ಸುದ್ದಿಗಳು

ವಿಪರೀತ ಅಡಿಕೆ ಕಳ್ಳಸಾಗಾಣಿಕೆ | ತ್ರಿಪುರಾ-ಮಿಜೋರಾಂನಲ್ಲೂ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಮಧ್ಯಪ್ರವೇಶಕ್ಕೆ ಒತ್ತಾಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತೈವಾನ್, ಥೈಲ್ಯಾಂಡ್, ಮ್ಯಾನ್ಮಾರ್ ಮೊದಲಾದ ದೇಶಗಳಿಂದ ಅಡಿಕೆ ಕಳ್ಳಸಾಗಾಣಿಗೆ ಅವ್ಯಾಹತವಾಗಿ ನಡೆಯುತ್ತಿರುವ ಕಾರಣದಿಂದ ತ್ರಿಪುರಾ ಹಾಗೂ ಮಿಜೋರಾಂ ಅಡಿಕೆ ಬೆಳೆಗಾರರಿಗೂ(Arecanut Growers)  ಈಗ ಸಂಕಷ್ಟ ಎದುರಾಗಿದೆ. ಹೀಗಾಗಿ ತಕ್ಷಣವೇ  ತ್ರಿಪುರಾ, ಮಿಜೋರಾಂ ಮತ್ತು ಅಸ್ಸಾಂ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು ಎಂದು ಅಡಿಕೆ ಬೆಳೆಗಾರರು ಆಗ್ರಹಿಸಿದ್ದಾರೆ.

Advertisement
Advertisement

ವಿದೇಶಿ ಅಡಿಕೆಯು ಮ್ಯಾನ್ಮಾರ್‌ ಮೂಲಕ ಅಸ್ಸಾಂ ಮಾರ್ಗದಲ್ಲಿ  ಹಾಗೂ ಈಚೆಗೆ ಒಳದಾರಿಯ ಮೂಲಕ ಅಡಿಕೆ ಕಳ್ಳಸಾಗಾಟ ವಿಪರೀತವಾಗಿ ನಡೆಯುತ್ತಿದೆ. ಹೀಗಾಗಿ ತ್ರಿಪುರಾ ಮತ್ತು ಮಿಜೋರಾಂನ ಅಡಿಕೆ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಸಾಗಿಸಲು ಮತ್ತು ಮಾರಾಟ ಮಾಡಲು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ತ್ರಿಪುರಾ ಮತ್ತು ಮಿಜೋರಾಂನ ಕೃಷಿಕರಿಗೆ  ಅಡಿಕೆ ಪ್ರಮುಖ ಬೆಳೆಯಾಗಿದೆ. ಈಗ ಪೊಲೀಸ್‌ ದಾಳಿ ಹಾಗೂ ಕೆಲವು ಕಡೆ ಗ್ರಾಮೀಣ ಭಾಗಗಳಲ್ಲಿಯೂ ಅಕ್ರಮ ದಾಸ್ತಾನು ಕಾರಣಗಳಿಂದ ಕೃಷಿಕರ ವಸ್ತುಗಳ ಮಾರಾಟಕ್ಕೂ ಸಂಕಷ್ಟವಾಗಿದೆ. ಕೃಷಿಕರು ನಷ್ಟದತ್ತ ಮುಖ ಮಾಡುತ್ತಿದ್ದಾರೆ.  ತ್ರಿಪುರಾ ಮತ್ತು ಮಿಜೋರಾಂ ರೈತರು ಅಡಿಕೆ ಬೆಳೆಯುತ್ತಿದ್ದರೆ, ವ್ಯಾಪಾರಿಗಳು  ಖರೀದಿಸಲು ಮತ್ತು ಮಾರಾಟ ಮಾಡಲು ಸಂಕಷ್ಟ ಪಡಬೇಕಾಗಿದೆ. ಸದ್ಯ ಅಸ್ಸಾಂ ರಾಜ್ಯವನ್ನು ಬಳಸಬೇಕಾಗಿದೆ. ಆದರೆ ಸಾಗಾಟಕ್ಕೆ ಸಂಕಷ್ಟವಾಗಿದೆ. ಈ ಕಾರಣದಿಂದ ಅಡಿಕೆ ಹಾಳಾಗುವ ಸ್ಥಿತಿ ಬಂದಿದೆ. ಹೀಗಾಗಿ ಅಡಿಕೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಈ ಸಂಕಷ್ಟವನ್ನು ದೂರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈಗಾಗಲೇ  ತ್ರಿಪುರಾ, ಮಿಜೋರಾಂ ಅಡಿಕೆ ಬೆಳೆಗಾರರು ತಮ್ಮ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರಲು ವಿವಿಧ ಪ್ರತಿಭಟನೆ, ಆಂದೋಲನ ಮಾಡಿದ್ದರು. ಸಂಬಂಧಿಸಿದ ಇಲಾಖೆ ಕೃಷಿಕರಿಗೆ ಗುರುತಿನ ಚೀಟಿ ನೀಡುತ್ತದೆ ಎಂದೂ ಹೇಳಿತ್ತು. ಆದರೆ ಯಾವುದೂ ಜಾರಿಯಾಗಿಲ್ಲ ಎಂದು ಅಡಿಕೆ ಬೆಳೆಗಾರರು ಆರೋಪಿಸಿದ್ದಾರೆ.ತ್ರಿಪುರಾ, ಮಿಜೋರಾಂ ಮತ್ತು ಅಸ್ಸಾಂ ಸರ್ಕಾರಗಳ ನಿಷ್ಕ್ರಿಯತೆ ಮತ್ತು ಕಾಳಜಿಯ ಕೊರತೆಯಿಂದಾಗಿ ಅಡಿಕೆ ಕೃಷಿ ಅಪಾಯವನ್ನು ಎದುರಿಸುತ್ತಿದೆ ಎಂದು ಕೃಷಿಕರು ಆರೋಪಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

5 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

6 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

6 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

12 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

13 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

20 hours ago