಗುಳಿತನ ಗುಣಪಡಿಸುವ ಸಾಮಥ್ರ್ಯವನ್ನು ಹೊಂದಿದೆ ಎಂದು ಹಲವಾರು ಸಂಶೋಧನೆಗಳಿಂದ ದೃಢಪಟ್ಟಿದೆ.

ಪ್ರಾಣಿಗಳಲ್ಲಿನ ಹೊಟ್ಟೆಹುಳದ ನಾಶ, ಚರ್ಮರೋಗ ನಿವಾರಣೆ, ಗಾಯಗಳನ್ನು ಗುಣಪಡಿಸಲು ಅಡಿಕೆ ಉಪಯುಕ್ತ ಔಷಧಿಯಾಗಿದ್ದು, ವಿಷಜಂತುಗಳ ಕಡಿತದಿಂದ ಆಗುವ ಅಪಾಯಗಳನ್ನು ತಡೆಗಟ್ಟುವವಿಷಹಾರಿಯಾಗಿಯೂ ಬಳಸಬಹುದು ಎಂಬುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ವಿಚಾರವನ್ನು ಬಹಳ ಮೊದಲೇ ಚೀನಾದಲ್ಲಿ ಸಂಶೋಧನೆ ಮಾಡಿದ್ದು ಚೀನಾದ‘ಮೆಟೀರಿಯ ಮೆಡಿಕಾ’ಔಷಧೀಯ ಪುಸ್ತಕದಲ್ಲಿ ಈ ಎಲ್ಲಾ ವಿಚಾರಗಳನ್ನು ಉಲ್ಲೇಖಿಸಲಾಗಿದೆ.

Advertisement

ಅಡಿಕೆಯು ಹಾನಿಕಾರಕವೆಂಬ ವಾದ ತೀರಾ ಅವೈಜ್ಞಾನಿಕವಾಗಿದ್ದು, ಇದು ಅಡಿಕೆ ಮಾರುಕಟ್ಟೆಯನ್ನು ಅಸ್ಥಿರಗೊಳಿಸುವ ಹುನ್ನಾರವಾಗಿದೆ. ಪ್ರಸ್ತುತ, ರಾಜ್ಯದ ಕೆಲವು ಪ್ರತಿಷ್ಠಿತ ಆಯುರ್ವೇದಿಕ್ ಪ್ರಯೋಗಾಲಯಗಳಲ್ಲಿ ಅಡಿಕೆಯ ಔಷಧೀಯ ಗುಣಗಳ ಬಗ್ಗೆ ಕ್ಯಾಂಪ್ಕೊ ಸಹಕಾರದೊಂದಿಗೆ ಸಂಶೋಧನೆಗಳು  ನಡೆಯುತ್ತಿದೆ ಎಂದು ಕ್ಯಾಂಪ್ಕೊ ಪ್ರಕಟಣೆ ತಿಳಿಸಿದೆ.

ಅಡಿಕೆ ಕೃಷಿಕರು ಯಾವುದೇ ಕಾರಣಕ್ಕೂ ಚಿಂತಿತರಾಗುವ ಅಗತ್ಯವಿಲ್ಲ ಎಂದು ಕ್ಯಾಂಪ್ಕೊ ಅಡಿಕೆ ಬೆಳೆಗಾರರಿಗೆ ಧೈರ್ಯ ತುಂಬಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

5 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

9 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago