Advertisement
ಸುದ್ದಿಗಳು

#arecanut |ದೆಹಲಿಗೆ ತಲಪಿದ ಅಡಿಕೆ ಬೆಳೆಗಾರರ ಸಮಸ್ಯೆ | ಕೇಂದ್ರ ಸಚಿವರುಗಳಿಂದ ನಿಯೋಗಕ್ಕೆ ಸಕಾರಾತ್ಮಕ ಸ್ಪಂದನೆ |

Share

ಕರ್ನಾಟಕದ ಅಡಿಕೆ ಬೆಳೆಗಾರರ ಪ್ರಸ್ತುತ ಸಮಸ್ಯೆಗಳು ಈಗ ದೆಹಲಿಗೆ ತಲುಪಿದೆ. ಬೆಳೆಗಾರರ ಸಮಸ್ಯೆಯ ಬಗ್ಗೆ ರಾಜ್ಯದ ಗೃಹ ಸಚಿವ ಅಡಿಕೆ ಟಾಸ್ಕ್‌ ಫೋರ್ಸ್‌ ಸಮಿತಿ ಅಧ್ಯಕ್ಷ, ಸ್ವತ: ಅಡಿಕೆ ಬೆಳೆಗಾರರೂ ಆಗಿರುವ ಅರಗ ಜ್ಞಾನೇಂದ್ರ ಮತ್ತು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹಾಗೂ  ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ನೇತೃತ್ವದ ನಿಯೋಗ ಕೇಂದ್ರದ ವಿವಿಧ ಸಚಿವರುಗಳ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭ ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರದ ಬಗ್ಗೆ ಹಾಗೂ ಮಾರುಕಟ್ಟೆ ಸ್ಥಿರತೆಗೆ ಬೇಕಾದ ಸರ್ಕಾರ ನೀತಿಗಳಲ್ಲಿ ಬದಲಾವಣೆಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಗಳನ್ನೊಳಗೊಂಡ ನಿಯೋಗವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಮನ್‌ ಅವರನ್ನು  ಭೇಟಿ ಮಾಡಿದ ನಿಯೋಗ ವಿವಿಧ ಬೇಡಿಕೆ ಮಂಡಿಸಿತು. CIB/FCO 1985 ಪರವಾನಗಿ ಅಡಿಯಲ್ಲಿ ತಯಾರಿಸಲ್ಪಡುವ ಕಾಪರ್‌ ಸಲ್ಫೇಟ್‌ ಮೇಲೆ ಶೇ 5 ಜಿ ಎಸ್ಟಿ ವಿಧಿಸುವುದು ಹಾಗೂ  ಕೃಷಿಕರಿಗೆ ಅನುಕೂಲವಾಗುವ ಕಾರ್ಬನ್‌ ಫೈಬರ್‌ ದೋಟಿಯ ಮೇಲಿನ ಆಮದು ಸುಂಕ ಕಡಿಮೆ ಮಾಡಲು ಹಾಗೂ ಅಡಿಕೆ ಮೇಲಿನ ಜಿಎಸ್ಟಿ ಕಡಿಮೆ ಮಾಡಲಯ ಮನವಿ ಮಾಡಲಾಯಿತು.

ಬಳಿಕ ನಿಯೋಗವು ಕೇಂದ್ರ ಕೃಷಿ ಸಚಿವರ ನರೇಂದ್ರ ಸಿಂಗ್‌ ತೋಮರ್‌ ಭೇಟಿ ಮಾಡಿ, ಅಡಿಕೆಯ ಮೇಲಿನ ತೇವಾಂಶದ ಗರಿಷ್ಠ ಮಿತಿಯನ್ನು ಶೇ.11 ಕ್ಕೆ ಹೆಚ್ಚಿಸಿ FSSAI ಮೂಲಕ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿತು. FSSAI ಈಗಾಗಲೇ ಅಡಿಕೆಯ ತೇವಾಂಶದ ಗರಿಷ್ಠ ಮಿತಿಯನ್ನು ಶೇ.7 ಕ್ಕೆ ನಿಗದಿಪಡಿಸಿತ್ತು. ಇದರಿಂದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಆಗಿತ್ತು. ಮಳೆಗಾಲ ಹಾಗೂ ಆ ನಂತರದ ಅಡಿಕೆಯ ತೇವಾಂಶದ ಕಾರಣದಿಂದ ಅಡಿಕೆ ಮಾರಾಟಕ್ಕೆ ಸಮಸ್ಯೆ ಆಗಿತ್ತು. ಇದಕ್ಕಾಗಿ ಕ್ಯಾಂಪ್ಕೋ ಹಾಗೂ ಸಿಪಿಸಿಆರ್‌ ಐ, ಎ ಆರ್‌ ಡಿಎಫ್‌, ಅಖಿಲ ಭಾರತ ಅಡಿಕೆ ಬೆಳೆಗಾರರ ತಂಡವು ಕಳೆದ ವರ್ಷ ತೇವಾಂಶ ಏರಿಕೆ ಮಾಡಲು ಅಗತ್ಯ ಕ್ರಮಗಳ ಬಗ್ಗೆ ಸಭೆ ನಡೆಸಿತ್ತು.

