Advertisement
ಸುದ್ದಿಗಳು

ವಿಪರೀತ ಅಡಿಕೆ ಕಳ್ಳಸಾಗಾಣಿಕೆ | ತ್ರಿಪುರಾ-ಮಿಜೋರಾಂನಲ್ಲೂ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಮಧ್ಯಪ್ರವೇಶಕ್ಕೆ ಒತ್ತಾಯ |

Share

ತೈವಾನ್, ಥೈಲ್ಯಾಂಡ್, ಮ್ಯಾನ್ಮಾರ್ ಮೊದಲಾದ ದೇಶಗಳಿಂದ ಅಡಿಕೆ ಕಳ್ಳಸಾಗಾಣಿಗೆ ಅವ್ಯಾಹತವಾಗಿ ನಡೆಯುತ್ತಿರುವ ಕಾರಣದಿಂದ ತ್ರಿಪುರಾ ಹಾಗೂ ಮಿಜೋರಾಂ ಅಡಿಕೆ ಬೆಳೆಗಾರರಿಗೂ(Arecanut Growers)  ಈಗ ಸಂಕಷ್ಟ ಎದುರಾಗಿದೆ. ಹೀಗಾಗಿ ತಕ್ಷಣವೇ  ತ್ರಿಪುರಾ, ಮಿಜೋರಾಂ ಮತ್ತು ಅಸ್ಸಾಂ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು ಎಂದು ಅಡಿಕೆ ಬೆಳೆಗಾರರು ಆಗ್ರಹಿಸಿದ್ದಾರೆ.

Advertisement

ವಿದೇಶಿ ಅಡಿಕೆಯು ಮ್ಯಾನ್ಮಾರ್‌ ಮೂಲಕ ಅಸ್ಸಾಂ ಮಾರ್ಗದಲ್ಲಿ  ಹಾಗೂ ಈಚೆಗೆ ಒಳದಾರಿಯ ಮೂಲಕ ಅಡಿಕೆ ಕಳ್ಳಸಾಗಾಟ ವಿಪರೀತವಾಗಿ ನಡೆಯುತ್ತಿದೆ. ಹೀಗಾಗಿ ತ್ರಿಪುರಾ ಮತ್ತು ಮಿಜೋರಾಂನ ಅಡಿಕೆ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಸಾಗಿಸಲು ಮತ್ತು ಮಾರಾಟ ಮಾಡಲು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ತ್ರಿಪುರಾ ಮತ್ತು ಮಿಜೋರಾಂನ ಕೃಷಿಕರಿಗೆ  ಅಡಿಕೆ ಪ್ರಮುಖ ಬೆಳೆಯಾಗಿದೆ. ಈಗ ಪೊಲೀಸ್‌ ದಾಳಿ ಹಾಗೂ ಕೆಲವು ಕಡೆ ಗ್ರಾಮೀಣ ಭಾಗಗಳಲ್ಲಿಯೂ ಅಕ್ರಮ ದಾಸ್ತಾನು ಕಾರಣಗಳಿಂದ ಕೃಷಿಕರ ವಸ್ತುಗಳ ಮಾರಾಟಕ್ಕೂ ಸಂಕಷ್ಟವಾಗಿದೆ. ಕೃಷಿಕರು ನಷ್ಟದತ್ತ ಮುಖ ಮಾಡುತ್ತಿದ್ದಾರೆ.  ತ್ರಿಪುರಾ ಮತ್ತು ಮಿಜೋರಾಂ ರೈತರು ಅಡಿಕೆ ಬೆಳೆಯುತ್ತಿದ್ದರೆ, ವ್ಯಾಪಾರಿಗಳು  ಖರೀದಿಸಲು ಮತ್ತು ಮಾರಾಟ ಮಾಡಲು ಸಂಕಷ್ಟ ಪಡಬೇಕಾಗಿದೆ. ಸದ್ಯ ಅಸ್ಸಾಂ ರಾಜ್ಯವನ್ನು ಬಳಸಬೇಕಾಗಿದೆ. ಆದರೆ ಸಾಗಾಟಕ್ಕೆ ಸಂಕಷ್ಟವಾಗಿದೆ. ಈ ಕಾರಣದಿಂದ ಅಡಿಕೆ ಹಾಳಾಗುವ ಸ್ಥಿತಿ ಬಂದಿದೆ. ಹೀಗಾಗಿ ಅಡಿಕೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಈ ಸಂಕಷ್ಟವನ್ನು ದೂರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈಗಾಗಲೇ  ತ್ರಿಪುರಾ, ಮಿಜೋರಾಂ ಅಡಿಕೆ ಬೆಳೆಗಾರರು ತಮ್ಮ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರಲು ವಿವಿಧ ಪ್ರತಿಭಟನೆ, ಆಂದೋಲನ ಮಾಡಿದ್ದರು. ಸಂಬಂಧಿಸಿದ ಇಲಾಖೆ ಕೃಷಿಕರಿಗೆ ಗುರುತಿನ ಚೀಟಿ ನೀಡುತ್ತದೆ ಎಂದೂ ಹೇಳಿತ್ತು. ಆದರೆ ಯಾವುದೂ ಜಾರಿಯಾಗಿಲ್ಲ ಎಂದು ಅಡಿಕೆ ಬೆಳೆಗಾರರು ಆರೋಪಿಸಿದ್ದಾರೆ.ತ್ರಿಪುರಾ, ಮಿಜೋರಾಂ ಮತ್ತು ಅಸ್ಸಾಂ ಸರ್ಕಾರಗಳ ನಿಷ್ಕ್ರಿಯತೆ ಮತ್ತು ಕಾಳಜಿಯ ಕೊರತೆಯಿಂದಾಗಿ ಅಡಿಕೆ ಕೃಷಿ ಅಪಾಯವನ್ನು ಎದುರಿಸುತ್ತಿದೆ ಎಂದು ಕೃಷಿಕರು ಆರೋಪಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

26 minutes ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

6 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

11 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

11 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

11 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

23 hours ago