Advertisement
ಸುದ್ದಿಗಳು

#arecanut |ದೆಹಲಿಗೆ ತಲಪಿದ ಅಡಿಕೆ ಬೆಳೆಗಾರರ ಸಮಸ್ಯೆ | ಕೇಂದ್ರ ಸಚಿವರುಗಳಿಂದ ನಿಯೋಗಕ್ಕೆ ಸಕಾರಾತ್ಮಕ ಸ್ಪಂದನೆ |

Share

ಕರ್ನಾಟಕದ ಅಡಿಕೆ ಬೆಳೆಗಾರರ ಪ್ರಸ್ತುತ ಸಮಸ್ಯೆಗಳು ಈಗ ದೆಹಲಿಗೆ ತಲುಪಿದೆ. ಬೆಳೆಗಾರರ ಸಮಸ್ಯೆಯ ಬಗ್ಗೆ ರಾಜ್ಯದ ಗೃಹ ಸಚಿವ ಅಡಿಕೆ ಟಾಸ್ಕ್‌ ಫೋರ್ಸ್‌ ಸಮಿತಿ ಅಧ್ಯಕ್ಷ, ಸ್ವತ: ಅಡಿಕೆ ಬೆಳೆಗಾರರೂ ಆಗಿರುವ ಅರಗ ಜ್ಞಾನೇಂದ್ರ ಮತ್ತು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹಾಗೂ  ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ನೇತೃತ್ವದ ನಿಯೋಗ ಕೇಂದ್ರದ ವಿವಿಧ ಸಚಿವರುಗಳ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭ ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರದ ಬಗ್ಗೆ ಹಾಗೂ ಮಾರುಕಟ್ಟೆ ಸ್ಥಿರತೆಗೆ ಬೇಕಾದ ಸರ್ಕಾರ ನೀತಿಗಳಲ್ಲಿ ಬದಲಾವಣೆಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಗಳನ್ನೊಳಗೊಂಡ ನಿಯೋಗವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಮನ್‌ ಅವರನ್ನು  ಭೇಟಿ ಮಾಡಿದ ನಿಯೋಗ ವಿವಿಧ ಬೇಡಿಕೆ ಮಂಡಿಸಿತು. CIB/FCO 1985 ಪರವಾನಗಿ ಅಡಿಯಲ್ಲಿ ತಯಾರಿಸಲ್ಪಡುವ ಕಾಪರ್‌ ಸಲ್ಫೇಟ್‌ ಮೇಲೆ ಶೇ 5 ಜಿ ಎಸ್ಟಿ ವಿಧಿಸುವುದು ಹಾಗೂ  ಕೃಷಿಕರಿಗೆ ಅನುಕೂಲವಾಗುವ ಕಾರ್ಬನ್‌ ಫೈಬರ್‌ ದೋಟಿಯ ಮೇಲಿನ ಆಮದು ಸುಂಕ ಕಡಿಮೆ ಮಾಡಲು ಹಾಗೂ ಅಡಿಕೆ ಮೇಲಿನ ಜಿಎಸ್ಟಿ ಕಡಿಮೆ ಮಾಡಲಯ ಮನವಿ ಮಾಡಲಾಯಿತು.