ಬಳಿಕ ನಿಯೋಗವು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಿ,  ಅಡಿಕೆ ಆಮದು ಕಾರಣದಿಂದ ಅಡಿಕೆ ಧಾರಣೆ ಏರಿಳಿತವಾಗುತ್ತಿದೆ. ಇದರಿಂದ ಅಡಿಕೆ ಬೆಳೆಗಾರರಿಗೆ ಧಾರಣೆ ಸ್ಥಿರತೆ ಕಷ್ಟವಾಗುತ್ತಿದೆ ಎಂದು ಮನವರಿಕೆ ಮಾಡಿ, ಸದ್ಯ ಅಡಿಕೆ ಉತ್ಪಾದನಾ ವೆಚ್ಚವೂ ಹೆಚ್ಚಾದ ಕಾರಣದ ಅದಕ್ಕೆ ಅನುಸಾರವಾಗಿ ಅಡಿಕೆಯ ಆಮದು ದರವನ್ನು ಏರಿಕೆಗೆ ಒತ್ತಾಯ ಮಾಡಲಾಯಿತು. ಚಾಲಿ ಅಡಿಕೆ ಕೆಜಿಗೆ 360 ರೂಪಾಯಿ ಮತ್ತು ಕೆಂಪಡಿಕೆಗೆ 420 ರೂಪಾಯಿಗೆ ಆಮದು ದರ ನಿಗದಿ ಮಾಡಲು ಮನವಿ ಮಾಡಲಾಯಿತು. ಎರಡೂ ಬೇಡಿಕೆಗೆ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿದರು.

ನಿಯೋಗದಲ್ಲಿ ಮಂಜಪ್ಪ ಹೊಸಬಾಳೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಜೀವರಾಜ್, ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕರಾದ ಎಚ್ .ಎಂ.ಕೃಷ್ಣಕುಮಾರ್, ಅಡಿಕೆ ಮಹಾಮಂಡಳದ ಅಧ್ಯಕ್ಷರಾದ ಸುಬ್ರಹ್ಮಣ್ಯ ಎಡಗೆರೆ, ಅಖಿಲ ಭಾರತ ಸಹಕಾರ ಭಾರತೀಯ ಸಂರಕ್ಷಕ ಸುರೇಶ್‌ ವೈದ್ಯ, ತುಮ್ಕೋಸ್ ಅಧ್ಯಕ್ಷ ಆರ್.ಎಂ.ರವಿ, ಕ್ಯಾಂಪ್ಕೊ ನಿರ್ದೇಶಕರು ಮತ್ತು ಸಹಕಾರ ಭಾರತಿಯ ರಾಜ್ಯಕಾರ್ಯದರ್ಶಿ ಕೃಷ್ಣಪ್ರಸಾದ್ ಮಡ್ತಿಲ, ಟಿಎಸ್‌ಎಸ್  ನಿರ್ದೇಶಕ  ಶಶಾಂಕ್ಎ ಸ್. ಹೆಗಡೆ ಹಾಗೂ ಮಹಾಮಂಡಳದ ನಿರ್ದೇಶಕರಾದ ಶಿವಕುಮಾರ್ ಭಾಗವಹಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

6 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

8 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

15 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

21 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago