MIRROR FOCUS

ಅಡಿಕೆ ಬೆಳೆ ಸಮಸ್ಯೆ ಬಗೆಹರಿಸುವಂತೆ ಅಯೋಧ್ಯೆ ಶ್ರೀ ರಾಮನ ಮೊರೆ ಹೋದ ಅಡಿಕೆ ಬೆಳೆಗಾರರು | ಮಲೆನಾಡಿನ ರೈತರಿಂದ ಅಡಿಕೆ ಹಿಂಗಾರ ಸಮರ್ಪಣೆಗೆ ಸಿದ್ಧತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರೈತರ(Farmer) ಸಮಸ್ಯೆ ಸದಾ ಇರುತ್ತೆ. ಅದಕ್ಕೆ ಪರಿಹಾರ ಕೊಡಲು ಸರ್ಕಾರಕ್ಕೆ(Govt) ಸಾಧ್ಯವೇ ಆಗುತ್ತಿಲ್ಲ. ಹಾಗಾಗಿ ಈಚೆಗೆ   ರೈತರು ದೇವರ ಮೇಲೆ ಭಾರ ಹಾಕುವಂತಾಗಿದೆ. ಅದರಲ್ಲೂ ಮಲೆನಾಡು(Malenadu), ಕರಾವಳಿ(coastal) ಭಾಗದ ರೈತರು ನಾನಾ ರೀತಿಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಮಲೆನಾಡು ಭಾಗದ ರೈತರು ಅಯೋಧ್ಯೆಯ ರಾಮನಲ್ಲಿ (Ayodhya Ram Mandir) ಬೇಡಿಕೊಂಡಿದ್ದಾರೆ. ಅಡಿಕೆ ಬೆಳೆಗೆ(Arecanut) ವಿವಿಧ ಸಮಸ್ಯೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶ್ರೀ ರಾಮನಿಗೆ ಅಡಿಕೆ ಸಿಂಗಾರ ಅರ್ಪಿಸಲು ನಿರ್ಧರಿಸಿದ್ದಾರೆ.

Advertisement
Advertisement

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ 50ಕ್ಕೂ ರಾಮ ಭಕ್ತರು ಅಯೋಧ್ಯೆಯ ಬಾಲರಾಮನ ದರ್ಶನಕ್ಕೆ ಹೊರಟಿದ್ದಾರೆ. ಅಯೋಧ್ಯೆಗೆ ಹೋಗುವ ಮುನ್ನ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮಾರ್ಕಂಡೇಶ್ವರ ದೇವಾಲಯಕ್ಕೆ ಮಲೆನಾಡಿನ ಅಡಿಕೆಯ ಹಿಂಗಾರವನ್ನು ಇಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅದೇ ಹಿಂಗಾರವನ್ನ ಅಯೋಧ್ಯೆಯ ರಾಮನಿಗೆ ಪೂಜೆ ಸಲ್ಲಿಸಲು ಕೊಂಡೊಯ್ದಿದ್ದಾರೆ.

ಮಲೆನಾಡಿನಲ್ಲಿ ನಾನಾ ರೀತಿಯ ಸಮಸ್ಯೆಗಳಿವೆ. ಹಳದಿ ಎಲೆ ರೋಗದಿಂದ ಅಡಿಕೆ ಬೆಳೆಗಾರರ ಬದುಕು ಬೀದಿಗೆ ಬಂದಿದೆ. ಕಸ್ತೂರಿರಂಗನ್ ವರದಿ, ಬಫರ್ ಜ್ಹೋನ್ ಸೇರಿದಂತೆ ಮೀಸಲು ಅರಣ್ಯದ ಹೆಸರಿನಲ್ಲಿ ಆಳುವ ವರ್ಗ ಯೋಚಿಸದೆ ಮಾಡಿದ ಕಾನೂನಿನ ಕುಣಿಕೆಗೆ ಮಲೆನಾಡಿಗರು ಬೆಲೆ ತೆರುವಂತಾಗಿದೆ. ಹಾಗಾಗಿ ನಮ್ಮ ಸಮಸ್ಯೆಯನ್ನು ಬಗೆಹರಿಸು ಭಗವಂತ ಎಂದು ಮಾರ್ಕಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಅಯೋಧ್ಯೆಗೆ ಹೊರಟಿದ್ದಾರೆ. ಈಚೆಗೆ ಅಡಿಕೆ ಹಳದಿ ರೋಗ ಕೂಡಾ ಅಡಿಕೆ ಬೆಳೆಗಾರರನ್ನು ಕಾಡುತ್ತಿದೆ. ಹೀಗಾಗಿ ರಾಜಕೀಯ ಪಕ್ಷಗಳು ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಬರುತ್ತಿಲ್ಲ, ರಾಜಕಾರಣಿಗಳು ಆಟವಾಡುತ್ತಿದ್ದಾರೆ. ಇದೆಲ್ಲದರ ನಡುವೆ ದೇವರ ಗತಿ ಎನ್ನುವ ಸ್ಥಿತಿಯಾಗಿದೆ.

ರಾಮಭಕ್ತರು ಮಾರ್ಕಂಡೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ಮಲೆನಾಡಿನ ಹಿಂಗಾರು ಸಮೇತ ಅಯೋಧ್ಯೆಗೆ ಹೊರಟಿದ್ದಾರೆ. ಅದೇ ಹಿಂಗಾರದಲ್ಲಿ ಅಯೋಧ್ಯೆಯ ರಾಮಲಲ್ಲನಿಗೆ ಪೂಜೆ ಸಲ್ಲಿಸಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಬೇಡಿಕೊಳ್ಳಲಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement

Farmers of Malenadu and coastal areas are suffering from various problems. Farmers of hilly areas have begged Ayodhya Ram Mandir to solve their problems. In the background of various problems appearing in the arecanut crop, it has been decided to offer Arecanut Singara to Sri Rama.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 hour ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

19 hours ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

1 day ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

1 day ago