Advertisement
MIRROR FOCUS

ಅಡಿಕೆ ಬೆಳೆ ಸಮಸ್ಯೆ ಬಗೆಹರಿಸುವಂತೆ ಅಯೋಧ್ಯೆ ಶ್ರೀ ರಾಮನ ಮೊರೆ ಹೋದ ಅಡಿಕೆ ಬೆಳೆಗಾರರು | ಮಲೆನಾಡಿನ ರೈತರಿಂದ ಅಡಿಕೆ ಹಿಂಗಾರ ಸಮರ್ಪಣೆಗೆ ಸಿದ್ಧತೆ |

Share

ರೈತರ(Farmer) ಸಮಸ್ಯೆ ಸದಾ ಇರುತ್ತೆ. ಅದಕ್ಕೆ ಪರಿಹಾರ ಕೊಡಲು ಸರ್ಕಾರಕ್ಕೆ(Govt) ಸಾಧ್ಯವೇ ಆಗುತ್ತಿಲ್ಲ. ಹಾಗಾಗಿ ಈಚೆಗೆ   ರೈತರು ದೇವರ ಮೇಲೆ ಭಾರ ಹಾಕುವಂತಾಗಿದೆ. ಅದರಲ್ಲೂ ಮಲೆನಾಡು(Malenadu), ಕರಾವಳಿ(coastal) ಭಾಗದ ರೈತರು ನಾನಾ ರೀತಿಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಮಲೆನಾಡು ಭಾಗದ ರೈತರು ಅಯೋಧ್ಯೆಯ ರಾಮನಲ್ಲಿ (Ayodhya Ram Mandir) ಬೇಡಿಕೊಂಡಿದ್ದಾರೆ. ಅಡಿಕೆ ಬೆಳೆಗೆ(Arecanut) ವಿವಿಧ ಸಮಸ್ಯೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶ್ರೀ ರಾಮನಿಗೆ ಅಡಿಕೆ ಸಿಂಗಾರ ಅರ್ಪಿಸಲು ನಿರ್ಧರಿಸಿದ್ದಾರೆ.

Advertisement
Advertisement

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ 50ಕ್ಕೂ ರಾಮ ಭಕ್ತರು ಅಯೋಧ್ಯೆಯ ಬಾಲರಾಮನ ದರ್ಶನಕ್ಕೆ ಹೊರಟಿದ್ದಾರೆ. ಅಯೋಧ್ಯೆಗೆ ಹೋಗುವ ಮುನ್ನ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮಾರ್ಕಂಡೇಶ್ವರ ದೇವಾಲಯಕ್ಕೆ ಮಲೆನಾಡಿನ ಅಡಿಕೆಯ ಹಿಂಗಾರವನ್ನು ಇಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅದೇ ಹಿಂಗಾರವನ್ನ ಅಯೋಧ್ಯೆಯ ರಾಮನಿಗೆ ಪೂಜೆ ಸಲ್ಲಿಸಲು ಕೊಂಡೊಯ್ದಿದ್ದಾರೆ.

ಮಲೆನಾಡಿನಲ್ಲಿ ನಾನಾ ರೀತಿಯ ಸಮಸ್ಯೆಗಳಿವೆ. ಹಳದಿ ಎಲೆ ರೋಗದಿಂದ ಅಡಿಕೆ ಬೆಳೆಗಾರರ ಬದುಕು ಬೀದಿಗೆ ಬಂದಿದೆ. ಕಸ್ತೂರಿರಂಗನ್ ವರದಿ, ಬಫರ್ ಜ್ಹೋನ್ ಸೇರಿದಂತೆ ಮೀಸಲು ಅರಣ್ಯದ ಹೆಸರಿನಲ್ಲಿ ಆಳುವ ವರ್ಗ ಯೋಚಿಸದೆ ಮಾಡಿದ ಕಾನೂನಿನ ಕುಣಿಕೆಗೆ ಮಲೆನಾಡಿಗರು ಬೆಲೆ ತೆರುವಂತಾಗಿದೆ. ಹಾಗಾಗಿ ನಮ್ಮ ಸಮಸ್ಯೆಯನ್ನು ಬಗೆಹರಿಸು ಭಗವಂತ ಎಂದು ಮಾರ್ಕಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಅಯೋಧ್ಯೆಗೆ ಹೊರಟಿದ್ದಾರೆ. ಈಚೆಗೆ ಅಡಿಕೆ ಹಳದಿ ರೋಗ ಕೂಡಾ ಅಡಿಕೆ ಬೆಳೆಗಾರರನ್ನು ಕಾಡುತ್ತಿದೆ. ಹೀಗಾಗಿ ರಾಜಕೀಯ ಪಕ್ಷಗಳು ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಬರುತ್ತಿಲ್ಲ, ರಾಜಕಾರಣಿಗಳು ಆಟವಾಡುತ್ತಿದ್ದಾರೆ. ಇದೆಲ್ಲದರ ನಡುವೆ ದೇವರ ಗತಿ ಎನ್ನುವ ಸ್ಥಿತಿಯಾಗಿದೆ.

ರಾಮಭಕ್ತರು ಮಾರ್ಕಂಡೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ಮಲೆನಾಡಿನ ಹಿಂಗಾರು ಸಮೇತ ಅಯೋಧ್ಯೆಗೆ ಹೊರಟಿದ್ದಾರೆ. ಅದೇ ಹಿಂಗಾರದಲ್ಲಿ ಅಯೋಧ್ಯೆಯ ರಾಮಲಲ್ಲನಿಗೆ ಪೂಜೆ ಸಲ್ಲಿಸಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಬೇಡಿಕೊಳ್ಳಲಿದ್ದಾರೆ.

– ಅಂತರ್ಜಾಲ ಮಾಹಿತಿ

Farmers of Malenadu and coastal areas are suffering from various problems. Farmers of hilly areas have begged Ayodhya Ram Mandir to solve their problems. In the background of various problems appearing in the arecanut crop, it has been decided to offer Arecanut Singara to Sri Rama.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

14 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

15 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

15 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

15 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

23 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

24 hours ago