ಇತಿಹಾಸದ ಪ್ರಕಾರ ಕ್ರಿಸ್ತಪೂರ್ವ ಕಾಲದಿಂದಲೇ ಜನರು ಅಡಿಕೆ ಜಗಿಯುತ್ತಿದ್ದ ಬಗ್ಗೆ ಪುರಾವೆಗಳಿವೆ. ಇದು ಭಾರತೀಯ ಪುರಾಣಗಳಲ್ಲೂ ವೇದ್ಯವಾಗಿರುವಂತಹ ವಿಚಾರವಾಗಿದೆ. ಆದರೆ ಬಹಳ ಹಿಂದಿನಿಂದಲೂ ಅಡಿಕೆಯು ಹಾನಿಕಾರಕವೆಂಬ ವಾದವು ಕೇಳಿಬರುತ್ತಿದ್ದು, ಇದು ಅಡಿಕೆ ಕೃಷಿಕರನ್ನು ಚಿಂತೆಗೀಡು ಮಾಡಿದೆ.
ಅಡಿಕೆಯು ಹಾನಿಕಾರಕವೆಂಬ ವಾದವು ಯಾವಾಗ ಹುಟ್ಟಿತೋ ಅಂದಿನಿಂದಲೂ ಅಡಿಕೆಯು ಹಾನಿಕಾರಕವಲ್ಲ, ಆದರೆ ಅಡಿಕೆಯಲ್ಲಿ ಕ್ಯಾನ್ಸರ್ ಗುಣಪಡಿಸುವ ಔಷಧೀಯ ತತ್ವಗಳಿವೆ ಎಂಬ ಬಗ್ಗೆ ವಾದಗಳು ಮತ್ತು ಸಂಶೋಧನೆಗಳು ನಡೆದೇ ಇವೆ ಮತ್ತು ಪ್ರತೀ ಸಂಶೋಧನೆಗಳಲ್ಲೂ ಇದುಆರೋಗ್ಯಕ್ಕೆ ಪೂರಕವೆಂದೇ ಸಾಬೀತಾಗಿದೆ. ಜಗತ್ತಿನ ಬೇರೆ ಬೇರೆ ಕಡೆಗಳಲ್ಲಿ ಪ್ರಸಿದ್ಧ ಸಂಶೋಧಕರು ಹಾಗೂ ಸಂಶೋಧನಾಲಯಗಳು ಈ ಬಗ್ಗೆ ಸಂಶೋಧನೆಗಳನ್ನು ನಡೆಸಿದ್ದು, ಅಡಿಕೆಯು ಕ್ಯಾನ್ಸರ್ ಜೀವಕಣಗಳನ್ನು ನಿರ್ಜೀವಗೊಳಿಸುವ ಶಕ್ತಿಯನ್ನು ಹೊಂದಿದೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದ್ದು, ಕೇವಲ ಅಡಿಕೆಯನ್ನು ವೀಳ್ಯದೆಲೆಯೊಂದಿಗೆ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ಸಾಧ್ಯತೆಯಿಲ್ಲಎಂಬುದಾಗಿ ಸಂಶೋಧಕರು ಪ್ರತಿಪಾದಿಸಿದ್ದಾರೆ.
ಅಡಿಕೆಯು ಅನಘ್ರ್ಯ ಔಷಧೀಯ ಗುಣಗಳನ್ನು ಹೊಂದಿದ್ದು, ಮನುಷ್ಯನ ಮತ್ತು ಪ್ರಾಣಿಗಳ ಹಲವಾರು ಖಾಯಿಲೆಗಳಿಗೆ ಉತ್ತಮ ಔಷಧವನ್ನಾಗಿ ಬಳಸಬಹುದಾಗಿದೆ. 1974ರಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಇಲ್ಲಿನ ವಿಜ್ಞಾನಿಗಳು ಅಡಿಕೆ ಕ್ಯಾನ್ಸರ್ ಗುಣಪಡಿಸುವ ಶಕ್ತಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ. 2016ರಲ್ಲಿ ಅಮೇರಿಕಾದ ಖ್ಯಾತ ಎಮೆರಿ ವಿಶ್ವವಿದ್ಯಾಲಯದಲ್ಲಿ ನಡೆಸಿದ ಸಂಶೋಧನೆಯಿಂದ ಅಡಿಕೆಕ್ಯಾನ್ಸರ್ ಗುಣಪಡಿಸುವಲ್ಲಿ ರಾಮಬಾಣವಾಗಿದೆ ಎಂದು ಕಂಡುಕೊಳ್ಳಲಾಗಿದೆ. ಇದಲ್ಲದೆ ಅಡಿಕೆಗೆ ಸಕ್ಕರೆ ಖಾಯಿಲೆ, ಕೊಬ್ಬು ಮತ್ತು ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ನಿವಾರಿಸುವ ಶಕ್ತಿಯಿದ್ದು, ಅಲ್ಜಿಮರ್, ಮರೆಗುಳಿತನ ಗುಣಪಡಿಸುವ ಸಾಮಥ್ರ್ಯವನ್ನು ಹೊಂದಿದೆ ಎಂದು ಹಲವಾರು ಸಂಶೋಧನೆಗಳಿಂದ ದೃಢಪಟ್ಟಿದೆ.
ಪ್ರಾಣಿಗಳಲ್ಲಿನ ಹೊಟ್ಟೆಹುಳದ ನಾಶ, ಚರ್ಮರೋಗ ನಿವಾರಣೆ, ಗಾಯಗಳನ್ನು ಗುಣಪಡಿಸಲು ಅಡಿಕೆ ಉಪಯುಕ್ತ ಔಷಧಿಯಾಗಿದ್ದು, ವಿಷಜಂತುಗಳ ಕಡಿತದಿಂದ ಆಗುವ ಅಪಾಯಗಳನ್ನು ತಡೆಗಟ್ಟುವವಿಷಹಾರಿಯಾಗಿಯೂ ಬಳಸಬಹುದು ಎಂಬುದು ಸಂಶೋಧನೆಯಿಂದ ದೃಢಪಟ್ಟಿದೆ. ಈ ವಿಚಾರವನ್ನು ಬಹಳ ಮೊದಲೇ ಚೀನಾದಲ್ಲಿ ಸಂಶೋಧನೆ ಮಾಡಿದ್ದು ಚೀನಾದ‘ಮೆಟೀರಿಯ ಮೆಡಿಕಾ’ಔಷಧೀಯ ಪುಸ್ತಕದಲ್ಲಿ ಈ ಎಲ್ಲಾ ವಿಚಾರಗಳನ್ನು ಉಲ್ಲೇಖಿಸಲಾಗಿದೆ.
ಅಡಿಕೆಯು ಹಾನಿಕಾರಕವೆಂಬ ವಾದ ತೀರಾ ಅವೈಜ್ಞಾನಿಕವಾಗಿದ್ದು, ಇದು ಅಡಿಕೆ ಮಾರುಕಟ್ಟೆಯನ್ನು ಅಸ್ಥಿರಗೊಳಿಸುವ ಹುನ್ನಾರವಾಗಿದೆ. ಪ್ರಸ್ತುತ, ರಾಜ್ಯದ ಕೆಲವು ಪ್ರತಿಷ್ಠಿತ ಆಯುರ್ವೇದಿಕ್ ಪ್ರಯೋಗಾಲಯಗಳಲ್ಲಿ ಅಡಿಕೆಯ ಔಷಧೀಯ ಗುಣಗಳ ಬಗ್ಗೆ ಕ್ಯಾಂಪ್ಕೊ ಸಹಕಾರದೊಂದಿಗೆ ಸಂಶೋಧನೆಗಳು ನಡೆಯುತ್ತಿದೆ ಎಂದು ಕ್ಯಾಂಪ್ಕೊ ಪ್ರಕಟಣೆ ತಿಳಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…