Advertisement
ಸುದ್ದಿಗಳು

#arecanut |ದೆಹಲಿಗೆ ತಲಪಿದ ಅಡಿಕೆ ಬೆಳೆಗಾರರ ಸಮಸ್ಯೆ | ಕೇಂದ್ರ ಸಚಿವರುಗಳಿಂದ ನಿಯೋಗಕ್ಕೆ ಸಕಾರಾತ್ಮಕ ಸ್ಪಂದನೆ |

Share

ಕರ್ನಾಟಕದ ಅಡಿಕೆ ಬೆಳೆಗಾರರ ಪ್ರಸ್ತುತ ಸಮಸ್ಯೆಗಳು ಈಗ ದೆಹಲಿಗೆ ತಲುಪಿದೆ. ಬೆಳೆಗಾರರ ಸಮಸ್ಯೆಯ ಬಗ್ಗೆ ರಾಜ್ಯದ ಗೃಹ ಸಚಿವ ಅಡಿಕೆ ಟಾಸ್ಕ್‌ ಫೋರ್ಸ್‌ ಸಮಿತಿ ಅಧ್ಯಕ್ಷ, ಸ್ವತ: ಅಡಿಕೆ ಬೆಳೆಗಾರರೂ ಆಗಿರುವ ಅರಗ ಜ್ಞಾನೇಂದ್ರ ಮತ್ತು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹಾಗೂ  ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ನೇತೃತ್ವದ ನಿಯೋಗ ಕೇಂದ್ರದ ವಿವಿಧ ಸಚಿವರುಗಳ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭ ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರದ ಬಗ್ಗೆ ಹಾಗೂ ಮಾರುಕಟ್ಟೆ ಸ್ಥಿರತೆಗೆ ಬೇಕಾದ ಸರ್ಕಾರ ನೀತಿಗಳಲ್ಲಿ ಬದಲಾವಣೆಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಗಳನ್ನೊಳಗೊಂಡ ನಿಯೋಗವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಮನ್‌ ಅವರನ್ನು  ಭೇಟಿ ಮಾಡಿದ ನಿಯೋಗ ವಿವಿಧ ಬೇಡಿಕೆ ಮಂಡಿಸಿತು. CIB/FCO 1985 ಪರವಾನಗಿ ಅಡಿಯಲ್ಲಿ ತಯಾರಿಸಲ್ಪಡುವ ಕಾಪರ್‌ ಸಲ್ಫೇಟ್‌ ಮೇಲೆ ಶೇ 5 ಜಿ ಎಸ್ಟಿ ವಿಧಿಸುವುದು ಹಾಗೂ  ಕೃಷಿಕರಿಗೆ ಅನುಕೂಲವಾಗುವ ಕಾರ್ಬನ್‌ ಫೈಬರ್‌ ದೋಟಿಯ ಮೇಲಿನ ಆಮದು ಸುಂಕ ಕಡಿಮೆ ಮಾಡಲು ಹಾಗೂ ಅಡಿಕೆ ಮೇಲಿನ ಜಿಎಸ್ಟಿ ಕಡಿಮೆ ಮಾಡಲಯ ಮನವಿ ಮಾಡಲಾಯಿತು.

ಬಳಿಕ ನಿಯೋಗವು ಕೇಂದ್ರ ಕೃಷಿ ಸಚಿವರ ನರೇಂದ್ರ ಸಿಂಗ್‌ ತೋಮರ್‌ ಭೇಟಿ ಮಾಡಿ, ಅಡಿಕೆಯ ಮೇಲಿನ ತೇವಾಂಶದ ಗರಿಷ್ಠ ಮಿತಿಯನ್ನು ಶೇ.11 ಕ್ಕೆ ಹೆಚ್ಚಿಸಿ FSSAI ಮೂಲಕ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿತು. FSSAI ಈಗಾಗಲೇ ಅಡಿಕೆಯ ತೇವಾಂಶದ ಗರಿಷ್ಠ ಮಿತಿಯನ್ನು ಶೇ.7 ಕ್ಕೆ ನಿಗದಿಪಡಿಸಿತ್ತು. ಇದರಿಂದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಆಗಿತ್ತು. ಮಳೆಗಾಲ ಹಾಗೂ ಆ ನಂತರದ ಅಡಿಕೆಯ ತೇವಾಂಶದ ಕಾರಣದಿಂದ ಅಡಿಕೆ ಮಾರಾಟಕ್ಕೆ ಸಮಸ್ಯೆ ಆಗಿತ್ತು. ಇದಕ್ಕಾಗಿ ಕ್ಯಾಂಪ್ಕೋ ಹಾಗೂ ಸಿಪಿಸಿಆರ್‌ ಐ, ಎ ಆರ್‌ ಡಿಎಫ್‌, ಅಖಿಲ ಭಾರತ ಅಡಿಕೆ ಬೆಳೆಗಾರರ ತಂಡವು ಕಳೆದ ವರ್ಷ ತೇವಾಂಶ ಏರಿಕೆ ಮಾಡಲು ಅಗತ್ಯ ಕ್ರಮಗಳ ಬಗ್ಗೆ ಸಭೆ ನಡೆಸಿತ್ತು.

ಬಳಿಕ ನಿಯೋಗವು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಿ,  ಅಡಿಕೆ ಆಮದು ಕಾರಣದಿಂದ ಅಡಿಕೆ ಧಾರಣೆ ಏರಿಳಿತವಾಗುತ್ತಿದೆ. ಇದರಿಂದ ಅಡಿಕೆ ಬೆಳೆಗಾರರಿಗೆ ಧಾರಣೆ ಸ್ಥಿರತೆ ಕಷ್ಟವಾಗುತ್ತಿದೆ ಎಂದು ಮನವರಿಕೆ ಮಾಡಿ, ಸದ್ಯ ಅಡಿಕೆ ಉತ್ಪಾದನಾ ವೆಚ್ಚವೂ ಹೆಚ್ಚಾದ ಕಾರಣದ ಅದಕ್ಕೆ ಅನುಸಾರವಾಗಿ ಅಡಿಕೆಯ ಆಮದು ದರವನ್ನು ಏರಿಕೆಗೆ ಒತ್ತಾಯ ಮಾಡಲಾಯಿತು. ಚಾಲಿ ಅಡಿಕೆ ಕೆಜಿಗೆ 360 ರೂಪಾಯಿ ಮತ್ತು ಕೆಂಪಡಿಕೆಗೆ 420 ರೂಪಾಯಿಗೆ ಆಮದು ದರ ನಿಗದಿ ಮಾಡಲು ಮನವಿ ಮಾಡಲಾಯಿತು. ಎರಡೂ ಬೇಡಿಕೆಗೆ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿದರು.

ನಿಯೋಗದಲ್ಲಿ ಮಂಜಪ್ಪ ಹೊಸಬಾಳೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಜೀವರಾಜ್, ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕರಾದ ಎಚ್ .ಎಂ.ಕೃಷ್ಣಕುಮಾರ್, ಅಡಿಕೆ ಮಹಾಮಂಡಳದ ಅಧ್ಯಕ್ಷರಾದ ಸುಬ್ರಹ್ಮಣ್ಯ ಎಡಗೆರೆ, ಅಖಿಲ ಭಾರತ ಸಹಕಾರ ಭಾರತೀಯ ಸಂರಕ್ಷಕ ಸುರೇಶ್‌ ವೈದ್ಯ, ತುಮ್ಕೋಸ್ ಅಧ್ಯಕ್ಷ ಆರ್.ಎಂ.ರವಿ, ಕ್ಯಾಂಪ್ಕೊ ನಿರ್ದೇಶಕರು ಮತ್ತು ಸಹಕಾರ ಭಾರತಿಯ ರಾಜ್ಯಕಾರ್ಯದರ್ಶಿ ಕೃಷ್ಣಪ್ರಸಾದ್ ಮಡ್ತಿಲ, ಟಿಎಸ್‌ಎಸ್  ನಿರ್ದೇಶಕ  ಶಶಾಂಕ್ಎ ಸ್. ಹೆಗಡೆ ಹಾಗೂ ಮಹಾಮಂಡಳದ ನಿರ್ದೇಶಕರಾದ ಶಿವಕುಮಾರ್ ಭಾಗವಹಿಸಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

3 minutes ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

8 minutes ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

9 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

10 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

10 hours ago