Advertisement
MIRROR FOCUS

Arecanut | ತೆರಿಗೆ ಉದ್ದೇಶಕ್ಕಾಗಿ ಅಡಿಕೆಯ ದರ್ಜೆಯನ್ನು ಘೋಷಿಸುವ ಅಗತ್ಯವಿಲ್ಲ |

Share

ಶಾಸನಬದ್ಧ ಅಧಿಸೂಚನೆಯು ಅಡಿಕೆಗೆ ನಿರ್ದಿಷ್ಟ ತೆರಿಗೆ ದರವನ್ನು ನಿಗದಿಪಡಿಸಿದಾಗ ಅಡಿಕೆಯ ದರ್ಜೆ ಮತ್ತು ಗುಣಮಟ್ಟವನ್ನು ಸಹ ಘೋಷಿಸಬೇಕು ಎಂಬ ಅಭಿಪ್ರಾಯ ಸರಿಯಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಹೇಳಿದೆ.

Advertisement
Advertisement
Advertisement
Advertisement

ಅಡಿಕೆ (Arecanut ) ಮಾರಾಟಗಾರರಿಗೆ ಸಂಬಂಧಿಸಿದ ತೀರ್ಪಿನ  ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಈ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಅಡಿಕೆ ಮಾರಾಟಗಾರರಿಗೆ ಸಂಬಂಧಿಸಿದ ತೀರ್ಪಿನಲ್ಲಿ ತೆರಿಗೆ ಉದ್ದೇಶಕ್ಕಾಗಿ ಅಡಿಕೆಯ ದರ್ಜೆಯನ್ನು ಘೋಷಿಸುವ ಅಗತ್ಯವಿಲ್ಲ ಎಂಬ ಅಂಶ ಉಲ್ಲೇಖಿಸಿದ್ದಾರೆ.

Advertisement

ಈ ಪ್ರಕರಣದಲ್ಲಿ ಅರ್ಜಿದಾರ ಕಂಪನಿಗೆ ಸೇರಿದ ಏಳು ಟ್ರಕ್‌ಗಳನ್ನು ಸೆಪ್ಟೆಂಬರ್ 2021 ರಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ನಂತರ ತೆರಿಗೆ ವಂಚನೆಗಾಗಿ ಜಪ್ತಿ ಮಾಡಲಾಯಿತು. ಅಡಿಕೆ ಸಾಗಾಟದ ಸಂದರ್ಭ ಅಡಿಕೆಯ ದರ್ಜೆಯಲ್ಲಿನ ವ್ಯತ್ಯಾಸ ಕಂಡುಬರುತ್ತದೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಮೌಲ್ಯ ಹೊಂದಿದ್ದರೂ ಅಡಿಕೆಯ ದರ್ಜೆಯಲ್ಲಿನ ವ್ಯತ್ಯಾಸ ತೋರಿಸಿ ಸಾಗಿಸಲಾಗುತ್ತದೆ. ಹೀಗಾಗಿ ಅಡಿಕೆಯ ದರ್ಜೆಯನ್ನು ಬಹಿರಂಗಪಡಿಸದಿರುವುದು ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಸಿಜಿಎಸ್‌ಟಿ) ನಿಯಮಗಳ ಅಡಿಯಲ್ಲಿ ಕಡಿಮೆ ಮೌಲ್ಯಮಾಪನವಾಗಿದೆ. ಇದರಿಂದ ತೆರಿಗೆ ನಷ್ಟವಾಗುತ್ತಿದೆ ಎಂದು ದೂರುಗಳು ಇತ್ತು.

ಸಿಜಿಎಸ್‌ ಟಿ  ಅಡಿಯಲ್ಲಿ ನಿರ್ದಿಷ್ಟ ಸಂದರ್ಭಗಳಲ್ಲಿ ಹೊರತು ಸರಕುಗಳ ಮಾರುಕಟ್ಟೆ ಮೌಲ್ಯವು ಪ್ರಸ್ತುತವಾಗಿರುವುದಿಲ್ಲ. ಎಲ್ಲಾ ಸಾಮಾನ್ಯ ಉದ್ದೇಶಗಳಿಗಾಗಿ, ಕಾಯಿದೆಯ ಸೆಕ್ಷನ್ 15 ರ ಪ್ರಕಾರ ಮೌಲ್ಯವನ್ನು ನಿರ್ಧರಿಸಬೇಕು ಅದು ನಿಜವಾಗಿ ಪಾವತಿಸಿದ ಅಥವಾ ಪಾವತಿಸಬೇಕಾದ ಬೆಲೆಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…

1 hour ago

ಕುಂಭಸ್ನಾನ ಮತ್ತು ವಿಜ್ಞಾನ

ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…

1 hour ago

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

12 hours ago

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

23 hours ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

23 hours ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

23 hours ago