ಬಳಿಕ ನಿಯೋಗವು ಕೇಂದ್ರ ಕೃಷಿ ಸಚಿವರ ನರೇಂದ್ರ ಸಿಂಗ್‌ ತೋಮರ್‌ ಭೇಟಿ ಮಾಡಿ, ಅಡಿಕೆಯ ಮೇಲಿನ ತೇವಾಂಶದ ಗರಿಷ್ಠ ಮಿತಿಯನ್ನು ಶೇ.11 ಕ್ಕೆ ಹೆಚ್ಚಿಸಿ FSSAI ಮೂಲಕ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿತು. FSSAI ಈಗಾಗಲೇ ಅಡಿಕೆಯ ತೇವಾಂಶದ ಗರಿಷ್ಠ ಮಿತಿಯನ್ನು ಶೇ.7 ಕ್ಕೆ ನಿಗದಿಪಡಿಸಿತ್ತು. ಇದರಿಂದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಆಗಿತ್ತು. ಮಳೆಗಾಲ ಹಾಗೂ ಆ ನಂತರದ ಅಡಿಕೆಯ ತೇವಾಂಶದ ಕಾರಣದಿಂದ ಅಡಿಕೆ ಮಾರಾಟಕ್ಕೆ ಸಮಸ್ಯೆ ಆಗಿತ್ತು. ಇದಕ್ಕಾಗಿ ಕ್ಯಾಂಪ್ಕೋ ಹಾಗೂ ಸಿಪಿಸಿಆರ್‌ ಐ, ಎ ಆರ್‌ ಡಿಎಫ್‌, ಅಖಿಲ ಭಾರತ ಅಡಿಕೆ ಬೆಳೆಗಾರರ ತಂಡವು ಕಳೆದ ವರ್ಷ ತೇವಾಂಶ ಏರಿಕೆ ಮಾಡಲು ಅಗತ್ಯ ಕ್ರಮಗಳ ಬಗ್ಗೆ ಸಭೆ ನಡೆಸಿತ್ತು.

ಬಳಿಕ ನಿಯೋಗವು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಿ,  ಅಡಿಕೆ ಆಮದು ಕಾರಣದಿಂದ ಅಡಿಕೆ ಧಾರಣೆ ಏರಿಳಿತವಾಗುತ್ತಿದೆ. ಇದರಿಂದ ಅಡಿಕೆ ಬೆಳೆಗಾರರಿಗೆ ಧಾರಣೆ ಸ್ಥಿರತೆ ಕಷ್ಟವಾಗುತ್ತಿದೆ ಎಂದು ಮನವರಿಕೆ ಮಾಡಿ, ಸದ್ಯ ಅಡಿಕೆ ಉತ್ಪಾದನಾ ವೆಚ್ಚವೂ ಹೆಚ್ಚಾದ ಕಾರಣದ ಅದಕ್ಕೆ ಅನುಸಾರವಾಗಿ ಅಡಿಕೆಯ ಆಮದು ದರವನ್ನು ಏರಿಕೆಗೆ ಒತ್ತಾಯ ಮಾಡಲಾಯಿತು. ಚಾಲಿ ಅಡಿಕೆ ಕೆಜಿಗೆ 360 ರೂಪಾಯಿ ಮತ್ತು ಕೆಂಪಡಿಕೆಗೆ 420 ರೂಪಾಯಿಗೆ ಆಮದು ದರ ನಿಗದಿ ಮಾಡಲು ಮನವಿ ಮಾಡಲಾಯಿತು. ಎರಡೂ ಬೇಡಿಕೆಗೆ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿದರು.

ನಿಯೋಗದಲ್ಲಿ ಮಂಜಪ್ಪ ಹೊಸಬಾಳೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಜೀವರಾಜ್, ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕರಾದ ಎಚ್ .ಎಂ.ಕೃಷ್ಣಕುಮಾರ್, ಅಡಿಕೆ ಮಹಾಮಂಡಳದ ಅಧ್ಯಕ್ಷರಾದ ಸುಬ್ರಹ್ಮಣ್ಯ ಎಡಗೆರೆ, ಅಖಿಲ ಭಾರತ ಸಹಕಾರ ಭಾರತೀಯ ಸಂರಕ್ಷಕ ಸುರೇಶ್‌ ವೈದ್ಯ, ತುಮ್ಕೋಸ್ ಅಧ್ಯಕ್ಷ ಆರ್.ಎಂ.ರವಿ, ಕ್ಯಾಂಪ್ಕೊ ನಿರ್ದೇಶಕರು ಮತ್ತು ಸಹಕಾರ ಭಾರತಿಯ ರಾಜ್ಯಕಾರ್ಯದರ್ಶಿ ಕೃಷ್ಣಪ್ರಸಾದ್ ಮಡ್ತಿಲ, ಟಿಎಸ್‌ಎಸ್  ನಿರ್ದೇಶಕ  ಶಶಾಂಕ್ಎ ಸ್. ಹೆಗಡೆ ಹಾಗೂ ಮಹಾಮಂಡಳದ ನಿರ್ದೇಶಕರಾದ ಶಿವಕುಮಾರ್ ಭಾಗವಹಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

4 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago