Advertisement
MIRROR FOCUS

ಅಡಿಕೆ ಆಮದು ತಡೆಗೆ ತಕ್ಷಣವೇ ಸೂಕ್ತ ಕ್ರಮಕ್ಕೆ ಬೆಳೆಗಾರರ ಸಂಘ ಒತ್ತಾಯ

Share

ಕಳೆದ ಕೆಲವು ದಿನಗಳಿಂದ ಅಡಿಕೆ ಆಮದು ಬಗ್ಗೆ ಸುದ್ದಿಗಳು ವಿವಿಧ ಮಾಧ್ಯಮಗಳ ಮೂಲಕ ಬೆಳಕಿಗೆ ಬರುತ್ತಿದೆ.ಇದರ ಜೊತೆಗೇ ಅಡಿಕೆ ಮಾರುಕಟ್ಟೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಹೀಗಾಗಿ ಅಡಿಕೆ ಆಮದು ತಡೆಗೆ ಸರ್ಕಾರಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ. ಈ ಬಗ್ಗೆ ಪ್ರಧಾನಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮತ್ತು ಜಿಲ್ಲೆ ಸಂಸದರಿಗೆ ಪತ್ರದ ಮೂಲಕ ಒತ್ತಾಯಿಸಿದೆ.

ಅಡಿಕೆ ಬೆಳೆಗಾರರು ಈಗಾಗಲೇ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಕೆಲವು ಸಮಯಗಳಿಂದ ಉತ್ತಮ ಧಾರಣೆಯ ಕಾರಣದಿಂದ ಕೃಷಿ ಕೆಲಸಗಳು ಸರಾಗ ಸಾಗುತ್ತಿತ್ತು. ಕೃಷಿ ಬೆಳೆವಣಿಗೆಗೂ ಕಾರಣವಾಗಿತ್ತು. ಧಾರಣೆ ಏರಿಕೆಯ ಬೆನ್ನಲ್ಲೇ ಅಡಿಕೆ ಆಮದು ಸುದ್ದಿಗಳು ಕೇಳಿಬರುತ್ತಿತ್ತು. ಅಲ್ಲಲ್ಲಿ ಇಲಾಖೆಗಳು ಪತ್ತೆ ಕಾರ್ಯ ಮಾಡುತ್ತಿದ್ದರು. ಇದೀಗ ಅಡಿಕೆ ಆಮದು ಸುದ್ದಿಗಳು ಮತ್ತೆ ಅಡಿಕೆ ಬೆಳೆಗಾರರನ್ನು ಕಂಗೆಡಿಸುತ್ತಿದೆ. ಇದು ಅಡಿಕೆ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುತ್ತಿದೆ. ಅಡಿಕೆ ಬೇಡಿಕೆ ಇರುವಿಕೆಯ ಬಗ್ಗೆ ಮಾಹಿತಿ ಇದ್ದರೂ ಅನಧಿಕೃತವಾಗಿ ಈಗ ಅಡಿಕೆ ಆಮದು ಸುದ್ದಿಗಳೇ ಹೆಚ್ಚಾಗಿದೆ. ಹೀಗಾಗಿ ಅಡಿಕೆ ಆಮದು ಬಗ್ಗೆ ಸೂಕ್ತವಾದ ಕ್ರಮ ಅಗತ್ಯ ಇದೆ ಎಂದು ಅಡಿಕೆ ಬೆಳೆಗಾರರ ಸಂಘವು ಮನವಿಯಲ್ಲಿ ಒತ್ತಾಯಿಸಿದೆ.

 

ದಕ್ಷಿಣ ಕನ್ನಡ ಸೇರಿದಂತೆ ಅಡಿಕೆ ಬೆಳೆಯುವ ನಾಡಲ್ಲಿ ಈಗ ಧಾರಣೆ ಏರಿಳಿತವು ಕೃಷಿಕರ ಮನಸ್ಸಿನಲ್ಲಿ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ.ಹೀಗಾಗಿ ತಕ್ಷಣವೇ ಸರ್ಕಾರ , ಜನಪ್ರತಿನಿಧಿಗಳು ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಕಾರಣವಾಗಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ಮನವಿಯಲ್ಲಿ ಒತ್ತಾಯಿಸಿದ್ದಾರೆ.

For the past few days, news about the import of Arecanuts is coming in various media. Along with this, there is a difference in the arecanut market. Therefore, the All India Arecanut Growers Association has demanded that the government should immediately take appropriate action to stop the import of arecanut. It has urged the Prime Minister and Chief Ministers and District MPs in this regard through a letter.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

3 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

11 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

11 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

13 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

20 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

20 hours ago