Advertisement
MIRROR FOCUS

ಅಡಿಕೆ ಬೆಳೆ ಸಮಸ್ಯೆ ಬಗೆಹರಿಸುವಂತೆ ಅಯೋಧ್ಯೆ ಶ್ರೀ ರಾಮನ ಮೊರೆ ಹೋದ ಅಡಿಕೆ ಬೆಳೆಗಾರರು | ಮಲೆನಾಡಿನ ರೈತರಿಂದ ಅಡಿಕೆ ಹಿಂಗಾರ ಸಮರ್ಪಣೆಗೆ ಸಿದ್ಧತೆ |

Share

ರೈತರ(Farmer) ಸಮಸ್ಯೆ ಸದಾ ಇರುತ್ತೆ. ಅದಕ್ಕೆ ಪರಿಹಾರ ಕೊಡಲು ಸರ್ಕಾರಕ್ಕೆ(Govt) ಸಾಧ್ಯವೇ ಆಗುತ್ತಿಲ್ಲ. ಹಾಗಾಗಿ ಈಚೆಗೆ   ರೈತರು ದೇವರ ಮೇಲೆ ಭಾರ ಹಾಕುವಂತಾಗಿದೆ. ಅದರಲ್ಲೂ ಮಲೆನಾಡು(Malenadu), ಕರಾವಳಿ(coastal) ಭಾಗದ ರೈತರು ನಾನಾ ರೀತಿಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಮಲೆನಾಡು ಭಾಗದ ರೈತರು ಅಯೋಧ್ಯೆಯ ರಾಮನಲ್ಲಿ (Ayodhya Ram Mandir) ಬೇಡಿಕೊಂಡಿದ್ದಾರೆ. ಅಡಿಕೆ ಬೆಳೆಗೆ(Arecanut) ವಿವಿಧ ಸಮಸ್ಯೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶ್ರೀ ರಾಮನಿಗೆ ಅಡಿಕೆ ಸಿಂಗಾರ ಅರ್ಪಿಸಲು ನಿರ್ಧರಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ 50ಕ್ಕೂ ರಾಮ ಭಕ್ತರು ಅಯೋಧ್ಯೆಯ ಬಾಲರಾಮನ ದರ್ಶನಕ್ಕೆ ಹೊರಟಿದ್ದಾರೆ. ಅಯೋಧ್ಯೆಗೆ ಹೋಗುವ ಮುನ್ನ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮಾರ್ಕಂಡೇಶ್ವರ ದೇವಾಲಯಕ್ಕೆ ಮಲೆನಾಡಿನ ಅಡಿಕೆಯ ಹಿಂಗಾರವನ್ನು ಇಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅದೇ ಹಿಂಗಾರವನ್ನ ಅಯೋಧ್ಯೆಯ ರಾಮನಿಗೆ ಪೂಜೆ ಸಲ್ಲಿಸಲು ಕೊಂಡೊಯ್ದಿದ್ದಾರೆ.

ಮಲೆನಾಡಿನಲ್ಲಿ ನಾನಾ ರೀತಿಯ ಸಮಸ್ಯೆಗಳಿವೆ. ಹಳದಿ ಎಲೆ ರೋಗದಿಂದ ಅಡಿಕೆ ಬೆಳೆಗಾರರ ಬದುಕು ಬೀದಿಗೆ ಬಂದಿದೆ. ಕಸ್ತೂರಿರಂಗನ್ ವರದಿ, ಬಫರ್ ಜ್ಹೋನ್ ಸೇರಿದಂತೆ ಮೀಸಲು ಅರಣ್ಯದ ಹೆಸರಿನಲ್ಲಿ ಆಳುವ ವರ್ಗ ಯೋಚಿಸದೆ ಮಾಡಿದ ಕಾನೂನಿನ ಕುಣಿಕೆಗೆ ಮಲೆನಾಡಿಗರು ಬೆಲೆ ತೆರುವಂತಾಗಿದೆ. ಹಾಗಾಗಿ ನಮ್ಮ ಸಮಸ್ಯೆಯನ್ನು ಬಗೆಹರಿಸು ಭಗವಂತ ಎಂದು ಮಾರ್ಕಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಅಯೋಧ್ಯೆಗೆ ಹೊರಟಿದ್ದಾರೆ. ಈಚೆಗೆ ಅಡಿಕೆ ಹಳದಿ ರೋಗ ಕೂಡಾ ಅಡಿಕೆ ಬೆಳೆಗಾರರನ್ನು ಕಾಡುತ್ತಿದೆ. ಹೀಗಾಗಿ ರಾಜಕೀಯ ಪಕ್ಷಗಳು ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಬರುತ್ತಿಲ್ಲ, ರಾಜಕಾರಣಿಗಳು ಆಟವಾಡುತ್ತಿದ್ದಾರೆ. ಇದೆಲ್ಲದರ ನಡುವೆ ದೇವರ ಗತಿ ಎನ್ನುವ ಸ್ಥಿತಿಯಾಗಿದೆ.

ರಾಮಭಕ್ತರು ಮಾರ್ಕಂಡೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ಮಲೆನಾಡಿನ ಹಿಂಗಾರು ಸಮೇತ ಅಯೋಧ್ಯೆಗೆ ಹೊರಟಿದ್ದಾರೆ. ಅದೇ ಹಿಂಗಾರದಲ್ಲಿ ಅಯೋಧ್ಯೆಯ ರಾಮಲಲ್ಲನಿಗೆ ಪೂಜೆ ಸಲ್ಲಿಸಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಬೇಡಿಕೊಳ್ಳಲಿದ್ದಾರೆ.

– ಅಂತರ್ಜಾಲ ಮಾಹಿತಿ

Farmers of Malenadu and coastal areas are suffering from various problems. Farmers of hilly areas have begged Ayodhya Ram Mandir to solve their problems. In the background of various problems appearing in the arecanut crop, it has been decided to offer Arecanut Singara to Sri Rama.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

4 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

12 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

18 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago