Advertisement
ಸುದ್ದಿಗಳು

ವಿಪರೀತ ಅಡಿಕೆ ಕಳ್ಳಸಾಗಾಣಿಕೆ | ತ್ರಿಪುರಾ-ಮಿಜೋರಾಂನಲ್ಲೂ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಮಧ್ಯಪ್ರವೇಶಕ್ಕೆ ಒತ್ತಾಯ |

Share

ತೈವಾನ್, ಥೈಲ್ಯಾಂಡ್, ಮ್ಯಾನ್ಮಾರ್ ಮೊದಲಾದ ದೇಶಗಳಿಂದ ಅಡಿಕೆ ಕಳ್ಳಸಾಗಾಣಿಗೆ ಅವ್ಯಾಹತವಾಗಿ ನಡೆಯುತ್ತಿರುವ ಕಾರಣದಿಂದ ತ್ರಿಪುರಾ ಹಾಗೂ ಮಿಜೋರಾಂ ಅಡಿಕೆ ಬೆಳೆಗಾರರಿಗೂ(Arecanut Growers)  ಈಗ ಸಂಕಷ್ಟ ಎದುರಾಗಿದೆ. ಹೀಗಾಗಿ ತಕ್ಷಣವೇ  ತ್ರಿಪುರಾ, ಮಿಜೋರಾಂ ಮತ್ತು ಅಸ್ಸಾಂ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು ಎಂದು ಅಡಿಕೆ ಬೆಳೆಗಾರರು ಆಗ್ರಹಿಸಿದ್ದಾರೆ.

ವಿದೇಶಿ ಅಡಿಕೆಯು ಮ್ಯಾನ್ಮಾರ್‌ ಮೂಲಕ ಅಸ್ಸಾಂ ಮಾರ್ಗದಲ್ಲಿ  ಹಾಗೂ ಈಚೆಗೆ ಒಳದಾರಿಯ ಮೂಲಕ ಅಡಿಕೆ ಕಳ್ಳಸಾಗಾಟ ವಿಪರೀತವಾಗಿ ನಡೆಯುತ್ತಿದೆ. ಹೀಗಾಗಿ ತ್ರಿಪುರಾ ಮತ್ತು ಮಿಜೋರಾಂನ ಅಡಿಕೆ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಸಾಗಿಸಲು ಮತ್ತು ಮಾರಾಟ ಮಾಡಲು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ತ್ರಿಪುರಾ ಮತ್ತು ಮಿಜೋರಾಂನ ಕೃಷಿಕರಿಗೆ  ಅಡಿಕೆ ಪ್ರಮುಖ ಬೆಳೆಯಾಗಿದೆ. ಈಗ ಪೊಲೀಸ್‌ ದಾಳಿ ಹಾಗೂ ಕೆಲವು ಕಡೆ ಗ್ರಾಮೀಣ ಭಾಗಗಳಲ್ಲಿಯೂ ಅಕ್ರಮ ದಾಸ್ತಾನು ಕಾರಣಗಳಿಂದ ಕೃಷಿಕರ ವಸ್ತುಗಳ ಮಾರಾಟಕ್ಕೂ ಸಂಕಷ್ಟವಾಗಿದೆ. ಕೃಷಿಕರು ನಷ್ಟದತ್ತ ಮುಖ ಮಾಡುತ್ತಿದ್ದಾರೆ.  ತ್ರಿಪುರಾ ಮತ್ತು ಮಿಜೋರಾಂ ರೈತರು ಅಡಿಕೆ ಬೆಳೆಯುತ್ತಿದ್ದರೆ, ವ್ಯಾಪಾರಿಗಳು  ಖರೀದಿಸಲು ಮತ್ತು ಮಾರಾಟ ಮಾಡಲು ಸಂಕಷ್ಟ ಪಡಬೇಕಾಗಿದೆ. ಸದ್ಯ ಅಸ್ಸಾಂ ರಾಜ್ಯವನ್ನು ಬಳಸಬೇಕಾಗಿದೆ. ಆದರೆ ಸಾಗಾಟಕ್ಕೆ ಸಂಕಷ್ಟವಾಗಿದೆ. ಈ ಕಾರಣದಿಂದ ಅಡಿಕೆ ಹಾಳಾಗುವ ಸ್ಥಿತಿ ಬಂದಿದೆ. ಹೀಗಾಗಿ ಅಡಿಕೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಈ ಸಂಕಷ್ಟವನ್ನು ದೂರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈಗಾಗಲೇ  ತ್ರಿಪುರಾ, ಮಿಜೋರಾಂ ಅಡಿಕೆ ಬೆಳೆಗಾರರು ತಮ್ಮ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರಲು ವಿವಿಧ ಪ್ರತಿಭಟನೆ, ಆಂದೋಲನ ಮಾಡಿದ್ದರು. ಸಂಬಂಧಿಸಿದ ಇಲಾಖೆ ಕೃಷಿಕರಿಗೆ ಗುರುತಿನ ಚೀಟಿ ನೀಡುತ್ತದೆ ಎಂದೂ ಹೇಳಿತ್ತು. ಆದರೆ ಯಾವುದೂ ಜಾರಿಯಾಗಿಲ್ಲ ಎಂದು ಅಡಿಕೆ ಬೆಳೆಗಾರರು ಆರೋಪಿಸಿದ್ದಾರೆ.ತ್ರಿಪುರಾ, ಮಿಜೋರಾಂ ಮತ್ತು ಅಸ್ಸಾಂ ಸರ್ಕಾರಗಳ ನಿಷ್ಕ್ರಿಯತೆ ಮತ್ತು ಕಾಳಜಿಯ ಕೊರತೆಯಿಂದಾಗಿ ಅಡಿಕೆ ಕೃಷಿ ಅಪಾಯವನ್ನು ಎದುರಿಸುತ್ತಿದೆ ಎಂದು ಕೃಷಿಕರು ಆರೋಪಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

6 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

8 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

9 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

10 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

10 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

18 hours ago