Advertisement
MIRROR FOCUS

ಅಡಿಕೆ ಆಮದು ತಡೆಗೆ ತಕ್ಷಣವೇ ಸೂಕ್ತ ಕ್ರಮಕ್ಕೆ ಬೆಳೆಗಾರರ ಸಂಘ ಒತ್ತಾಯ

Share

ಕಳೆದ ಕೆಲವು ದಿನಗಳಿಂದ ಅಡಿಕೆ ಆಮದು ಬಗ್ಗೆ ಸುದ್ದಿಗಳು ವಿವಿಧ ಮಾಧ್ಯಮಗಳ ಮೂಲಕ ಬೆಳಕಿಗೆ ಬರುತ್ತಿದೆ.ಇದರ ಜೊತೆಗೇ ಅಡಿಕೆ ಮಾರುಕಟ್ಟೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಹೀಗಾಗಿ ಅಡಿಕೆ ಆಮದು ತಡೆಗೆ ಸರ್ಕಾರಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ. ಈ ಬಗ್ಗೆ ಪ್ರಧಾನಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮತ್ತು ಜಿಲ್ಲೆ ಸಂಸದರಿಗೆ ಪತ್ರದ ಮೂಲಕ ಒತ್ತಾಯಿಸಿದೆ.

ಅಡಿಕೆ ಬೆಳೆಗಾರರು ಈಗಾಗಲೇ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಕೆಲವು ಸಮಯಗಳಿಂದ ಉತ್ತಮ ಧಾರಣೆಯ ಕಾರಣದಿಂದ ಕೃಷಿ ಕೆಲಸಗಳು ಸರಾಗ ಸಾಗುತ್ತಿತ್ತು. ಕೃಷಿ ಬೆಳೆವಣಿಗೆಗೂ ಕಾರಣವಾಗಿತ್ತು. ಧಾರಣೆ ಏರಿಕೆಯ ಬೆನ್ನಲ್ಲೇ ಅಡಿಕೆ ಆಮದು ಸುದ್ದಿಗಳು ಕೇಳಿಬರುತ್ತಿತ್ತು. ಅಲ್ಲಲ್ಲಿ ಇಲಾಖೆಗಳು ಪತ್ತೆ ಕಾರ್ಯ ಮಾಡುತ್ತಿದ್ದರು. ಇದೀಗ ಅಡಿಕೆ ಆಮದು ಸುದ್ದಿಗಳು ಮತ್ತೆ ಅಡಿಕೆ ಬೆಳೆಗಾರರನ್ನು ಕಂಗೆಡಿಸುತ್ತಿದೆ. ಇದು ಅಡಿಕೆ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುತ್ತಿದೆ. ಅಡಿಕೆ ಬೇಡಿಕೆ ಇರುವಿಕೆಯ ಬಗ್ಗೆ ಮಾಹಿತಿ ಇದ್ದರೂ ಅನಧಿಕೃತವಾಗಿ ಈಗ ಅಡಿಕೆ ಆಮದು ಸುದ್ದಿಗಳೇ ಹೆಚ್ಚಾಗಿದೆ. ಹೀಗಾಗಿ ಅಡಿಕೆ ಆಮದು ಬಗ್ಗೆ ಸೂಕ್ತವಾದ ಕ್ರಮ ಅಗತ್ಯ ಇದೆ ಎಂದು ಅಡಿಕೆ ಬೆಳೆಗಾರರ ಸಂಘವು ಮನವಿಯಲ್ಲಿ ಒತ್ತಾಯಿಸಿದೆ.

 

ದಕ್ಷಿಣ ಕನ್ನಡ ಸೇರಿದಂತೆ ಅಡಿಕೆ ಬೆಳೆಯುವ ನಾಡಲ್ಲಿ ಈಗ ಧಾರಣೆ ಏರಿಳಿತವು ಕೃಷಿಕರ ಮನಸ್ಸಿನಲ್ಲಿ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ.ಹೀಗಾಗಿ ತಕ್ಷಣವೇ ಸರ್ಕಾರ , ಜನಪ್ರತಿನಿಧಿಗಳು ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಕಾರಣವಾಗಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ಮನವಿಯಲ್ಲಿ ಒತ್ತಾಯಿಸಿದ್ದಾರೆ.

For the past few days, news about the import of Arecanuts is coming in various media. Along with this, there is a difference in the arecanut market. Therefore, the All India Arecanut Growers Association has demanded that the government should immediately take appropriate action to stop the import of arecanut. It has urged the Prime Minister and Chief Ministers and District MPs in this regard through a letter.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

17 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

18 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

19 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago