Advertisement
MIRROR FOCUS

Arecanut | ತೆರಿಗೆ ಉದ್ದೇಶಕ್ಕಾಗಿ ಅಡಿಕೆಯ ದರ್ಜೆಯನ್ನು ಘೋಷಿಸುವ ಅಗತ್ಯವಿಲ್ಲ |

Share

ಶಾಸನಬದ್ಧ ಅಧಿಸೂಚನೆಯು ಅಡಿಕೆಗೆ ನಿರ್ದಿಷ್ಟ ತೆರಿಗೆ ದರವನ್ನು ನಿಗದಿಪಡಿಸಿದಾಗ ಅಡಿಕೆಯ ದರ್ಜೆ ಮತ್ತು ಗುಣಮಟ್ಟವನ್ನು ಸಹ ಘೋಷಿಸಬೇಕು ಎಂಬ ಅಭಿಪ್ರಾಯ ಸರಿಯಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಹೇಳಿದೆ.

ಅಡಿಕೆ (Arecanut ) ಮಾರಾಟಗಾರರಿಗೆ ಸಂಬಂಧಿಸಿದ ತೀರ್ಪಿನ  ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಈ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಅಡಿಕೆ ಮಾರಾಟಗಾರರಿಗೆ ಸಂಬಂಧಿಸಿದ ತೀರ್ಪಿನಲ್ಲಿ ತೆರಿಗೆ ಉದ್ದೇಶಕ್ಕಾಗಿ ಅಡಿಕೆಯ ದರ್ಜೆಯನ್ನು ಘೋಷಿಸುವ ಅಗತ್ಯವಿಲ್ಲ ಎಂಬ ಅಂಶ ಉಲ್ಲೇಖಿಸಿದ್ದಾರೆ.

ಈ ಪ್ರಕರಣದಲ್ಲಿ ಅರ್ಜಿದಾರ ಕಂಪನಿಗೆ ಸೇರಿದ ಏಳು ಟ್ರಕ್‌ಗಳನ್ನು ಸೆಪ್ಟೆಂಬರ್ 2021 ರಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ನಂತರ ತೆರಿಗೆ ವಂಚನೆಗಾಗಿ ಜಪ್ತಿ ಮಾಡಲಾಯಿತು. ಅಡಿಕೆ ಸಾಗಾಟದ ಸಂದರ್ಭ ಅಡಿಕೆಯ ದರ್ಜೆಯಲ್ಲಿನ ವ್ಯತ್ಯಾಸ ಕಂಡುಬರುತ್ತದೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಮೌಲ್ಯ ಹೊಂದಿದ್ದರೂ ಅಡಿಕೆಯ ದರ್ಜೆಯಲ್ಲಿನ ವ್ಯತ್ಯಾಸ ತೋರಿಸಿ ಸಾಗಿಸಲಾಗುತ್ತದೆ. ಹೀಗಾಗಿ ಅಡಿಕೆಯ ದರ್ಜೆಯನ್ನು ಬಹಿರಂಗಪಡಿಸದಿರುವುದು ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಸಿಜಿಎಸ್‌ಟಿ) ನಿಯಮಗಳ ಅಡಿಯಲ್ಲಿ ಕಡಿಮೆ ಮೌಲ್ಯಮಾಪನವಾಗಿದೆ. ಇದರಿಂದ ತೆರಿಗೆ ನಷ್ಟವಾಗುತ್ತಿದೆ ಎಂದು ದೂರುಗಳು ಇತ್ತು.

ಸಿಜಿಎಸ್‌ ಟಿ  ಅಡಿಯಲ್ಲಿ ನಿರ್ದಿಷ್ಟ ಸಂದರ್ಭಗಳಲ್ಲಿ ಹೊರತು ಸರಕುಗಳ ಮಾರುಕಟ್ಟೆ ಮೌಲ್ಯವು ಪ್ರಸ್ತುತವಾಗಿರುವುದಿಲ್ಲ. ಎಲ್ಲಾ ಸಾಮಾನ್ಯ ಉದ್ದೇಶಗಳಿಗಾಗಿ, ಕಾಯಿದೆಯ ಸೆಕ್ಷನ್ 15 ರ ಪ್ರಕಾರ ಮೌಲ್ಯವನ್ನು ನಿರ್ಧರಿಸಬೇಕು ಅದು ನಿಜವಾಗಿ ಪಾವತಿಸಿದ ಅಥವಾ ಪಾವತಿಸಬೇಕಾದ ಬೆಲೆಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago