Advertisement
MIRROR FOCUS

ಅಡಿಕೆ ಬೆಳೆ ಸಮಸ್ಯೆ ಬಗೆಹರಿಸುವಂತೆ ಅಯೋಧ್ಯೆ ಶ್ರೀ ರಾಮನ ಮೊರೆ ಹೋದ ಅಡಿಕೆ ಬೆಳೆಗಾರರು | ಮಲೆನಾಡಿನ ರೈತರಿಂದ ಅಡಿಕೆ ಹಿಂಗಾರ ಸಮರ್ಪಣೆಗೆ ಸಿದ್ಧತೆ |

Share

ರೈತರ(Farmer) ಸಮಸ್ಯೆ ಸದಾ ಇರುತ್ತೆ. ಅದಕ್ಕೆ ಪರಿಹಾರ ಕೊಡಲು ಸರ್ಕಾರಕ್ಕೆ(Govt) ಸಾಧ್ಯವೇ ಆಗುತ್ತಿಲ್ಲ. ಹಾಗಾಗಿ ಈಚೆಗೆ   ರೈತರು ದೇವರ ಮೇಲೆ ಭಾರ ಹಾಕುವಂತಾಗಿದೆ. ಅದರಲ್ಲೂ ಮಲೆನಾಡು(Malenadu), ಕರಾವಳಿ(coastal) ಭಾಗದ ರೈತರು ನಾನಾ ರೀತಿಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಮಲೆನಾಡು ಭಾಗದ ರೈತರು ಅಯೋಧ್ಯೆಯ ರಾಮನಲ್ಲಿ (Ayodhya Ram Mandir) ಬೇಡಿಕೊಂಡಿದ್ದಾರೆ. ಅಡಿಕೆ ಬೆಳೆಗೆ(Arecanut) ವಿವಿಧ ಸಮಸ್ಯೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶ್ರೀ ರಾಮನಿಗೆ ಅಡಿಕೆ ಸಿಂಗಾರ ಅರ್ಪಿಸಲು ನಿರ್ಧರಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ 50ಕ್ಕೂ ರಾಮ ಭಕ್ತರು ಅಯೋಧ್ಯೆಯ ಬಾಲರಾಮನ ದರ್ಶನಕ್ಕೆ ಹೊರಟಿದ್ದಾರೆ. ಅಯೋಧ್ಯೆಗೆ ಹೋಗುವ ಮುನ್ನ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮಾರ್ಕಂಡೇಶ್ವರ ದೇವಾಲಯಕ್ಕೆ ಮಲೆನಾಡಿನ ಅಡಿಕೆಯ ಹಿಂಗಾರವನ್ನು ಇಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅದೇ ಹಿಂಗಾರವನ್ನ ಅಯೋಧ್ಯೆಯ ರಾಮನಿಗೆ ಪೂಜೆ ಸಲ್ಲಿಸಲು ಕೊಂಡೊಯ್ದಿದ್ದಾರೆ.

ಮಲೆನಾಡಿನಲ್ಲಿ ನಾನಾ ರೀತಿಯ ಸಮಸ್ಯೆಗಳಿವೆ. ಹಳದಿ ಎಲೆ ರೋಗದಿಂದ ಅಡಿಕೆ ಬೆಳೆಗಾರರ ಬದುಕು ಬೀದಿಗೆ ಬಂದಿದೆ. ಕಸ್ತೂರಿರಂಗನ್ ವರದಿ, ಬಫರ್ ಜ್ಹೋನ್ ಸೇರಿದಂತೆ ಮೀಸಲು ಅರಣ್ಯದ ಹೆಸರಿನಲ್ಲಿ ಆಳುವ ವರ್ಗ ಯೋಚಿಸದೆ ಮಾಡಿದ ಕಾನೂನಿನ ಕುಣಿಕೆಗೆ ಮಲೆನಾಡಿಗರು ಬೆಲೆ ತೆರುವಂತಾಗಿದೆ. ಹಾಗಾಗಿ ನಮ್ಮ ಸಮಸ್ಯೆಯನ್ನು ಬಗೆಹರಿಸು ಭಗವಂತ ಎಂದು ಮಾರ್ಕಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಅಯೋಧ್ಯೆಗೆ ಹೊರಟಿದ್ದಾರೆ. ಈಚೆಗೆ ಅಡಿಕೆ ಹಳದಿ ರೋಗ ಕೂಡಾ ಅಡಿಕೆ ಬೆಳೆಗಾರರನ್ನು ಕಾಡುತ್ತಿದೆ. ಹೀಗಾಗಿ ರಾಜಕೀಯ ಪಕ್ಷಗಳು ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಬರುತ್ತಿಲ್ಲ, ರಾಜಕಾರಣಿಗಳು ಆಟವಾಡುತ್ತಿದ್ದಾರೆ. ಇದೆಲ್ಲದರ ನಡುವೆ ದೇವರ ಗತಿ ಎನ್ನುವ ಸ್ಥಿತಿಯಾಗಿದೆ.

ರಾಮಭಕ್ತರು ಮಾರ್ಕಂಡೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ಮಲೆನಾಡಿನ ಹಿಂಗಾರು ಸಮೇತ ಅಯೋಧ್ಯೆಗೆ ಹೊರಟಿದ್ದಾರೆ. ಅದೇ ಹಿಂಗಾರದಲ್ಲಿ ಅಯೋಧ್ಯೆಯ ರಾಮಲಲ್ಲನಿಗೆ ಪೂಜೆ ಸಲ್ಲಿಸಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಬೇಡಿಕೊಳ್ಳಲಿದ್ದಾರೆ.

– ಅಂತರ್ಜಾಲ ಮಾಹಿತಿ

Farmers of Malenadu and coastal areas are suffering from various problems. Farmers of hilly areas have begged Ayodhya Ram Mandir to solve their problems. In the background of various problems appearing in the arecanut crop, it has been decided to offer Arecanut Singara to Sri Rama.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

9 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

18 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

22 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago